Mango Mela: ಮಾವು ಮತ್ತು ಹಲಸು ಮೇಳ: ವಿವಿಧ ಬಗೆಯ ಮಾವಿನ ಹಣ್ಣಿನ ಬೆಲೆ ಎಷ್ಟಿದೆ?
ಅಕಾಲಿಕ ಮಳೆ ಮತ್ತು ಬಿಸಿಗಾಳಿಯ ಪರಿಣಾಮದಿಂದ ಮಾವಿನ ಇಳುವರಿಯಲ್ಲಿ ಗಣನೀಯ ಕುಸಿತ ಕಾಣುವ ಆತಂಕದ ನಡುವೆಯೂ ಬೆಂಗಳೂರಿನಲ್ಲಿ ಮಾವು ಮತ್ತು ಹಲಸು ಮೇಳಕ್ಕೆ ಚಾಲನೆ ಸಿಕ್ಕಿದೆ. ಮೇ 26ರಂದು ಲಾಲ್ಬಾಗ್ನಲ್ಲಿ ಹಲಸು ಮತ್ತು ಮಾವು ಮೇಳ ಆರಂಭವಾಗಿದೆ.
ಜೂನ್ 4ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಹಲಸು ಮತ್ತು ಮಾವು ಮೇಳ ನಡೆಯಲಿದೆ. ನಗರದ ಎಲ್ಲಾ ಹಾಪ್ಕಾಮ್ಸ್ಗಳಲ್ಲಿ ರಿಯಾಯಿತಿ ದರದಲ್ಲಿ ಮಾವು ಮತ್ತು ಹಲಸಿನ ಹಣ್ಣುಗಳನ್ನು ಮಾರಾಟ ಮಾಡುವುದಾಗಿ ಹಾಪಕಾಮ್ಸ್ ವ್ಯವಸ್ಥಾಪ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಮೇ ತಿಂಗಳ ಆರಂಭದಲ್ಲಿ ರಾಜ್ಯದಲ್ಲಿ ಮಾವಿನ ಇಳುವರಿ ಕಡಿಮೆಯಾಗಿರುವುದರಿಂದ ಮೇಳ ನಡೆಯುವುದು ಅನುಮಾನ ಎನ್ನುವ ಆತಂಕ ಮಾವು ಪ್ರಿಯರನ್ನು ಕಾಡಿತ್ತಾದರೂ, ಅಂತಿಮವಾಗಿ ಮಾವು ಮಾರುಕಟ್ಟೆಗೆ ಬರುತ್ತಿರುವುದರಿಂದ ಮಾವು ಮೇಳ ನಡೆಯುತ್ತಿದೆ.
ರೈತರಿಂದ ನೇರ ಮಾರಾಟ
ಲಾಲ್ಬಾಗ್ನಲ್ಲಿ ಪ್ರತಿ ವರ್ಷದಂತೆ ಈ ವರ್ಷ ಕೂಡ ಮಾವು ಮೇಳ ನಡೆಯುತ್ತಿದ್ದು, ರಾಜ್ಯದ ವಿವಿಧ ಭಾಗಗಳಿಂದ ರೈತರು ಆಗಮಿಸಿ ತಾವು ಬೆಳೆದ ವಿವಿಧ ಬಗೆ ಮಾವು ಮತ್ತು ಹಲಸಿನ ಹಣ್ಣುಗಳನ್ನು ಮಾರಾಟ ಮಾಡುತ್ತಾರೆ. ಅದರಲ್ಲೂ ಹಣ್ಣುಗಳ ರಾಜ ಮಾವಿಗೆ ಎಲ್ಲಿಲ್ಲದ ಬೇಡಿಕೆ ಇರುತ್ತದೆ. ರೈತರು ಮತ್ತು ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಿಂದ ತೋಟಾಗಾರಿಕೆ ಇಲಾಖೆಯೇ ಮಾವಿನ ಹಣ್ಣಿಗೆ ದರ ನಿಗದಿ ಮಾಡುತ್ತದೆ.
ಮಾವು ಮೇಳದಲ್ಲಿ 20ಕ್ಕೂ ಅಧಿಕ ತಳಿಯ ಮಾವಿನ ಹಣ್ಣುಗಳನ್ನು ನೋಡಬಹುದಾಗಿದೆ. ಆಮ್ರಪಾಲಿ, ತೋತಾಪುರಿ, ರಸಪೂರಿ, ಬಾದಾಮಿ, ಮಲ್ಲಿಕಾ, ಬಂಗನಪಲ್ಲಿ, ಸಿಂದೂರ, ದಶಹರಿ, ಮಲಗೋವಾ, ಇಮಾಮ್ ಪಸಂದ್, ಕಾಲಾಪಾಡ್, ಕೇಸರ್, ಸಕ್ಕರೆಗುತ್ತಿ ಸೇರಿದಂತೆ ಹಲವು ಬಗೆಯ ಮಾವಿನ ಹಣ್ಣು ಸವಿಯಲು ಸಿಗುತ್ತದೆ.
ಈ ಬಾರಿ ಅತಿಯಾದ ಬಿಸಿಲು, ಅಕಾಲಿಕ ಮಳೆಯ ಕಾರಣ ಇಳುವರಿ ಕೂಡ ಕಡಿಮೆಯಾಗಿದ್ದು, ಬೆಲೆ ಸ್ವಲ್ಪ ಅಧಿಕವಾಗಿದೆ. 35 ರುಪಾಯಿಗಳಿಂದ 165 ರುಪಾಯಿವರೆಗೆ ಬೆಲೆ ನಿಗದಿಪಡಿಸಲಾಗಿದೆ. ಇಮಾಮ್ ಪಸಂದ್ ತಳಿಯ ಮಾವಿನ ಹಣ್ಣಿಗೆ ಅಧಿಕ ದರವಿದೆ.
ವಿವಿಧ ತಳಿಯ ಮಾವಿನ ಹಣ್ಣುಗಳ ಬೆಲೆ
ತೋತಾಪುರಿ - 35 ರುಪಾಯಿ, ಸೆಂದೂರ- 58 ರುಪಾಯಿ, ಬಂಗನಪಲ್ಲಿ - 58 ರುಪಾಯಿ, ಮಲ್ಲಿಕಾ- 120 ರುಪಾಯಿ, ರಸಪುರಿ - 125 ರುಪಾಯಿ, ಬಾದಾಮಿ -148 ರುಪಾಯಿ, ಕಾಲಾಪಾಡು -154 ರುಪಾಯಿ, ಅಲ್ಫೊನ್ಸೊ 155 ರುಪಾಯಿ, ಮಲಗೋವಾ - 160 ರುಪಾಯಿ, ಇಮಾಮ್ ಪಸಂದ್ - 165 ರುಪಾಯಿಗೆ ಮಾರಾಟ ಮಾಡಲಾಗುತ್ತಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications