ಮೇ 26 ರಿಂದ ಲಾಲ್ಬಾಗ್ನಲ್ಲಿ ಮಾವುಮೇಳ: ಬಗೆ ಬಗೆಯ ಮಾವು ತಿನ್ನುವ ಅವಕಾಶ
ಬೆಂಗಳೂರು ಮೇ 11: ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣಕ್ಕೆ ಲಾಲ್ಬಾಗ್ನಲ್ಲಿ ಮಾವು ಮೇಳ ಇಲ್ಲದೇ ಜನ ಬೇಸರಗೊಂಡಿದ್ದರು ಆದರೀಗ ಅದಕ್ಕೆ ಕಾಲ ಕೂಡಿ ಬಂದಿದೆ. ಹೀಗಾಗಿ 26ಮೇ ರಿಂದ ಲಾಲ್ಬಾಗ್ನಲ್ಲಿ ಮಾವು ಮೇಳ ನಡೆಸಲು ತೋಟಗಾರಿಕೆ ಇಲಾಖೆ ನಿರ್ಧರಿಸಿದೆ.

ಲಾಲ್ಬಾಗ್ನಲ್ಲಿ ಮಾವು ಮೇಳ
ಬೆಂಗಳೂರಿನ ಲಾಲ್ ಬಾಗ್ ಮತ್ತು ಕಬ್ಬನ್ ಉದ್ಯಾನವನದಲ್ಲಿ ಮೇ. 26ರಿಂದ ಮಾವು ಮೇಳವನ್ನು ಆಯೋಜಿಸಲಾಗಿದೆ. ಈ ಕುರಿತು ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಕೆ. ವಿ ನಾಗರಾಜ್, ವ್ಯವಸ್ಥಾಪಕ ನಿರ್ದೇಶಕ ಸಿ. ಜಿ ನಾಗರಾಜ್ ಮತ್ತು ರಾಜ್ಯ ತೋಟಗಾರಿಕೆ ಇಲಾಖೆ ನಿರ್ದೇಶಕ ನಾಗೇಂದ್ರ ಪ್ರಸಾದ್ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ, ಈ ತೀರ್ಮಾನ ಕೈಗೊಳ್ಳಲಾಗಿದೆ.

ಆನ್ಲೈನ್ ಬುಕ್ಕಿಂಗ್ ಮಾಡಬಹುದು
ಕಳೆದ ಮೂರು ವರ್ಷಗಳ ಹಿಂದೆ ಅಂಚೆ ಮೂಲಕ ಖರೀದಿ ಯೋಜನೆ ಜಾರಿಗೆ ತರಲಾಗಿತ್ತು. ಈ ವರ್ಷವೂ ಮೇ. 16ರಿಂದ ಬುಕ್ಕಿಂಗ್ ಮಾಡೋದಕ್ಕೆ ಅವಕಾಶ ನೀಡಲಾಗಿದೆ. ಗ್ರಾಹಕರು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಂಚೆ ಮೂಲಕ ಮಾವು ತರಿಸಿಕೊಳ್ಳಲು ಬುಕ್ಕಿಂಗ್ ಮಾಡಬಹುದಾಗಿದೆ.

ಮಾವು ಮಾರಾಟ ಹೆಚ್ಚಳ
ನಗರದ ಲಾಲ್ಬಾಗ್ ಉದ್ಯಾನದಲ್ಲಿ ಮೇಳದ ಕೇಂದ್ರ ಇರಲಿದ್ದು, ಕಬ್ಬನ್ ಪಾರ್ಕ್ನಲ್ಲಿ ಚಟುವಟಿಕೆಗಳು ಸಣ್ಣ ಪ್ರಮಾಣದಲ್ಲಿ ನಡೆಯಲಿವೆ ಎಂದು ತೋಟಗಾರಿಕೆ ಇಲಾಖೆ ಹೇಳಿದೆ. ಮಾವು ಮೇಳವು ಕಳೆದ ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ ನಡೆದಿಲ್ಲ, ಆದರೂ ಈ ಮಾವು ಮೇಳದಲ್ಲಿ ನೇರವಾಗಿ ಗ್ರಾಹಕರಿಗೆ ಮಾವಿನ ಹಣ್ಣುಗಳನ್ನು ಮಾರಾಟ ಮಾಡಬಹುದೆಂದು ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಮಾವು ಪೂರೈಕೆ ಸರಪಳಿಯು ವಿಭಿನ್ನ ದಿಕ್ಕಿನಲ್ಲಿ ವಿಸ್ತರಿಸಿದೆ ಎಂದು ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಲಿಮಿಟೆಡ್ನ (KSMDMCL) ಮೂಲಗಳು ತಿಳಿಸಿವೆ.

ಅಪಾರ್ಟ್ಮೆಂಟ್ ಸಂಘಗಳ ಜೊತೆ ಸಂಪರ್ಕ
"ನಗರಗಳ ಅಪಾರ್ಟ್ಮೆಂಟ್ ಫೆಡರೇಶನ್ಗಳೊಂದಿಗೆ ಸಂಪರ್ಕ ಹೊಂದಿದ್ದೇವೆ, ದೆಹಲಿಗೆ ಹಣ್ಣುಗಳನ್ನು ಕಳುಹಿಸಿದ್ದೇವೆ ಮತ್ತು ಮೇಳದ ಅನುಪಸ್ಥಿತಿಯು ರೈತರಿಗೆ ಹೆಚ್ಚಿನ ನಷ್ಟವನ್ನು ಉಂಟುಮಾಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಮಾವಿನ ಹಣ್ಣುಗಳನ್ನು ಮಾರಾಟ ಮಾಡುವ ಇನ್ನೊಂದು ಮಾರ್ಗವಾಗಿ ಆನ್ಲೈನ್ ಪೋರ್ಟಲ್ಗಳನ್ನು ಬಳಸಿಕೊಳ್ಳುವ ಮೂಲಕ ಮಾವಿನ ಹಣ್ಣುಗಳನ್ನು ಮಾರಾಟ ಮಾಡಲಾಗುತ್ತಿದೆ. ಇದು ರೈತರಿಗೆ ನಷ್ಟವಾಗದೇ ಅವರಿಗೆ ಹೆಚ್ಚಿನ ಉಪಾಯವಾಗಿದೆ," ಎಂದು ಕೆಎಸ್ಎಂಡಿಎಂಸಿಎಲ್ನ ವ್ಯವಸ್ಥಾಪಕ ನಿರ್ದೇಶಕ ಸಿ.ಜಿ ನಾಗರಾಜು ತಿಳಿಸಿದ್ದಾರೆ.
Recommended Video
-
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ -
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್












Click it and Unblock the Notifications