ಮೇ 26 ರಿಂದ ಲಾಲ್ಬಾಗ್ನಲ್ಲಿ ಮಾವುಮೇಳ: ಬಗೆ ಬಗೆಯ ಮಾವು ತಿನ್ನುವ ಅವಕಾಶ
ಬೆಂಗಳೂರು ಮೇ 11: ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣಕ್ಕೆ ಲಾಲ್ಬಾಗ್ನಲ್ಲಿ ಮಾವು ಮೇಳ ಇಲ್ಲದೇ ಜನ ಬೇಸರಗೊಂಡಿದ್ದರು ಆದರೀಗ ಅದಕ್ಕೆ ಕಾಲ ಕೂಡಿ ಬಂದಿದೆ. ಹೀಗಾಗಿ 26ಮೇ ರಿಂದ ಲಾಲ್ಬಾಗ್ನಲ್ಲಿ ಮಾವು ಮೇಳ ನಡೆಸಲು ತೋಟಗಾರಿಕೆ ಇಲಾಖೆ ನಿರ್ಧರಿಸಿದೆ.

ಲಾಲ್ಬಾಗ್ನಲ್ಲಿ ಮಾವು ಮೇಳ
ಬೆಂಗಳೂರಿನ ಲಾಲ್ ಬಾಗ್ ಮತ್ತು ಕಬ್ಬನ್ ಉದ್ಯಾನವನದಲ್ಲಿ ಮೇ. 26ರಿಂದ ಮಾವು ಮೇಳವನ್ನು ಆಯೋಜಿಸಲಾಗಿದೆ. ಈ ಕುರಿತು ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಕೆ. ವಿ ನಾಗರಾಜ್, ವ್ಯವಸ್ಥಾಪಕ ನಿರ್ದೇಶಕ ಸಿ. ಜಿ ನಾಗರಾಜ್ ಮತ್ತು ರಾಜ್ಯ ತೋಟಗಾರಿಕೆ ಇಲಾಖೆ ನಿರ್ದೇಶಕ ನಾಗೇಂದ್ರ ಪ್ರಸಾದ್ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ, ಈ ತೀರ್ಮಾನ ಕೈಗೊಳ್ಳಲಾಗಿದೆ.

ಆನ್ಲೈನ್ ಬುಕ್ಕಿಂಗ್ ಮಾಡಬಹುದು
ಕಳೆದ ಮೂರು ವರ್ಷಗಳ ಹಿಂದೆ ಅಂಚೆ ಮೂಲಕ ಖರೀದಿ ಯೋಜನೆ ಜಾರಿಗೆ ತರಲಾಗಿತ್ತು. ಈ ವರ್ಷವೂ ಮೇ. 16ರಿಂದ ಬುಕ್ಕಿಂಗ್ ಮಾಡೋದಕ್ಕೆ ಅವಕಾಶ ನೀಡಲಾಗಿದೆ. ಗ್ರಾಹಕರು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಂಚೆ ಮೂಲಕ ಮಾವು ತರಿಸಿಕೊಳ್ಳಲು ಬುಕ್ಕಿಂಗ್ ಮಾಡಬಹುದಾಗಿದೆ.

ಮಾವು ಮಾರಾಟ ಹೆಚ್ಚಳ
ನಗರದ ಲಾಲ್ಬಾಗ್ ಉದ್ಯಾನದಲ್ಲಿ ಮೇಳದ ಕೇಂದ್ರ ಇರಲಿದ್ದು, ಕಬ್ಬನ್ ಪಾರ್ಕ್ನಲ್ಲಿ ಚಟುವಟಿಕೆಗಳು ಸಣ್ಣ ಪ್ರಮಾಣದಲ್ಲಿ ನಡೆಯಲಿವೆ ಎಂದು ತೋಟಗಾರಿಕೆ ಇಲಾಖೆ ಹೇಳಿದೆ. ಮಾವು ಮೇಳವು ಕಳೆದ ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ ನಡೆದಿಲ್ಲ, ಆದರೂ ಈ ಮಾವು ಮೇಳದಲ್ಲಿ ನೇರವಾಗಿ ಗ್ರಾಹಕರಿಗೆ ಮಾವಿನ ಹಣ್ಣುಗಳನ್ನು ಮಾರಾಟ ಮಾಡಬಹುದೆಂದು ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಮಾವು ಪೂರೈಕೆ ಸರಪಳಿಯು ವಿಭಿನ್ನ ದಿಕ್ಕಿನಲ್ಲಿ ವಿಸ್ತರಿಸಿದೆ ಎಂದು ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಲಿಮಿಟೆಡ್ನ (KSMDMCL) ಮೂಲಗಳು ತಿಳಿಸಿವೆ.

ಅಪಾರ್ಟ್ಮೆಂಟ್ ಸಂಘಗಳ ಜೊತೆ ಸಂಪರ್ಕ
"ನಗರಗಳ ಅಪಾರ್ಟ್ಮೆಂಟ್ ಫೆಡರೇಶನ್ಗಳೊಂದಿಗೆ ಸಂಪರ್ಕ ಹೊಂದಿದ್ದೇವೆ, ದೆಹಲಿಗೆ ಹಣ್ಣುಗಳನ್ನು ಕಳುಹಿಸಿದ್ದೇವೆ ಮತ್ತು ಮೇಳದ ಅನುಪಸ್ಥಿತಿಯು ರೈತರಿಗೆ ಹೆಚ್ಚಿನ ನಷ್ಟವನ್ನು ಉಂಟುಮಾಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಮಾವಿನ ಹಣ್ಣುಗಳನ್ನು ಮಾರಾಟ ಮಾಡುವ ಇನ್ನೊಂದು ಮಾರ್ಗವಾಗಿ ಆನ್ಲೈನ್ ಪೋರ್ಟಲ್ಗಳನ್ನು ಬಳಸಿಕೊಳ್ಳುವ ಮೂಲಕ ಮಾವಿನ ಹಣ್ಣುಗಳನ್ನು ಮಾರಾಟ ಮಾಡಲಾಗುತ್ತಿದೆ. ಇದು ರೈತರಿಗೆ ನಷ್ಟವಾಗದೇ ಅವರಿಗೆ ಹೆಚ್ಚಿನ ಉಪಾಯವಾಗಿದೆ," ಎಂದು ಕೆಎಸ್ಎಂಡಿಎಂಸಿಎಲ್ನ ವ್ಯವಸ್ಥಾಪಕ ನಿರ್ದೇಶಕ ಸಿ.ಜಿ ನಾಗರಾಜು ತಿಳಿಸಿದ್ದಾರೆ.
Recommended Video
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications