ಬೆಂಗಳೂರು: ಮೇ.23ರಿಂದ ಮಾವು ಹಲಸಿನ ಮೇಳ
ಬೆಂಗಳೂರು, ಮೇ.12: ನಗರದ ಲಾಲ್ಬಾಗ್ನಲ್ಲಿ ಮೇ. 23ರಿಂದ ಒಂದು ತಿಂಗಳವರೆಗೆ ರಾಸಾಯನಿಕ ಮುಕ್ತ ಮಾವು ಹಾಗೂ ಹಲಸಿನ ಹಣ್ಣುಗಳ ಮೇಳವನ್ನು ಆಯೋಜಿಸಲಾಗಿದೆ.
ಬೆಳೆಗಾರರು ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸಲು ರಾಜ್ಯ ತೋಟಗಾರಿಕಾ ಇಲಾಖೆ ಈ ಮೇಳವನ್ನು ಆಯೋಜಿಸಿದೆ.ರಾಸಾಯನಿಕ ಮುಕ್ತ ತಾಜಾ ಹಣ್ಣುಗಳು ನ್ಯಾಯಯುತ ಬೆಲೆಗೆ ಸಿಗುವಂತೆ ಮಾಡುವುದು ಮೇಳದ ಮುಖ್ಯ ಉದ್ದೇಶ.
ಲಾಲ್ಬಾಗ್ನ ಗಾಜಿನಮನೆ ಮುಂಭಾಗದಲ್ಲಿ ನಡೆಯುವ ಮೇಳದಲ್ಲಿ ಸುಮಾರು 12 ಬಗೆಯ ವಾಣಿಜ್ಯ ಮಾವಿನ ತಳಿಗಳು, ಲಾಲ್ಬಾಗ್ನಲ್ಲೇ ಬೆಳೆದಿರುವ 20 ಬಗೆಯ ಪಾರಂಪರಿಕ ಮಾವಿನ ತಳಿಗಳು, ಜೊತೆಗೆ ಉಪ್ಪಿನಕಾಯಿಗೆ ಬಳಸುವ ಮಿಡಿ ಮಾವುಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಸಲಾಗಿದೆ.

ಭಾರತೀಯ ತೋಟಗಾರಿಕಾ ಸಂಶೋಧನಾ ಕೇಂದ್ರ(ಐಐಎಚ್ಆರ್), ಜಿಕೆವಿಕೆ ಸಂಶೋಧಿಸಿದ ಹಲಸಿನ ತಳಿಗಳು, ರೈ ತರು ಬೆಳೆದ ನಾನಾ ರೀತಿಯ ಹಲಸಿನ ತಳಿಯ ಹಣ್ಣುಗಳನ್ನು ಮಾರಾಟ ಇಲ್ಲಿ ನಡೆಯಲಿದೆ.
ರಾಸಾಯನಿಕ ಬಳಸದೇ ಸಹಜವಾಗಿ ಮಾಗಿಸಿದ ಮಾವಿನ ಹಣ್ಣುಗಳನ್ನು ಮಾತ್ರ ಮೇಳದಲ್ಲಿ ಮಾರಾಟ ಮಾಡಲಾಗುವುದು. ಒಂದು ವೇಳೆ ರೈತರು ಮೋಸ ಮಾಡಿ ರಾಸಾಯನಿಕ ಬಳಸಿ ಮಾವನ್ನು ಹಣ್ಣು ಮಾಡಿದ್ದರೆ, ಅಂತಹ ಹಣ್ಣುಗಳ ಮಾರಾಟವನ್ನು ಸಂಪೂರ್ಣ ನಿಷೇಧಿಸಿದಲಾಗಿದೆ. ಮಾರಾಟಗಾರರಿಗೆ ಈಗಾಗಲೇ ಈ ಸೂಚನೆ ನೀಡಿದ್ದು ಸೂಚನೆ ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
ಇದೇ ಸಂದರ್ಭದಲ್ಲಿ ಮಾವು ಬೆಳೆಗೆ ಸಂಬಂಧಿಸಿದಂತೆ ವಿಚಾರ ಸಂಕಿರಣ ನಡೆಯಲಿದ್ದು, ಮಾವು ಉತ್ಪಾದನೆ ಮತ್ತು ಕೊಯ್ಲು ನಿರ್ವಹಣೆಗೆ ಸಂಬಂಧಿಸಿದಂತೆ ತಜ್ಞರು ಮಾಹಿತಿ ನೀಡಲಿದ್ದಾರೆ ಎಂದು ತೋಟಗಾರಿಕಾ ಇಲಾಖೆ ಹೇಳಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications