ಲಾಲ್ಬಾಗ್ ಉದ್ಯಾನವದಲ್ಲಿ ಮಾವು ಮೇಳ ಆಯೋಜನೆ ಬಗ್ಗೆ ಇಲಾಖೆ ಆಲೋಚನೆ
ಬೆಂಗಳೂರು, ಮೇ 01: ಕೋವಿಡ್ನಿಂದ ಬೆಂಗಳೂರು ಮಹಾನಗರದ ಜನತೆಗೆ ಮಾವು ಮೇಳವೇ ಇಲ್ಲ ಎಂಬುವುದು ಬೇಸರದ ಸಂಗತಿಯಾಗಿತ್ತು. ಆದರೆ ಮತ್ತೆ ಬೆಂಗಳೂರು ಮಹಾನಗರಿಯ ಜನತೆಗೊಂದು ಸಂತಸದ ಸುದ್ದಿ ಏನೆಂದರೆ ಎರಡು ವರ್ಷಗಳ ಬಳಿಕ ಬೆಂಗಳೂರಿನ ಲಾಲ್ಬಾಗ್ ಉದ್ಯಾನದಲ್ಲಿ ಮಾವು ಮೇಳವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ.
ತೋಟಗಾರಿಕೆ ಇಲಾಖೆ ಮಾಹಿತಿ ನೀಡಿದ್ದು, ಇದೇ ಮೇ ತಿಂಗಳು ಕೊನೆಯ ವಾರದಲ್ಲಿ ಅಥವಾ ಜೂನ್ ತಿಂಗಳಿನ ಆರಂಭದಲ್ಲಿ ಮಾವಿನ ಹಣ್ಣುಗಳ ಮೇಳವನ್ನು ನಗರದ ಲಾಲ್ಬಾಗ್ನಲ್ಲಿ ಆಯೋಜಿಸಲು ಯೋಜನೆ ರೂಪಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ. ಲಾಲ್ಬಾಗ್ ಉದ್ಯಾನದಲ್ಲಿ ಮಾವು ಮೇಳವನ್ನು ಆಯೋಜಿಸಲು ಇಲಾಖೆ ಸಿದ್ದವಾಗಿದೆ ಹಾಗೂ 2 ವರ್ಷಗಳ ನಂತರ ನಡೆಯುತ್ತಿರುವ ಈ ಮೇಳದಲ್ಲಿ 200 ಮಾವು ಬೆಳೆಗಾರರಾದ ರೈತರಿಗೆ ಹಾಗೂ ಹಣ್ಣುಗಳನ್ನು ಖರೀದಿಸಲು ಬರುವ ಗ್ರಾಹಕರು ಪ್ರಯೋಜನವನ್ನು ಪಡೆದುಕೊಳ್ಳಬಹುದು.
ನಗರದ ಲಾಲ್ಬಾಗ್ ಉದ್ಯಾನದಲ್ಲಿ ಮೇಳದ ಕೇಂದ್ರವಾಗಲಿದ್ದು, ಕಬ್ಬನ್ ಪಾರ್ಕ್ನಲ್ಲಿ ಚಟುವಟಿಕೆಗಳು ಸಣ್ಣ ಪ್ರಮಾಣದಲ್ಲಿ ನಡೆಯಲಿವೆ ಎಂದು ತೋಟಗಾರಿಕೆ ಇಲಾಖೆ ಹೇಳಿದೆ. ಮಾವು ಮೇಳವು ಕಳೆದ ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ ನಡೆದಿಲ್ಲ, ಆದರೂ ಈ ಮಾವು ಮೇಳದಲ್ಲಿ ನೇರವಾಗಿ ಗ್ರಾಹಕರಿಗೆ ಮಾವಿನ ಹಣ್ಣುಗಳನ್ನು ಮಾರಾಟ ಮಾಡಬಹುದೆಂದು ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಮಾವು ಪೂರೈಕೆ ಸರಪಳಿಯು ವಿಭಿನ್ನ ದಿಕ್ಕಿನಲ್ಲಿ ವಿಸ್ತರಿಸಿದೆ ಎಂದು ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಲಿಮಿಟೆಡ್ನ (KSMDMCL) ಮೂಲಗಳು ತಿಳಿಸಿವೆ.

ನಗರಗಳ ಅಪಾರ್ಟ್ಮೆಂಟ್ ಫೆಡರೇಶನ್ಗಳೊಂದಿಗೆ ಸಂಪರ್ಕ ಹೊಂದಿದ್ದೇವೆ, ದೆಹಲಿಗೆ ಹಣ್ಣುಗಳನ್ನು ಕಳುಹಿಸಿದ್ದೇವೆ ಮತ್ತು ಮೇಳದ ಅನುಪಸ್ಥಿತಿಯು ರೈತರಿಗೆ ಹೆಚ್ಚಿನ ನಷ್ಟವನ್ನು ಉಂಟುಮಾಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಮಾವಿನ ಹಣ್ಣುಗಳನ್ನು ಮಾರಾಟ ಮಾಡುವ ಇನ್ನೊಂದು ಮಾರ್ಗವಾಗಿ ಆನ್ಲೈನ್ ಪೋರ್ಟಲ್ಗಳನ್ನು ಬಳಸಿಕೊಳ್ಳುವ ಮೂಲಕ ಮಾವಿನ ಹಣ್ಣುಗಳನ್ನು ಮಾರಟ ಮಾಡಲಾಗುತ್ತಿದೆ. ಇದು ರೈತರಿಗೆ ನಷ್ಟವಾಗದೇ ಅವರಿಗೆ ಹೆಚ್ಚಿನ ಉಪಾಯವಾಗಿದೆ ಎಂದು ಕೆಎಸ್ಎಂಡಿಎಂಸಿಎಲ್ನ ವ್ಯವಸ್ಥಾಪಕ ನಿರ್ದೇಶಕ ಸಿ.ಜಿ ನಾಗರಾಜು ತಿಳಿಸಿದ್ದಾರೆ.

ಈ ಮೇಳದಿಂದ ಇನ್ನಷ್ಟು ಬೇಡಿಕೆಗಳು ಬಂದರೆ ಮೇಳವು ಬೆಳಗಾವಿ, ಧಾರವಾಡ, ಚಾಮರಾಜನಗರ ಮತ್ತು ರಾಮನಗರದಂತಹ ಜಿಲ್ಲೆಗಳಿಗೆ ಸ್ಥಳಗಳಿಗೆ ದೊಡ್ಡ ಪ್ರಮಾಣದ ಮಾವಿನ ಹಣ್ಣನ್ನು ಕೊಂಡೊಯ್ಯುತ್ತವೆ ಎಂದು ಅವರು ತಿಳಿಸಿದರು. ನಿಗಮವು ಕರ್ನಾಟಕದ ಕೊಪ್ಪಳ ಜಿಲ್ಲೆ ಮತ್ತು ದಕ್ಷಿಣ ಕರ್ನಾಟಕದಂತಹ ಜಿಲ್ಲೆಯಲ್ಲೂ ಮಾವು ಬೆಳೆಯದ ಪ್ರದೇಶಗಳಲ್ಲಿ ಮೇಳವನ್ನು ಆಯೋಜಿಸಲಾಗಿದೆ ಇನ್ನು ಬೇರೆಯ ಜಿಲ್ಲೆಗಳಿಂದ ಮಾವು ಮೇಳದ ಬೇಡಿಕೆಗಳು ಬಂದರೆ ಮೇಳವನ್ನು ಆಯೋಜಿಸಲು ನಿಗಮವು ಸಜ್ಜಾಗಿರುತ್ತದೆ ಎಂದು ನಿಗಮವು ತಿಳಿಸಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications