ಬಿಬಿಎಂಪಿ ಮೇಯರ್ ಮನಿಲಾ ಪ್ರವಾಸ ರದ್ದು
ಬೆಂಗಳೂರು,ಜು.24: ಕಸ ವಿಲೇವಾರಿ ಘಟಕದ ತಂತ್ರಜ್ಞಾನವನ್ನು ವೀಕ್ಷಿಸಲು ಬಿಬಿಎಂಪಿ ಮೇಯರ್ ಮತ್ತು ಅಧಿಕಾರಿಗಳ ತಂಡ ಕೈಗೊಳ್ಳಬೇಕಿದ್ದ ಮನಿಲಾ ಪ್ರವಾಸ ರದ್ದಾಗಿದೆ.
ಬಿಬಿಎಂಪಿ ಅಧಿಕಾರಿಗಳು ತಮ್ಮ ಅಧ್ಯಯನ ಪ್ರವಾಸವನ್ನು ರದ್ದು ಮಾಡಿ, ಬೆಂಗಳೂರಿಗೆ ಮನಿಲಾದಲ್ಲಿರುವ ಜಿ-20 ಎನ್ವಿರಾನ್ಮೆಂಟಲ್ ಸಲ್ಯೂಷನ್ಸ್ ಕಂಪೆನಿ ಅಧಿಕಾರಿಗಳನ್ನು ಕರೆಸಿ ಘಟಕ ಸ್ಥಾಪನೆಯ ಬಗ್ಗೆ ಗುರುವಾರ ಚರ್ಚೆ ನಡೆಸಿದ್ದಾರೆ.
ಮೇಯರ್ ಕಟ್ಟೆ ಸತ್ಯನಾರಾಯಣ, ಘನ ತ್ಯಾಜ್ಯ ನಿರ್ವಹಣೆಗಾಗಿಯೇ ವಿಶೇಷ ಆಯುಕ್ತರಾಗಿ ನೇಮಕಗೊಂಡ ದರ್ಪಣ ಜೈನ್ ಮತ್ತು ಇತರ ಅಧಿಕಾರಿಗಳಿಗೆ ಘಟಕದಲ್ಲಿರುವ ತಂತ್ರಜ್ಞಾನದ ಬಗ್ಗೆ ಮನಿಲಾ ಕಂಪೆನಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಗರದ ಕಸ ವಿಲೇವಾರಿ ಸಮಸ್ಯೆ ನಿವಾರಿಸಲು ನಾನಾ ಪ್ರಯತ್ನಗಳನ್ನು ನಡೆಸುತ್ತಿರುವ ಬಿಬಿಎಂಪಿ ಅಧಿಕಾರಿಗಳಿಗೆ 12 ದಿನಗಳ ಹಿಂದೆ ಮನಿಲಾದ ಜಿ-20 ಎನ್ವಿರಾನ್ಮೆಂಟಲ್ ಸಲ್ಯೂಷನ್ಸ್ ಕಂಪೆನಿ ಕಸ ವಿಲೇವಾರಿ ತಂತ್ರಜ್ಞಾನ ಘಟಕ ನಿರ್ಮಾಣದ ಬಗ್ಗೆ ಪವರ್ ಪಾಯಿಂಟ್ ಮೂಲಕ ವಿವರಿಸಿತ್ತು.
ಈ ಕಂಪೆನಿಯ ತಂತ್ರಜ್ಞಾನ ಬಿಬಿಎಂಪಿ ಅಧಿಕಾರಿಗಳಿಗೆ ಇಷ್ಟವಾಗಿತ್ತು. ಈ ಹಿನ್ನಲೆಯಲ್ಲಿ ಕಂಪೆನಿಯ ತಂತ್ರಜ್ಞಾನವನ್ನು ಪರಿಶೀಲಿಸಲು ಮೇಯರ್ ಸೇರಿದಂತೆ ಅಧಿಕಾರಿಗಳ ತಂಡ ಫಿಲಿಪೈನ್ಸ್ಗೆ ಹೋಗಲಿದ್ದಾರೆ ಎಂದು ಹೇಳಲಾಗುತಿತ್ತು.[ಬೆಂಗಳೂರಿನ ಕಸ ಸಮಸ್ಯೆ ನಿವಾರಿಸಲು ಮನಿಲಾ ಮಂತ್ರ]
ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟಗೊಳ್ಳುತ್ತಿದ್ದಂತೆ ಓದುಗರಿಂದ, ರಾಜಕೀಯ ಪಕ್ಷಗಳಿಂದ ವಿರೋಧ ವ್ಯಕ್ತವಾಗಿತ್ತು. ವಿರೋಧಕ್ಕೆ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಈ ಪ್ರವಾಸವನ್ನೇ ರದ್ದು ಮಾಡಿ ಮನಿಲಾದ ಕಂಪೆನಿಯ ಅಧಿಕಾರಿಗಳನ್ನು ಬೆಂಗಳೂರಿಗೆ ಕರೆಸಿ ಇದೀಗ ಘಟಕ ಸ್ಥಾಪನೆಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications