ಬಿಬಿಎಂಪಿ ಮೇಯರ್ ಮನಿಲಾ ಪ್ರವಾಸ ರದ್ದು
ಬೆಂಗಳೂರು,ಜು.24: ಕಸ ವಿಲೇವಾರಿ ಘಟಕದ ತಂತ್ರಜ್ಞಾನವನ್ನು ವೀಕ್ಷಿಸಲು ಬಿಬಿಎಂಪಿ ಮೇಯರ್ ಮತ್ತು ಅಧಿಕಾರಿಗಳ ತಂಡ ಕೈಗೊಳ್ಳಬೇಕಿದ್ದ ಮನಿಲಾ ಪ್ರವಾಸ ರದ್ದಾಗಿದೆ.
ಬಿಬಿಎಂಪಿ ಅಧಿಕಾರಿಗಳು ತಮ್ಮ ಅಧ್ಯಯನ ಪ್ರವಾಸವನ್ನು ರದ್ದು ಮಾಡಿ, ಬೆಂಗಳೂರಿಗೆ ಮನಿಲಾದಲ್ಲಿರುವ ಜಿ-20 ಎನ್ವಿರಾನ್ಮೆಂಟಲ್ ಸಲ್ಯೂಷನ್ಸ್ ಕಂಪೆನಿ ಅಧಿಕಾರಿಗಳನ್ನು ಕರೆಸಿ ಘಟಕ ಸ್ಥಾಪನೆಯ ಬಗ್ಗೆ ಗುರುವಾರ ಚರ್ಚೆ ನಡೆಸಿದ್ದಾರೆ.
ಮೇಯರ್ ಕಟ್ಟೆ ಸತ್ಯನಾರಾಯಣ, ಘನ ತ್ಯಾಜ್ಯ ನಿರ್ವಹಣೆಗಾಗಿಯೇ ವಿಶೇಷ ಆಯುಕ್ತರಾಗಿ ನೇಮಕಗೊಂಡ ದರ್ಪಣ ಜೈನ್ ಮತ್ತು ಇತರ ಅಧಿಕಾರಿಗಳಿಗೆ ಘಟಕದಲ್ಲಿರುವ ತಂತ್ರಜ್ಞಾನದ ಬಗ್ಗೆ ಮನಿಲಾ ಕಂಪೆನಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಗರದ ಕಸ ವಿಲೇವಾರಿ ಸಮಸ್ಯೆ ನಿವಾರಿಸಲು ನಾನಾ ಪ್ರಯತ್ನಗಳನ್ನು ನಡೆಸುತ್ತಿರುವ ಬಿಬಿಎಂಪಿ ಅಧಿಕಾರಿಗಳಿಗೆ 12 ದಿನಗಳ ಹಿಂದೆ ಮನಿಲಾದ ಜಿ-20 ಎನ್ವಿರಾನ್ಮೆಂಟಲ್ ಸಲ್ಯೂಷನ್ಸ್ ಕಂಪೆನಿ ಕಸ ವಿಲೇವಾರಿ ತಂತ್ರಜ್ಞಾನ ಘಟಕ ನಿರ್ಮಾಣದ ಬಗ್ಗೆ ಪವರ್ ಪಾಯಿಂಟ್ ಮೂಲಕ ವಿವರಿಸಿತ್ತು.
ಈ ಕಂಪೆನಿಯ ತಂತ್ರಜ್ಞಾನ ಬಿಬಿಎಂಪಿ ಅಧಿಕಾರಿಗಳಿಗೆ ಇಷ್ಟವಾಗಿತ್ತು. ಈ ಹಿನ್ನಲೆಯಲ್ಲಿ ಕಂಪೆನಿಯ ತಂತ್ರಜ್ಞಾನವನ್ನು ಪರಿಶೀಲಿಸಲು ಮೇಯರ್ ಸೇರಿದಂತೆ ಅಧಿಕಾರಿಗಳ ತಂಡ ಫಿಲಿಪೈನ್ಸ್ಗೆ ಹೋಗಲಿದ್ದಾರೆ ಎಂದು ಹೇಳಲಾಗುತಿತ್ತು.[ಬೆಂಗಳೂರಿನ ಕಸ ಸಮಸ್ಯೆ ನಿವಾರಿಸಲು ಮನಿಲಾ ಮಂತ್ರ]
ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟಗೊಳ್ಳುತ್ತಿದ್ದಂತೆ ಓದುಗರಿಂದ, ರಾಜಕೀಯ ಪಕ್ಷಗಳಿಂದ ವಿರೋಧ ವ್ಯಕ್ತವಾಗಿತ್ತು. ವಿರೋಧಕ್ಕೆ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಈ ಪ್ರವಾಸವನ್ನೇ ರದ್ದು ಮಾಡಿ ಮನಿಲಾದ ಕಂಪೆನಿಯ ಅಧಿಕಾರಿಗಳನ್ನು ಬೆಂಗಳೂರಿಗೆ ಕರೆಸಿ ಇದೀಗ ಘಟಕ ಸ್ಥಾಪನೆಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications