ಬೆಂಗಳೂರು : ಚೆನ್ನೈ ತಲುಪಿದ ಜೀವಂತ ಹೃದಯ
ಬೆಂಗಳೂರು, ಡಿ.19 : ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ತೆಗೆದುಕೊಂಡು ಹೋಗಿದ್ದ ಜೀವಂತ ಹೃದಯ ಚೆನ್ನೈಗೆ ತಲುಪಿದೆ. ಅಮಿತ್ ಉಪಾಧ್ಯ ಎನ್ನುವವರು ತಮ್ಮ ಮಗಳ ಹೃದಯವನ್ನು ದಾನ ಮಾಡಿದ್ದು, ಚೆನ್ನೈನಲ್ಲಿನ ಮಗುವೊಂದಕ್ಕೆ ಅದನ್ನು ಅಳವಡಿಸಲಾಗುತ್ತದೆ.
ಸಮಯ 2 ಗಂಟೆ : ಜೀವಂತ ಹೃದಯ ಚೆನ್ನೈ ತಲುಪಿದ್ದು, ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಸಮಯ 1.30 : ಜೀವಂತ ಹೃದಯ ಎಚ್ಎಎಲ್ ವಿಮಾನ ನಿಲ್ದಾಣ ತಲುಪಿದೆ.
ಸಮಯ 1.22 : ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಎಂ.ಎನ್.ಆರ್.ವಿ.ಪ್ರಸಾದ್ ನೇತೃತ್ವದಲ್ಲಿ ಸಂಚಾರಿ ಪೊಲೀಸರು ಆಂಬ್ಯುಲೆನ್ಸ್ ಸಾಗಲು ಅಗತ್ಯ ಸೌಲಭ್ಯವನ್ನು ಒದಗಿಸಿಕೊಟ್ಟಿದ್ದಾರೆ.
ಸಮಯ 1.20 : ಮಣಿಪಾಲ್ ಆಸ್ಪತ್ರೆಯಿಂದ ಜೀವಂತ ಹೃದಯ ಹೊತ್ತ ಆಂಬ್ಯುಲೆನ್ಸ್ ಎಚ್ಎಎಲ್ ಏರ್ಪೋರ್ಟ್ನತ್ತ ಹೊರಟಿದೆ. ಜಿರೋ ಟ್ರಾಫಿಕ್ನಲ್ಲಿ ಹೃದಯವನ್ನು ತೆಗೆದುಕೊಂಡು ಹೋಗಲಾಗುತ್ತಿದೆ.
ಹಿಂದಿನ ಸುದ್ದಿ : ಬೆಂಗಳೂರಿನಿಂದ ಮತ್ತೊಂದು ಜೀವಂತ ಹೃದಯ ಚೆನ್ನೈಗೆ ಹೊರಟಿದೆ. ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟ ಮಗುವಿನ ಹೃದಯವನ್ನು ಚೆನ್ನೈಗೆ ತೆಗೆದುಕೊಂಡು ಹೋಗಲಾಗತ್ತದೆ. ಹೃದಯವನ್ನು ವಿಮಾನ ನಿಲ್ದಾಣಕ್ಕೆ ಸಾಗಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಮಣಿಪಾಲ್ ಆಸ್ಪತ್ರೆಯಲ್ಲಿ ಬ್ರೇನ್ ಡೆಡ್ ಆಗಿ ಮೃತಪಟ್ಟ 8 ತಿಂಗಳ ಮಗುವಿನ ಹೃದಯವನ್ನು ದಾನ ಮಾಡಲು ಪೋಷಕರು ಒಪ್ಪಿಗೆ ನೀಡಿದ್ದಾರೆ. ಚೆನ್ನೈನಲ್ಲಿನ 2 ವರ್ಷದ ಮಗುವಿಗೆ ಹೃದಯವನ್ನು ಕಸಿ ಮಾಡಲಾಗುತ್ತದೆ. ಜೀವಂತ ಹೃದಯ ಶೀಘ್ರದಲ್ಲೇ ಮಣಿಪಾಲ್ ಆಸ್ಪತ್ರೆಯಿಂದ ಹೊರಡಲಿದ್ದು, ಎಚ್ಎಎಲ್ ಏರ್ಪೋರ್ಟ್ ಮೂಲಕ ಚೆನ್ನೈ ತಲುಪಲಿದೆ. [ಬೆಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸಿದ ಜೀವಂತ ಹೃದಯ]

ಸೆ.3ರಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಿಂದ ಜೀವಂತ ಹೃದಯವನ್ನು ಚೆನ್ನೈನ ಪೋರ್ಟಿಸ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿತ್ತು. ಈ ಬಾರಿ ಮಣಿಪಾಲ್ ಆಸ್ಪತ್ರೆಯಿಂದ ಎಚ್ಎಎಲ್ ವಿಮಾಣ ನಿಲ್ದಾಣದ ಮೂಲಕ ಚೆನ್ನೈಗೆ ಹೃದಯವನ್ನು ತೆಗೆದುಕೊಂಡು ಹೋಗಲಾಗುತ್ತಿದೆ.

ಕಳೆದ ಬಾರಿ ತರಾತುರಿಯಲ್ಲಿ ಎಲ್ಲಾ ವ್ಯವಸ್ಥೆ ಮಾಡಿಕೊಂಡು ಹೃದಯ ಸಾಗಣೆ ಮಾಡಲಾಗಿತ್ತು. ಈ ಬಾರಿ ಸಂಚಾರಿ ಪೊಲೀಸರಿಗೆ ಮೊದಲೇ ಮಾಹಿತಿ ನೀಡಿದ್ದು, ಜೀರೋ ಟ್ರಾಫಿಕ್ ಮೂಲಕ ಜೀವಂತ ಹೃದಯವಿರುವ ಆಂಬ್ಯುಲೆನ್ಸ್ ಎಚ್ಎಎಲ್ ವಿಮಾನ ನಿಲ್ದಾಣ ತಲುಪಲಿದೆ. ಅಲ್ಲಿಂದ ವಿಶೇಷ ವಿಮಾನದ ಮೂಲಕ ಚೆನ್ನೈಗೆ ಹೃದಯವನ್ನು ತೆಗೆದುಕೊಂಡು ಹೋಗಲಾಗುತ್ತದೆ. [ಬಡವರಿಗಾಗಿ ಮಿಡಿಯುತ್ತಿರುವ 'ಹೃದಯ'ವಂತೆ ರೀನಾ]
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications