ಸಿಗ್ನಲ್ ಲೈಟ್ನಲ್ಲಿ ಹಾರ್ಟ್ ಚಿಹ್ನೆ: ವಾಹನ ಸವಾರರ ಗೊಂದಲಕ್ಕೆ ಇಲ್ಲಿದೆ ಉತ್ತರ..!
ಬೆಂಗಳೂರು, ಅಕ್ಟೋಬರ್ 11: ಸಂಚಾರ ದಟ್ಟಣೆಗೆ ಹೆಸರುವಾಗಿಯಾಗಿರುವ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಟ್ರಾಫಿಕ್ ಸಿಗ್ನಲ್ ಯಾವಾಗ ಬಿಡುತ್ತದೆಯೋ ಎಂದು ಸಿಗ್ನಲ್ಗಳನ್ನೇ ನೋಡುತ್ತಿದ್ದ ವಾಹನ ಸವಾರರು ಹುಬ್ಬೇರಿಸುವಂಥ ಘಟನೆ ನಡೆದಿದೆ. ಇತ್ತೀಚಿಗೆ ಬೆಂಗಳೂರಿನ ಹಲವು ಟ್ರಾಫಿಕ್ ಸಿಗ್ನಲ್ಗಳಲ್ಲಿ ಹೃದಯ ಚಿಹ್ನೆಯ ಟ್ರಾಫಿಕ್ ಲೈಟ್ಗಳು ಮಿನುಗುತ್ತಿದ್ದು, ವಾಹನ ಸವಾರರು ಆಶ್ಚರ್ಯಗೊಂಡಿದ್ದಾರೆ.
ಇನ್ನು ಕೆಲ ವಾಹನ ಸವಾರರು ಹಾಗೂ ಪಾದಾಚಾರಿಗಳು ಹೃದಯ ಚಿಹ್ನೆಯ ಟ್ರಾಫಿಕ್ ಲೈಟ್ಗಳ ಫೋಟೋಗಳನ್ನು ತೆಗೆದು ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಒಟ್ಟಾರೆ ಟ್ರಾಫಿಕ್ ಲೈಟ್ನ ಹೊಸ ರೂಪ ಕಂಡು ವಾಹನ ಸವಾರರು ಹಾಗೂ ಪಾದಾಚಾರಿಗಳು ಗೊಂದಲಕ್ಕೊಳಗಾಗಿದ್ದಾರೆ.
ಹೃದಯ ಚಿಹ್ನೆಯ ಟ್ರಾಫಿಕ್ ಲೈಟ್ಗಳು ಯಾಕೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ. ಜನರಿಗೆ ಉಪಯೋಗವಾಗಲೆಂದು ಬೆಂಗಳೂರು ಮಣಿಪಾಲ ಆಸ್ಪತ್ರೆ, ಬೆಂಗಳೂರು ಸಂಚಾರಿ ಪೊಲೀಸರು ಹಾಗೂ ಬೆಂಗಳೂರು ಮಹಾ ನಗರ ಪಾಲಿಕೆ ಜಂಟಿಯಾಗಿ ಹೊಸ ಕಾರ್ಯಕ್ರಮ ಆರಂಭಿಸಿದ್ದು, ತುರ್ತು ಪರಿಸ್ಥಿತಿಯಲ್ಲಿ ಜನರಿಗೆ ವೈದ್ಯಕೀಯ ಸೌಲಭ್ಯ ಸಿಗುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

ಟ್ರಾಫಿಕ್ ಸಿಗ್ನಲ್ ಲೈಟ್ಗಳಲ್ಲಿ ಹೃದಯಾಕಾರದ ಚಿಹ್ನೆ
ಬೆಂಗಳೂರನ್ನು ಹಾರ್ಟ್ಸಿಟಿಯನ್ನಾಗಿ ಮಾಡುವ ಉದ್ದೇಶದಿಂದ ವಿಶ್ವ ಹೃದಯದ ದಿನ(ಸೆ.29)ದ ಅಂಗವಾಗಿ ನಗರದ 15 ಟ್ರಾಫಿಕ್ ಸಿಗ್ನಲ್ ಲೈಟ್ಗಳಲ್ಲಿ ಹೃದಯಾಕಾರದ ಚಿಹ್ನೆಗಳನ್ನು ಅಳವಡಿಸಲಾಗಿದೆ. ಇನ್ನು ಹೃದಯದ ಆರೋಗ್ಯದ ಬಗ್ಗೆಯ ಜಾಗೃತಿ ಮೂಡಿಸುವ ಆಡಿಯೋ ಸಂದೇಶಗಳನ್ನು ಸಹ ಬೆಂಗಳೂರಿನ ಕೆಲವು ಪ್ರಮುಖ ಪ್ರದೇಶಗಳಲ್ಲಿ ಪ್ಲೇ ಮಾಡಲಾಗುತ್ತದೆ ಎಂದು ಮಣಿಪಾಲ ಆಸ್ಪತ್ರೆ ತಿಳಿಸಿದೆ.

ಟ್ರಾಫಿಕ್ ಸಿಗ್ನಲ್ಗಳಲ್ಲಿ ಕ್ಯೂ ಆರ್ ಕೋಡ್
ಈ ಬಗ್ಗೆ ಮಣಿಪಾಲ ಆಸ್ಪತ್ರೆ ನೀಡಿರುವ ಮಾಹಿತಿ ಪ್ರಕಾರ, ಜನರಿಗೆ ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಬಳಕೆಯಾಗಲೆಂದು ಬೆಂಗಳೂರು ನಗರದ ಎಲ್ಲಾ ಟ್ರಾಫಿಕ್ ಸಿಗ್ನಲ್ಗಳಲ್ಲಿ ಕ್ಯೂ ಆರ್ ಕೋಡ್ಗಳನ್ನು ಅಂಟಿಸಲಾಗಿದೆ. ಬೆಂಗಳೂರಿನ ನಿವಾಸಿಗಳು ತುರ್ತು ಸಂದರ್ಭಗಳಲ್ಲಿ ಈ ಕ್ಯೂ ಆರ್ ಕೋಡ್ಗಳನ್ನು ಸ್ಕ್ಯಾನ್ ಮಾಡುವ ಮೂಲಕ ವೈದ್ಯಕೀಯ ತುರ್ತು ಸೇವೆಗಳನ್ನು ಪಡೆಯಬಹುದಾಗಿದೆ.

ಜನರ ಗೊಂದಲಕ್ಕೆ ವಿವರಣೆ ನೀಡಿದ ಮಣಿಪಾಲ ಆಸ್ಪತ್ರೆ
ತುರ್ತು ಸಂಖ್ಯೆಯನ್ನು ಡಯಲ್ ಮಾಡಿ ಸೇವೆಗಳನ್ನು ಪಡೆಯಲು ಜನರು ಕಾಯುವ ಬದಲು ಕ್ಯೂ ಆರ್ ಕೋಡ್ಗಳನ್ನು ಸ್ಕ್ಯಾನ್ ಮಾಡುವ ಮೂಲಕ ಜನರು ಬಹುಬೇಗ ವೈದ್ಯಕೀಯ ಸೇವೆಗಳನ್ನು ಹಾಗೂ ಆ್ಯಂಬುಲೆನ್ಸ್ ಸೇವೆಯನ್ನು ಕೂಡ ಅತೀ ಶೀಘ್ರದಲ್ಲಿ ಪಡೆಯಬಹುದು ಎಂದು ತಿಳಿಸಿದೆ. ಈ ವಿಚಾರವನ್ನು ಮಣಿಪಾಲ ಆಸ್ಪತ್ರೆ ತಮ್ಮ ಅಧೀಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಹೃದಯ ಚಿಹ್ನೆಯ ಟ್ರಾಫಿಕ್ ಲೈಟ್ಗಳ ಬಗ್ಗೆ ಗೊಂದಲಕ್ಕೊಳಗಾಗಿರುವ ವಾಹನ ಸವಾರರಿಗೆ ವಿವರಣೆ ನೀಡಿದೆ.

ನಿಯಮ ಪಾಲಿಸುವಂತೆ ಸಂಚಾರಿ ಪೊಲೀಸರ ಮನವಿ
ಹೃದಯ ಚಿಹ್ನೆಯ ಟ್ರಾಫಿಕ್ ಲೈಟ್ಗಳ ಬಗ್ಗೆ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿದ್ದು, ಪ್ರತಿಯೊಬ್ಬರ ಜೀವವೂ ಅತ್ಯಮೂಲ್ಯವಾದದ್ದು ಎನ್ನುವುದನ್ನು ಹೃದಯ ಚಿಹ್ನೆಯ ಟ್ರಾಫಿಕ್ ಲೈಟ್ಗಳು ಸೂಚಿಸಿಸುತ್ತವೆ ಎಂದರು.
ಈ ಬಗ್ಗೆ ಮಾತು ಮುಂದುವರಿಸಿದ ಅವರು, ''ವಾಹನ ಸವಾರರು ಸಂಚಾರಿ ನಿಯಮಗಳನ್ನು ಪಾಲಿಸಬೇಕು. ವಾಹನ ಸವಾರರು ಅತೀ ವೇಗವಾಗಿ ಚಲಿಸಬಾರದು, ಸಿಗ್ನಲ್ ಜಂಪ್ ಮಾಡಬಾರದು. ವಾಹನ ಸವಾರರು ತಾವು ಸುರಕ್ಷಿತವಾಗಿ ಮನೆಗೆ ವಾಪಸ್ ಆಗುವ ನಿರೀಕ್ಷೆಯಲ್ಲಿ ಕಾಯುತ್ತಿರರುವ ಬಗ್ಗೆ ಯೋಚಿಸಬೇಕು. ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ತಮ್ಮ ಸುರಕ್ಷತೆಯನ್ನು ಕಾಪಾಡಿಕೊಳ್ಳಬೇಕು'' ಎಂದು ಹೇಳಿದ್ದಾರೆ.
-
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಆಗಿ ಬದಲಾದ ಪೆರಿಫೆರಲ್ ರಿಂಗ್ ರೋಡ್: 2029ರ ವೇಳೆಗೆ ನಗರದ ಟ್ರಾಫಿಕ್ಗೆ ಸಿಗಲಿದೆ ಮುಕ್ತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ












Click it and Unblock the Notifications