ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೆಟ್ರೋ ಅಧಿಕಾರಿಗಳಿಗೆ ನೋಟಿಸ್ ನೀಡಿದ ಮಂಜುಳಾ

By Kiran B Hegde
|
Google Oneindia Kannada News

ಬೆಂಗಳೂರು, ಡಿ. 3: ಮೆಟ್ರೋ ರೈಲು ನಿಲ್ದಾಣದ ಅಧಿಕಾರಿಗಳಿಬ್ಬರು ತಮ್ಮೊಂದಿಗೆ ಅನುಚಿತ ವರ್ತನೆ ತೋರಿದ್ದಾರೆಂದು ಆರೋಪಿಸಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ನೋಟಿಸ್ ಜಾರಿ ಮಾಡಿದ್ದಾರೆ.

ಮಹಿಳೆಯರೊಬ್ಬರು ದೂರು ನೀಡಿದ್ದರಿಂದ ಪರಿಶೀಲನೆಗೆಂದು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಕ್ಕೆ ತೆರಳಿದ್ದೆ. ಈ ಸಂದರ್ಭದಲ್ಲಿ ನಿಲ್ದಾಣದಲ್ಲಿರುವ ಇಬ್ಬರು ಅಧಿಕಾರಿಗಳು ನನಗೆ ಪ್ರವೇಶ ನಿರ್ಬಂಧಿಸಿದರು. ಅಲ್ಲದೆ, ಅನುಚಿತವಾಗಿ ವರ್ತಿಸಿದರು ಎಂದು ಮಂಜುಳಾ ಮಾನಸ ಆರೋಪಿಸಿದ್ದಾರೆ. [ಬೆಂಗಳೂರು ವಿವಿ ಪ್ರಾಧ್ಯಾಪಕಿಯರಿಗೆ ಲೈಂಗಿಕ ಕಿರುಕುಳ]

manjula

ಅಲ್ಲದೆ, ಇಬ್ಬರೂ ಅಧಿಕಾರಿಗಳ ವಿರುದ್ಧವೂ ಪೀಣ್ಯ ಪೊಲೀಸ್ ಠಾಣೆಯಲ್ಲಿ ಅವರು ದೂರು ದಾಖಲಿಸಿದ್ದಾರೆ.

ವಿಜಯಾಪುರ ವರದಿ: ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಎಸ್.ಎಲ್. ಚಂದ್ರಶೇಖರ ಮತ್ತು ರಾಘವೇಂದ್ರ ಸೊಂಡೂರು ಅವರನ್ನು ವಜಾಗೊಳಿಸಿ ರಾಜ್ಯಪಾಲ ವಜುಬಾಯಿ ವಾಲಾ ಡಿ. 1ರಂದು ಆದೇಶ ಹೊರಡಿಸಿದ್ದರು. ಇವರಿಬ್ಬರೂ ನಾಮನಿರ್ದೇಶಿತರಾಗಿ ಆಯ್ಕೆಯಾಗಿದ್ದರು.

English summary
Chairman of woman commission for state Manjula Manasa has given notice to two officers of metro railway station. She allied that officers showed inappropriate behavior with her.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X