Get Updates
Get notified of breaking news, exclusive insights, and must-see stories!

Bengaluru Metro, Airport: ಬೆಂಗಳೂರು ಜನ ಮರೆಯಲಾಗದ ಯೋಜನೆಗಳಿಗೆ ಚಾಲನೆ ನೀಡಿದ್ದ ಮನಮೋಹನ್‌ ಸಿಂಗ್‌

Bengaluru Airport, Metro: ಭಾರತದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಗುರುವಾರ (ಡಿಸೆಂಬರ್ 26) ರಾತ್ರಿ ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ನವದೆಹಲಿಯ ಏಮ್ಸ್‌ಗೆ ಅವರನ್ನು ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಇನ್ನು ಅವರು ಬೆಂಗಳೂರಿನ ಜನರು ಮರೆಯಲಾದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಮಾಹಿತಿ ಇಲ್ಲಿದೆ ತಿಳಿಯಿರಿ.

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರು ಮಂದಿ ಎಂದೆಂದಿಗೂ ಮರೆಯದ ಯೋಜನೆಗಳಿಗೆ ಚಾಲನೆ ನೀಡಿದ್ದರು. ಹೀಗೆ ತಮ್ಮ ಅಧಿಕಾರಾವಧಿಯಲ್ಲಿ ಬೆಂಗಳೂರಿಗೆ ಅಪಾರ ಕೊಡುಗೆ ನೀಡಿದ್ದಾರೆ.

Manmohan Singh is Gave the Unforgettable Contribution to Karnataka s Bengaluru

2008ರಲ್ಲಿ ಪ್ರಧಾನ ಮಂತ್ರಿ ಆಗಿದ್ದ ವೇಳೆ ಮನಮೋಹನ್‌ ಸಿಂಗ್‌ ಅವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ್ದರು. ವಿಮಾನ ನಿಲ್ದಾಣ ಉದ್ಘಾಟನೆಯಾದ ಮೂರು ವರ್ಷಗಳ ನಂತರ ಮೊದಲ ನಮ್ಮ ಮೆಟ್ರೋ ಮಾರ್ಗವನ್ನು ಲೋಕಾರ್ಪಣೆ ಮಾಡಿದ್ದರು. ಅಕ್ಟೋಬರ್ 20, 2011ರಂದು ಬೈಯಪ್ಪನಹಳ್ಳಿಯಿಂದ ಎಂಜಿ ರೋಡ್‌ ಮೊದಲ ಮೆಟ್ರೋ ರೈಲಿಗೆ ಚಾಲನೆ ನೀಡಿದ ಕೀರ್ತಿ ಅವರದ್ದಾಗಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾತನಾಡಿ, ಮನಮೋಹನ್ ಸಿಂಗ್ ಅವರು ಕರ್ನಾಟಕಕ್ಕೆ ಅದರಲ್ಲೂ ಬೆಂಗಳೂರು ಅಭಿವೃದ್ಧಿಗೆ ತುಂಬಾ ಕೊಡುಗೆಗಳನ್ನು ನೀಡಿದ್ದಾಎಎ. ನರ್ಮ್ ಯೋಜನೆ ಮೂಲಕ ಅನೇಕ ನಗರಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದುರ.

ಅಲ್ಲದೆ, ಬೆಂಗಳೂರಿನ ಅನೇಕ ಮೇಲ್ಸೇತುವೆಗಳು ಇವರು ನೀಡಿದ ಕೊಡುಗೆಗಳಾಗಿವೆ. ಅವರ ಬಗ್ಗೆ ಮಾತನಾಡಲು ಒಂದು ದಿನ ಸಾಲುವುದಿಲ್ಲ. ಅವರು ದೇಶದ ಎಲ್ಲಾ ವರ್ಗದ ಜನರಿಗೆ ಮರೆಯಲಾಗದ ಕೊಡುಗೆ ನೀಡಿದ್ದಾರೆ. ರೈತರ ಸಾಲಮನ್ನಾ ಮಾಡಿ ಅವರ ಪರವಾಗಿ ದೃಢವಾಗಿ ನಿಂತವರಾದ ಕೀರ್ತಿ ಅವರದ್ದಾಗಿದೆ ಎಂದು ಹೇಳಿದರು.

ಇನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖ ರಾಜಕೀಯ ವ್ಯಕ್ತಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ನಿಧನಕ್ಕೆ ಪ್ರತಿಕ್ರಿಯೆಯಾಗಿ, ಡಿಸೆಂಬರ್ ಕೇಂದ್ರದ ಸರ್ಕಾರವು 7 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.

ಮನಮೋಹನ್ ಸಿಂಗ್ ಅವರು ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿ ಎಂದೇ ಪ್ರಖ್ಯಾತಿ ಹೊಂದಿದವರಾಗಿದ್ದರು. 1990-91ರ ಗಲ್ಫ್ ಯುದ್ಧವು ತೈಲ ಬೆಲೆಗಳಲ್ಲಿ ತೀವ್ರ ಹೆಚ್ಚಳಕ್ಕೆ ಕಾರಣವಾಯಿತು. ಇದರೊಂದಿಗೆ ಭಾರತವು ಅಂದು ತನ್ನ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸಿತ್ತಿತ್ತು. ಈ ವೇಳೆ ಹಣಕಾಸು ಸಚಿವರಾಗಿ ಅಧಿಕಾರ ವಹಿಸಿಕೊಂಡ ಮನಮೋಹನ್ ಸಿಂಗ್ ಅವರು ನಿಭಾಯಿಸಿದ ರೀತಿಯನ್ನು ಮರೆಯುವಂತಿಲ್ಲ.

ಇದೇ ಸಮಯದಲ್ಲಿ ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಕೆಲಸಗಾರರಿಂದ ರವಾನೆ ಆಗುತ್ತಿದ್ದ ಹಣವು ಕುಸಿಯಿತು. ಇದರಿಂದ ಭಾರತದ ವಿದೇಶೀ ವಿನಿಮಯದ ಮೀಸಲಿನ ಪ್ರಮಾಣವು $6 ಶತಕೋಟಿಗಿಂತ ಕಡಿಮೆ ಮಟ್ಟದ ಕುಸಿತಕ್ಕೆ ಕಾರಣವಾಯಿತು. ಇದು ಭಾರತದ ವಿದೇಶೀ ವಿನಿಮಯ ಸಂಗ್ರಹವನ್ನು ಕೇವಲ ಮೂರು ವಾರಗಳ ಆಮದುಗಳನ್ನು ಸರಿದೂಗಿಸಲು ಅಷ್ಟೇ ಸಾಗುತ್ತಿತ್ತು.

ಇದಕ್ಕೂ ಮೊದಲು, ಚಂದ್ರಶೇಖರ್ ಅವರ ಉಸ್ತುವಾರಿ ಸರ್ಕಾರವು ಚಿನ್ನವನ್ನು ಒತ್ತೆ ಇಡಲು ಆರ್‌ಬಿಐನ ಪ್ರಖ್ಯಾತ ಸಲಹೆಯನ್ನು ತೆಗೆದುಕೊಂಡು, ಗೌಪ್ಯ ಕಾರ್ಯಾಚರಣೆಯ ಮೂಲಕ ಸುಮಾರು 47 ಟನ್‌ಗಳಷ್ಟು ಚಿನ್ನವನ್ನು ನಾಲ್ಕು ಹಂತಗಳಲ್ಲಿ ಜುಲೈವರೆಗೆ ವಿದೇಶಗಳಿಗೆ ರವಾನೆ ಮಾಡಲಾಯಿತು. ಈ ಮೂಲಕ ಸುಮಾರು $400 ಮಿಲಿಯನ್ ಸಂಗ್ರಹಿಸಿತ್ತು. ಆದರೆ ನಂತರ ಬಂದ ಪಿ.ವಿ.ನರಸಿಂಹರಾವ್ ಸರ್ಕಾರದಲ್ಲಿ ವಿತ್ತ ಸಚಿವರಾಗಿ ಮನಮೋಹನ್ ಸಿಂಗ್ ಅವರು ತಂದ ಸುಧಾರಣೆಗಳು ಭಾರತದ ಆರ್ಥಿಕತೆಯನ್ನು ಉದಾರೀಕರಣಗೊಳಿಸಿ, ಭಾರತೀಯ ಆರ್ಥಿಕತೆ ವ್ಯವಸ್ಥೆಯನ್ನು ಶಾಶ್ವತವಾಗಿ ಬದಲಾಯಿಸಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+