Bengaluru Metro, Airport: ಬೆಂಗಳೂರು ಜನ ಮರೆಯಲಾಗದ ಯೋಜನೆಗಳಿಗೆ ಚಾಲನೆ ನೀಡಿದ್ದ ಮನಮೋಹನ್ ಸಿಂಗ್
Bengaluru Airport, Metro: ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುರುವಾರ (ಡಿಸೆಂಬರ್ 26) ರಾತ್ರಿ ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ನವದೆಹಲಿಯ ಏಮ್ಸ್ಗೆ ಅವರನ್ನು ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಇನ್ನು ಅವರು ಬೆಂಗಳೂರಿನ ಜನರು ಮರೆಯಲಾದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಮಾಹಿತಿ ಇಲ್ಲಿದೆ ತಿಳಿಯಿರಿ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರು ಮಂದಿ ಎಂದೆಂದಿಗೂ ಮರೆಯದ ಯೋಜನೆಗಳಿಗೆ ಚಾಲನೆ ನೀಡಿದ್ದರು. ಹೀಗೆ ತಮ್ಮ ಅಧಿಕಾರಾವಧಿಯಲ್ಲಿ ಬೆಂಗಳೂರಿಗೆ ಅಪಾರ ಕೊಡುಗೆ ನೀಡಿದ್ದಾರೆ.

2008ರಲ್ಲಿ ಪ್ರಧಾನ ಮಂತ್ರಿ ಆಗಿದ್ದ ವೇಳೆ ಮನಮೋಹನ್ ಸಿಂಗ್ ಅವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ್ದರು. ವಿಮಾನ ನಿಲ್ದಾಣ ಉದ್ಘಾಟನೆಯಾದ ಮೂರು ವರ್ಷಗಳ ನಂತರ ಮೊದಲ ನಮ್ಮ ಮೆಟ್ರೋ ಮಾರ್ಗವನ್ನು ಲೋಕಾರ್ಪಣೆ ಮಾಡಿದ್ದರು. ಅಕ್ಟೋಬರ್ 20, 2011ರಂದು ಬೈಯಪ್ಪನಹಳ್ಳಿಯಿಂದ ಎಂಜಿ ರೋಡ್ ಮೊದಲ ಮೆಟ್ರೋ ರೈಲಿಗೆ ಚಾಲನೆ ನೀಡಿದ ಕೀರ್ತಿ ಅವರದ್ದಾಗಿದೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಮನಮೋಹನ್ ಸಿಂಗ್ ಅವರು ಕರ್ನಾಟಕಕ್ಕೆ ಅದರಲ್ಲೂ ಬೆಂಗಳೂರು ಅಭಿವೃದ್ಧಿಗೆ ತುಂಬಾ ಕೊಡುಗೆಗಳನ್ನು ನೀಡಿದ್ದಾಎಎ. ನರ್ಮ್ ಯೋಜನೆ ಮೂಲಕ ಅನೇಕ ನಗರಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದುರ.
ಅಲ್ಲದೆ, ಬೆಂಗಳೂರಿನ ಅನೇಕ ಮೇಲ್ಸೇತುವೆಗಳು ಇವರು ನೀಡಿದ ಕೊಡುಗೆಗಳಾಗಿವೆ. ಅವರ ಬಗ್ಗೆ ಮಾತನಾಡಲು ಒಂದು ದಿನ ಸಾಲುವುದಿಲ್ಲ. ಅವರು ದೇಶದ ಎಲ್ಲಾ ವರ್ಗದ ಜನರಿಗೆ ಮರೆಯಲಾಗದ ಕೊಡುಗೆ ನೀಡಿದ್ದಾರೆ. ರೈತರ ಸಾಲಮನ್ನಾ ಮಾಡಿ ಅವರ ಪರವಾಗಿ ದೃಢವಾಗಿ ನಿಂತವರಾದ ಕೀರ್ತಿ ಅವರದ್ದಾಗಿದೆ ಎಂದು ಹೇಳಿದರು.
ಇನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖ ರಾಜಕೀಯ ವ್ಯಕ್ತಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ನಿಧನಕ್ಕೆ ಪ್ರತಿಕ್ರಿಯೆಯಾಗಿ, ಡಿಸೆಂಬರ್ ಕೇಂದ್ರದ ಸರ್ಕಾರವು 7 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.
ಮನಮೋಹನ್ ಸಿಂಗ್ ಅವರು ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿ ಎಂದೇ ಪ್ರಖ್ಯಾತಿ ಹೊಂದಿದವರಾಗಿದ್ದರು. 1990-91ರ ಗಲ್ಫ್ ಯುದ್ಧವು ತೈಲ ಬೆಲೆಗಳಲ್ಲಿ ತೀವ್ರ ಹೆಚ್ಚಳಕ್ಕೆ ಕಾರಣವಾಯಿತು. ಇದರೊಂದಿಗೆ ಭಾರತವು ಅಂದು ತನ್ನ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸಿತ್ತಿತ್ತು. ಈ ವೇಳೆ ಹಣಕಾಸು ಸಚಿವರಾಗಿ ಅಧಿಕಾರ ವಹಿಸಿಕೊಂಡ ಮನಮೋಹನ್ ಸಿಂಗ್ ಅವರು ನಿಭಾಯಿಸಿದ ರೀತಿಯನ್ನು ಮರೆಯುವಂತಿಲ್ಲ.
ಇದೇ ಸಮಯದಲ್ಲಿ ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಕೆಲಸಗಾರರಿಂದ ರವಾನೆ ಆಗುತ್ತಿದ್ದ ಹಣವು ಕುಸಿಯಿತು. ಇದರಿಂದ ಭಾರತದ ವಿದೇಶೀ ವಿನಿಮಯದ ಮೀಸಲಿನ ಪ್ರಮಾಣವು $6 ಶತಕೋಟಿಗಿಂತ ಕಡಿಮೆ ಮಟ್ಟದ ಕುಸಿತಕ್ಕೆ ಕಾರಣವಾಯಿತು. ಇದು ಭಾರತದ ವಿದೇಶೀ ವಿನಿಮಯ ಸಂಗ್ರಹವನ್ನು ಕೇವಲ ಮೂರು ವಾರಗಳ ಆಮದುಗಳನ್ನು ಸರಿದೂಗಿಸಲು ಅಷ್ಟೇ ಸಾಗುತ್ತಿತ್ತು.
ಇದಕ್ಕೂ ಮೊದಲು, ಚಂದ್ರಶೇಖರ್ ಅವರ ಉಸ್ತುವಾರಿ ಸರ್ಕಾರವು ಚಿನ್ನವನ್ನು ಒತ್ತೆ ಇಡಲು ಆರ್ಬಿಐನ ಪ್ರಖ್ಯಾತ ಸಲಹೆಯನ್ನು ತೆಗೆದುಕೊಂಡು, ಗೌಪ್ಯ ಕಾರ್ಯಾಚರಣೆಯ ಮೂಲಕ ಸುಮಾರು 47 ಟನ್ಗಳಷ್ಟು ಚಿನ್ನವನ್ನು ನಾಲ್ಕು ಹಂತಗಳಲ್ಲಿ ಜುಲೈವರೆಗೆ ವಿದೇಶಗಳಿಗೆ ರವಾನೆ ಮಾಡಲಾಯಿತು. ಈ ಮೂಲಕ ಸುಮಾರು $400 ಮಿಲಿಯನ್ ಸಂಗ್ರಹಿಸಿತ್ತು. ಆದರೆ ನಂತರ ಬಂದ ಪಿ.ವಿ.ನರಸಿಂಹರಾವ್ ಸರ್ಕಾರದಲ್ಲಿ ವಿತ್ತ ಸಚಿವರಾಗಿ ಮನಮೋಹನ್ ಸಿಂಗ್ ಅವರು ತಂದ ಸುಧಾರಣೆಗಳು ಭಾರತದ ಆರ್ಥಿಕತೆಯನ್ನು ಉದಾರೀಕರಣಗೊಳಿಸಿ, ಭಾರತೀಯ ಆರ್ಥಿಕತೆ ವ್ಯವಸ್ಥೆಯನ್ನು ಶಾಶ್ವತವಾಗಿ ಬದಲಾಯಿಸಿತ್ತು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications