Breaking News: 'ನಮ್ಮ ಮೆಟ್ರೋ' ನಿಲ್ದಾಣದಲ್ಲಿ ಮತ್ತೊಂದು ಆತ್ಮಹತ್ಯೆ ಯತ್ನ, ಹಳಿಗೆ ಜಿಗಿದ ವ್ಯಕ್ತಿ
ಬೆಂಗಳೂರು, ಸೆಪ್ಟಂಬರ್ 17: ಬೆಂಗಳೂರು ನಮ್ಮ ಮೆಟ್ರೋ ರೈಲು ನಿಲ್ದಾಣಗಳು ಸೂಸೈಡ್ ಹಾಟ್ಸ್ಟಾಟ್ ಆಗಿ ಪರಿವರ್ತನೆ ಆಗುತ್ತಿದೆಯೇ ಅಂತನಿಸುತ್ತದೆ. ಕಾರಣ ಮೆಟ್ರೋ ನೇರಳೆ ಮಾರ್ಗದ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಮತ್ತೊಂದು ಆತ್ಮಹತ್ಯೆ ಘಟನೆ ನಡೆದಿದೆ. ರೈಲು ಬರುವುದನ್ನೇ ನೋಡಿಕೊಂಡಿದ್ದ ವ್ಯಕ್ತಿ ನೋಡ ನೋಡುತ್ತಿದ್ದ ಹಳಿಗೆ ಎಗರಿದ್ದಾನೆ. ಆತನ ಮೇಲೆ 10 ಮೀಟರ್ ರೈಲು ಸಂಚಾರ ನಡೆಸಿದೆ.
ಹೌದು, ಇತ್ತೀಚೆಗೆ ನಮ್ಮ ಮೆಟ್ರೋ ಟ್ರ್ಯಾಕ್ ಮೇಲೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವ ಯತ್ನ ಹೆಚ್ಚಾಗುತ್ತಿವೆ. ಈಗಾಗಲೇ ಎರಡು ಪ್ರಕರಣದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಇದೀಗ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ ಅದೃಷ್ಟವಶಾತ್ ಬದುಕಿದ್ದಾನೆ.

ರೈಲು ಬರುವುದನ್ನು ನೋಡಿಕೊಂಡು ದಿಢೀರನೇ ಹಳಿಗೆ ಜಿಗಿದ ವ್ಯಕ್ತಿಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಸಿಬ್ಬಂದಿ ಗಮನಿಸಿದ್ದಾರೆ. ಕೂಡಲೇ ರೈಲು ನಿಲ್ಲಿಸಿ ಆತನನ್ನು ರಕ್ಷಣೆ ಮಾಡಲಾಗಿದೆ. ಈ ಕುರಿತು ನಮ್ಮ ಮೆಟ್ರೋ ಅಧಿಕಾರಿಗಳೇ ಖುದ್ದು ಮಾಹಿತಿ ನೀಡಿದ್ದಾರೆ.
ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಆಗಿದ್ದೇನು?
ಎಂದಿನಂತೆ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರು ನಿಂತಿದ್ದರು. ಈ ವೇಳೆ ಮಂಗಳವಾರ ಮಧ್ಯಾಹ್ನ 14.13 ಗಂಟೆಗೆ ಸುಮಾರು 30 ವರ್ಷ ವಯಸ್ಸಿನ ಬಿಹಾರ ಮೂಲದ ಸಿದ್ಧಾರ್ಥ್ ಎಂಬ ವ್ಯಕ್ತಿ ಬರುತ್ತಿದ್ದ ರೈಲು ನೋಡಿಕೊಂಡು ಹಳಿಗೆ ಧುಮುಕಿದ್ದಾನೆ. ಇದನ್ನು ಮಗನಿಸಿದ ಕೂಡಲೇ ಸಿಬ್ಬಂದಿ ಎಮರ್ಜೆನ್ಸಿ ಟ್ರಿಪ್ ಸಿಸ್ಟಮ್ ಇಟಿಎಸ್ ಬಟನ್ ಪ್ರೆಸ್ ಮಾಡಿದ್ದಾರೆ.
ಕೂಡಲೇ ಮೆಟ್ರೋ ಟ್ರ್ಯಾಕ್ ಮೇಲಿನ್ ವಿದ್ಯುತ್ ಹರಿವು ಸ್ಥಗಿತಗೊಳಿಸಲಾಯಿತು. ಅಷ್ಟೋತ್ತಿಗಾಗಲೇ ಹಳಿ ಮೇಲಿದ್ದ ಆತನ ಮೇಲೆ ಹತ್ತು ಮೀಟರ್ ರೈಲು ಮುಂದೆ ಸಾಗಿತ್ತು. ಎರಡು ಹಳಿಗಳ ಮಧ್ಯೆ ಆತ ಸಿಲುಕಿದ್ದರಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರೈಲು ಮತ್ತು ಹಳಿ ಮಧ್ಯೆ ಸಿಲುಕಿದ್ದ ಆತನನ್ನು ಮೆಟ್ರೋ ನಿಲ್ದಾಣದಲ್ಲಿರುವ ಬಿಎಂಆರ್ಸಿಎಲ್ ಸ್ಟೇಷನ್ ನಿಯಂತ್ರಣಕಾರರು ಮತ್ತು ಸಿಬ್ಬಂದಿ ಆತನನ್ನು ರಕ್ಷಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಬಿಹಾರದ ಸಿದ್ಧಾರ್ಥ್ಗೆ ಯಾವುದೇ ಗಾಯಗಳು ವರದಿಯಾಗಿಲ್ಲ. ಈ ಘಟನೆಯಿಂದ ನಿಲ್ದಾಣದಲ್ಲಿ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಯಿತು. ಸಂಪೂರ್ಣ ನೇರಳೆ ಮಾರ್ಗದಲ್ಲಿ ರೈಲು ಸೇವೆಗಳ ಸುಮಾರು ಅರ್ಧ ಗಂಟೆಗಳ ಕಾಲ ವ್ಯತ್ಯಯಗೊಂಡಿತು. ನಂತರ 14.30 ಗಂಟೆಗೆ ಎಂದಿನಂತೆ ಮೆಟ್ರೋ ರೈಲು ಸೇವೆ ಪುನರಾರಂಭವಾಯಿತು.
ಮಧ್ಯಾಹ್ನ 14.13 ಗಂಟೆಯಿಂದ 14.30 ಗಂಟೆಯವರೆಗೆ ಇದೇ ನೇರಳೆ ಮಾರ್ಗದಲ್ಲಿ ಚಲ್ಲಘಟ್ಟ ಮೆಟ್ರೊ ನಿಲ್ದಾಣದ ಬದಲು ಮೈಸೂರು ರಸ್ತೆಯಲ್ಲಿ 2 ರೈಲುಗಳು ಶಾರ್ಟ್ ಲೂಪ್ನಲ್ಲಿ ಕಾರ್ಯ ನಿರ್ವಹಿಸಿದವು ಎಂದು BMRCL ಮಾಹಿತಿ ನೀಡಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications