Breaking News: 'ನಮ್ಮ ಮೆಟ್ರೋ' ನಿಲ್ದಾಣದಲ್ಲಿ ಮತ್ತೊಂದು ಆತ್ಮಹತ್ಯೆ ಯತ್ನ, ಹಳಿಗೆ ಜಿಗಿದ ವ್ಯಕ್ತಿ
ಬೆಂಗಳೂರು, ಸೆಪ್ಟಂಬರ್ 17: ಬೆಂಗಳೂರು ನಮ್ಮ ಮೆಟ್ರೋ ರೈಲು ನಿಲ್ದಾಣಗಳು ಸೂಸೈಡ್ ಹಾಟ್ಸ್ಟಾಟ್ ಆಗಿ ಪರಿವರ್ತನೆ ಆಗುತ್ತಿದೆಯೇ ಅಂತನಿಸುತ್ತದೆ. ಕಾರಣ ಮೆಟ್ರೋ ನೇರಳೆ ಮಾರ್ಗದ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಮತ್ತೊಂದು ಆತ್ಮಹತ್ಯೆ ಘಟನೆ ನಡೆದಿದೆ. ರೈಲು ಬರುವುದನ್ನೇ ನೋಡಿಕೊಂಡಿದ್ದ ವ್ಯಕ್ತಿ ನೋಡ ನೋಡುತ್ತಿದ್ದ ಹಳಿಗೆ ಎಗರಿದ್ದಾನೆ. ಆತನ ಮೇಲೆ 10 ಮೀಟರ್ ರೈಲು ಸಂಚಾರ ನಡೆಸಿದೆ.
ಹೌದು, ಇತ್ತೀಚೆಗೆ ನಮ್ಮ ಮೆಟ್ರೋ ಟ್ರ್ಯಾಕ್ ಮೇಲೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವ ಯತ್ನ ಹೆಚ್ಚಾಗುತ್ತಿವೆ. ಈಗಾಗಲೇ ಎರಡು ಪ್ರಕರಣದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಇದೀಗ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ ಅದೃಷ್ಟವಶಾತ್ ಬದುಕಿದ್ದಾನೆ.

ರೈಲು ಬರುವುದನ್ನು ನೋಡಿಕೊಂಡು ದಿಢೀರನೇ ಹಳಿಗೆ ಜಿಗಿದ ವ್ಯಕ್ತಿಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಸಿಬ್ಬಂದಿ ಗಮನಿಸಿದ್ದಾರೆ. ಕೂಡಲೇ ರೈಲು ನಿಲ್ಲಿಸಿ ಆತನನ್ನು ರಕ್ಷಣೆ ಮಾಡಲಾಗಿದೆ. ಈ ಕುರಿತು ನಮ್ಮ ಮೆಟ್ರೋ ಅಧಿಕಾರಿಗಳೇ ಖುದ್ದು ಮಾಹಿತಿ ನೀಡಿದ್ದಾರೆ.
ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಆಗಿದ್ದೇನು?
ಎಂದಿನಂತೆ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರು ನಿಂತಿದ್ದರು. ಈ ವೇಳೆ ಮಂಗಳವಾರ ಮಧ್ಯಾಹ್ನ 14.13 ಗಂಟೆಗೆ ಸುಮಾರು 30 ವರ್ಷ ವಯಸ್ಸಿನ ಬಿಹಾರ ಮೂಲದ ಸಿದ್ಧಾರ್ಥ್ ಎಂಬ ವ್ಯಕ್ತಿ ಬರುತ್ತಿದ್ದ ರೈಲು ನೋಡಿಕೊಂಡು ಹಳಿಗೆ ಧುಮುಕಿದ್ದಾನೆ. ಇದನ್ನು ಮಗನಿಸಿದ ಕೂಡಲೇ ಸಿಬ್ಬಂದಿ ಎಮರ್ಜೆನ್ಸಿ ಟ್ರಿಪ್ ಸಿಸ್ಟಮ್ ಇಟಿಎಸ್ ಬಟನ್ ಪ್ರೆಸ್ ಮಾಡಿದ್ದಾರೆ.
ಕೂಡಲೇ ಮೆಟ್ರೋ ಟ್ರ್ಯಾಕ್ ಮೇಲಿನ್ ವಿದ್ಯುತ್ ಹರಿವು ಸ್ಥಗಿತಗೊಳಿಸಲಾಯಿತು. ಅಷ್ಟೋತ್ತಿಗಾಗಲೇ ಹಳಿ ಮೇಲಿದ್ದ ಆತನ ಮೇಲೆ ಹತ್ತು ಮೀಟರ್ ರೈಲು ಮುಂದೆ ಸಾಗಿತ್ತು. ಎರಡು ಹಳಿಗಳ ಮಧ್ಯೆ ಆತ ಸಿಲುಕಿದ್ದರಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರೈಲು ಮತ್ತು ಹಳಿ ಮಧ್ಯೆ ಸಿಲುಕಿದ್ದ ಆತನನ್ನು ಮೆಟ್ರೋ ನಿಲ್ದಾಣದಲ್ಲಿರುವ ಬಿಎಂಆರ್ಸಿಎಲ್ ಸ್ಟೇಷನ್ ನಿಯಂತ್ರಣಕಾರರು ಮತ್ತು ಸಿಬ್ಬಂದಿ ಆತನನ್ನು ರಕ್ಷಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಬಿಹಾರದ ಸಿದ್ಧಾರ್ಥ್ಗೆ ಯಾವುದೇ ಗಾಯಗಳು ವರದಿಯಾಗಿಲ್ಲ. ಈ ಘಟನೆಯಿಂದ ನಿಲ್ದಾಣದಲ್ಲಿ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಯಿತು. ಸಂಪೂರ್ಣ ನೇರಳೆ ಮಾರ್ಗದಲ್ಲಿ ರೈಲು ಸೇವೆಗಳ ಸುಮಾರು ಅರ್ಧ ಗಂಟೆಗಳ ಕಾಲ ವ್ಯತ್ಯಯಗೊಂಡಿತು. ನಂತರ 14.30 ಗಂಟೆಗೆ ಎಂದಿನಂತೆ ಮೆಟ್ರೋ ರೈಲು ಸೇವೆ ಪುನರಾರಂಭವಾಯಿತು.
ಮಧ್ಯಾಹ್ನ 14.13 ಗಂಟೆಯಿಂದ 14.30 ಗಂಟೆಯವರೆಗೆ ಇದೇ ನೇರಳೆ ಮಾರ್ಗದಲ್ಲಿ ಚಲ್ಲಘಟ್ಟ ಮೆಟ್ರೊ ನಿಲ್ದಾಣದ ಬದಲು ಮೈಸೂರು ರಸ್ತೆಯಲ್ಲಿ 2 ರೈಲುಗಳು ಶಾರ್ಟ್ ಲೂಪ್ನಲ್ಲಿ ಕಾರ್ಯ ನಿರ್ವಹಿಸಿದವು ಎಂದು BMRCL ಮಾಹಿತಿ ನೀಡಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications