ಸರ್ಕಾರಕ್ಕೆ ಹಲವು ಬೇಡಿಕೆಗಳನ್ನಿಟ್ಟ ಕೆಪಿಟಿಸಿಎಲ್ ಹಾಗೂ ಎಸ್ಕಾಂ ಹೊರಗುತ್ತಿಗೆ ನೌಕರರು
ಬೆಂಗಳೂರು, ಆಗಸ್ಟ್, 10: ವಿವಿಧ ಬೇಡಿಕೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್ನಲ್ಲಿ ಇಂದು (ಆಗಸ್ಟ್ 10) ಸರ್ಕಾರದ ವಿರುದ್ಧ ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ನೌಕರರು ನೌಕರರು ಧರಣಿ ನಡೆಸಿದ್ದಾರೆ.
ಕೆಲಸ ಸ್ಥಗಿತ ಮಾಡಿ ರಾಜ್ಯದ ಸಾವಿರಾರು ಹೊರಗುತ್ತಿಗೆ ನೌಕಕರು ಹೋರಾಟಕ್ಕೆ ಬಂದಿದ್ದು, ಸಚಿವರು ಸ್ಥಳಕ್ಕೆ ಬರುವವರೆಗೆ ನಮ್ಮ ಹೋರಾಟ ನಿಲ್ಲಲ್ಲ. ಇಲ್ಲಿಂದ ನಾವು ಕದಲಲ್ಲ, ಕೆಲಸ ಮಾಡಲ್ಲ ಅಂತಾ ಪಟ್ಟುಹಿಡಿದಿದ್ದಾರೆ.

ಕರ್ನಾಟಕ ಕೆಪಿಟಿಸಿಎಲ್ ಹಾಗೂ ಎಸ್ಕಾಂ ಹೊರಗುತ್ತಿಗೆ ನೌಕರರ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಗುತ್ತಿಗೆ ನೌಕರರು ನಿರ್ಧಾರ ಮಾಡಿದ್ದಾರೆ. ನಮ್ಮ ಮನವಿಗೆ ಸ್ಪಂದಿಸದೆ ಇದ್ದಲ್ಲಿ ಕೆಪಿಟಿಸಿಎಲ್ ಕಚೇರಿ ಕಾವೇರಿ ಭವನಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆಯನ್ನಯ ಕೂಡ ನೀಡಿದ್ದಾರೆ.
ಹೊರಗುತ್ತಿಗೆ ನೌಕರರು ಸಾಕಷ್ಟು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದು, ಗೃಹ ಸಚಿವರು ತಮ್ಮ ಬೇಡಿಕೆ ಈಡೇರಿಕೆ ಮಾಡಬೇಕು ಅಂತಾ ಪಟ್ಟುಹಿಡಿದಿದ್ದಾರೆ. ಹಾಗಾದರೆ ಪ್ರಮುಖ ಬೇಡಿಕೆಗಳು ಯಾವುದು ಅಂತ ನೋಡುವುದಾದರೆ, ಎಲ್ಲಾ ಹೊರಗುತ್ತಿಗೆ ನೌಕರರ ಸೇವೆ ಕಾಯಂ ಮಾಡಬೇಕು, ಕಾಯಂ ಆಗುವವರೆಗೂ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಜೊತೆಗೆ ನೌಕರರು ವಿದ್ಯುತ್ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಗುತ್ತಿಗೆ ಪದ್ಧತಿ ಎಂಬ ಜೀತ ಪದ್ಧತಿಯಿಂದ ನೌಕರರನ್ನು ಮುಕ್ತಗೊಳಿಸಬೇಕು. ಹಾಗೆಯೇ ಇಂಧನ ಇಲಾಖೆಯಿಂದಲೇ ನೌಕರರಿಗೆ ನೇರ ಪಾವತಿ ಮಾಡಬೇಕು. ಅದರ ಜೊತೆಗೆ ಈಗಾಗಲೇ ವಿವಿಧ ಕಾರಣದಿಂದ ವಜಾಗೊಂಡವರನ್ನು ತಕ್ಷಣ ನೇಮಕ ಮಾಡಬೇಕು ಎಂದು ಸಚಿವರ ಬಳಿ ಬೇಡಿಕೆ ಇಟ್ಟಿದ್ದಾರೆ.
ಒಂದು ವೇಳೆ ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ನಮ್ಮ ಮುಂದಿನ ಹೋರಾಟ ಇನ್ನೂ ಉಗ್ರ ರೂಪಾ ತಾಳಲಿದೆ ಅಂತಾ ಎಚ್ಚರಿಕೆ ಕೊಟ್ಟಿದ್ದಾರೆ. ಇನ್ನೂ ಹೊರಗುತ್ತಿಗೆ ನೌಕರರ ಹೋರಾಟಕ್ಕೆ ಮಣಿದು ಸ್ಥಳಕ್ಕೆ ಸಚಿವ ಕೆ.ಜೆ.ಜಾರ್ಜ್ ಬರುತ್ತಾರಾ ಅಥವಾ ಇದು ಅನಿರ್ಧಿಷ್ಟಾವಧಿ ಹೋರಾಟಕ್ಕೆ ಸಾಕ್ಷಿಯಾಗುತ್ತಾ ಕಾದುನೋಡಬೇಕಿದೆ.
-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ












Click it and Unblock the Notifications