'ವೈದ್ಯರಿಗೆ ಅಂತಃಕರಣ ಹೆಚ್ಚಾಗಬೇಕು' ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
ಬೆಂಗಳೂರು, ಜುಲೈ 1: ಹಣವಂತರಿಗೆ ಆರೋಗ್ಯ ಸೇವೆ ಪಡೆದುಕೊಳ್ಳುವುದು, ಆರೋಗ್ಯ ರಕ್ಷಣೆ ಕಷ್ಟದ ಕೆಲಸವಲ್ಲ. ಬಡವರಿಗೆ ಆರೋಗ್ಯ ಭಾಗ್ಯ ಕಲ್ಪಿಸುವ ಜವಾಬ್ದಾರಿ ಸರ್ಕಾರಿ ವೈದ್ಯರ ಮೇಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯರಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.
ಸಮಾಜದಲ್ಲಿ ತಾರತಮ್ಯದ ಇರುವ ಕಾರಣಕ್ಕೆ ಉತ್ತಮ ಆರೋಗ್ಯ, ಉತ್ತಮ ಶಿಕ್ಷಣ, ಒಳ್ಳೆ ಅವಕಾಶಗಳು ಸಿಗುತ್ತಿಲ್ಲ. ಬಡವರು ಖಾಸಗಿ ಆಸ್ಪತ್ರೆಗೆ ಹೋಗುವ ಅನಿವಾರ್ಯತೆ ಬಾರದ ರೀತಿಯಲ್ಲಿ ಸರ್ಕಾರಿ ವೈದ್ಯರು ವೃತ್ತಿಪರತೆ, ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಹಳ್ಳಿಗಳಿಂದ, ಬಡತನ, ಶೋಷಿತ, ಹಿಂದುಳಿದ ಕೌಟುಂಬಿಕ ಹಿನ್ನೆಲೆಯಿಂದ ಬರುತ್ತಿರುವ ವೈದ್ಯರ ಪ್ರಮಾಣವೇ ಹೆಚ್ಚಾಗಿದೆ. ಇವರು ಗ್ರಾಮೀಣ ಭಾಗಗಳಲ್ಲಿ ಕೆಲಸ ಮಾಡಲು ಹೆಚ್ಚು ಉತ್ಸಾಹದಿಂದ ಸ್ವಯಂಪ್ರೇರಿತವಾಗಿ ಮುಂದೆ ಬರಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬರುವ ರೋಗಿಗಳು ತಮ್ಮದೇ ಹಿನ್ನೆಲೆಯವರು ಎನ್ನುವುದನ್ನು ಮರೆಯಬಾರದು.
ಅಗತ್ಯ ಸವಲತ್ತುಗಳನ್ನು ತಕ್ಕ ಮಟ್ಟಿಗೆ ದೊರಕಿಸಿಕೊಟ್ಟರೂ ಗ್ರಾಮೀಣ ಭಾಗದಲ್ಲಿ ವೈದ್ಯರು ಸೇವೆ ಸಲ್ಲಿಸಲು ಹಿಂದೇಟು ಹಾಕುತ್ತಿರುವುದು ಬೇಸರದ ಸಂಗತಿ.
ಸರ್ವರಿಗೂ ಉತ್ತಮ ಆರೋಗ್ಯ, ಶಿಕ್ಷಣ ಕೊಡುವುದು ಸರ್ಕಾರದ ಕರ್ತವ್ಯ. ಜನರ ಈ ನಿರೀಕ್ಷೆಗೆ ತಕ್ಕಂತೆ ಸರ್ಕಾರಿ ವೈದ್ಯರು, ಖಾಸಗಿ ವೈದ್ಯರು ಕರ್ತವ್ಯ ನಿರ್ವಹಿಸಬೇಕು ಎಂದರು.
ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿ ಆಗಿದ್ದ ಬಿಧಾನ್ ಚಂದ್ರ ರಾಯ್ ಅವರು ಮುಖ್ಯಮಂತ್ರಿ ಆಗಿದ್ದಾಗಲೂ ವೈದ್ಯ ವೃತ್ತಿ ಮುಂದುವರೆಸಿದ್ದರು. ಜನರಿಗೆ ಆರೋಗ್ಯ ಸೇವೆ ನೀಡುತ್ತಿದ್ದರು. ಹೀಗಾಗಿ ಭಾರತ ರತ್ನ ಎನಿಸಿಕೊಂಡರು. ಪ್ರತಿಯೊಬ್ಬ ವೈದ್ಯರಿಗೂ ಬಿ.ಸಿ.ರಾಯ್ ಮಾದರಿ ಆಗಲು ಏಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದರು.
ಎಲ್ಲರೂ ಅಂಬೇಡ್ಕರ್ ಆಗಲು, ಬುದ್ದ ಆಗಲು, ಗಾಂಧಿ ಆಗಲು ಸಾಧ್ಯವಿಲ್ಲ. ಆದರೆ ಅವರ ದಾರಿಯಲ್ಲಿ ನಡೆಯಲು ಎಲ್ಲರಿಗೂ ಸಾಧ್ಯವಿದೆ. ವೈದ್ಯ ಸಮುದಾಯ ಡಾಕ್ಟರ್ ಬಿಧಾನ್ ಚಂದ್ರ ರಾಯ್ ಅವರು ಹಾಕಿಕೊಟ್ಟ ಮಾದರಿ ದಾರಿಯಲ್ಲಿ ನಡೆಯಲು ಶ್ರಮಿಸಬೇಕು ಎಂದು ಕರೆ ನೀಡಿದರು.
ವೇದಿಕೆಯಲ್ಲಿ ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ , ಇಲಾಖೆ ಕಾರ್ಯದರ್ಶಿ ಅನಿಲ್ ಕುಮಾರ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ಶಾಸಕ ರಿಜ್ವಾನ್ ಹರ್ಷದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ












Click it and Unblock the Notifications