B.Dayanand: ಪೊಲೀಸ್ ಕಮಿಷನರ್ ಬೆನ್ನಿಗೆ IPS ಅಧಿಕಾರಿಗಳು, ಮುಂದೇನಾಗುತ್ತೆ: 5 ಅಂಶಗಳು...
ಬೆಂಗಳೂರು, ಜೂನ್ 08: ರಾಯಲ್ ಚಾಲೇಂಜರ್ಸ್ ಬೆಂಗಳೂರು (RCB) ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತ (RCB fans stampede) ವೇಳೆ 11 ಮೃತಪಟ್ಟ ಬೆನ್ನಲ್ಲೆ ಸರ್ಕಾರ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರನ್ನು ಅಮಾನತು ಮಾಡಿ ಕೈ ತೊಳೆದುಕೊಂಡಿದೆ. ಸರ್ಕಾರದ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಲ್ತುಳಿತದ ನಂತರ ರಾಜಕೀಯ ಬೆಳವಣಿಗೆ ನಡೆದಿವೆ. ಘಟನೆಗೆ ಪೊಲೀಸರನ್ನು ಹೊಣೆ ಮಾಡಲಾಗಿದೆ. ಪೊಲೀಸ್ ಆಯುಕ್ತರ ಅಮಾನತು ವಿಚಾರ ದ್ಯ ಕೇಂದ್ರ ಸರ್ಕಾರದ ಅಂಗಳದಲ್ಲಿದೆ. ಹಾಗಾದರೆ ಮುಂದೇನಾಗುತ್ತೆ? ಎಂಬುದರ ಕಾತರತೆ ಕಾಡುತ್ತಿದೆ. ಇದಕ್ಕೆ ಸಂಬಂಧಿಸಿದ 5 ಅಂಶಗಳು ಇಲ್ಲಿವೆ.
5 ಪ್ರಮುಖ ಅಂಶಗಳು
* ಬೆಂಗಳೂರು ಪೊಲೀಸ್ ಆಯುಕ್ತರ ಅಮಾನರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡುತ್ತದೆಯೋ ಎಂಬುದರ ಮೇಲೆ ಎತ್ತರ ಚಿತ್ತ ನೆಟ್ಟಿದೆ. ರಾಜ್ಯ ವಿಪಕ್ಷ ನಾಯಕರು ಸಿದ್ದರಾಮಯ್ಯ ಸರ್ಕಾರವು ಉನ್ನತ ಪೊಲೀಸ್ ಅಧಿಕಾರಿ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಬಲಿಪಶುವನ್ನಾಗಿ ಮಾಡಿದ ನಿರ್ಧಾರ, ಧೋರಣೆಯಲ್ಲಿ ಟೀಕಿಸಿದ್ದಾರೆ. ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿದ್ದಾರೆ.

* ಕೇಂದ್ರ ಸರ್ಕಾರವು ಭಾರತೀಯ ಪೊಲೀಸ್ ಸೇವೆ (IPS) ಅಧಿಕಾರಿಯಾಗಿರುವ ಪೊಲೀಸ್ ಆಯುಕ್ತರ ಅಮಾನತನ್ನು 30 ದಿನಗಳ ಒಳಗೆ ಅನುಮೋದಿಸಬೇಕು ಎಂಬ ನಿಯಮವಿದೆ. ಕೇಂದ್ರ ಸರ್ಕಾರ ತನ್ನ ನಿರ್ಧಾರ ಪ್ರಕಟಿಸಲು ಇನ್ನು ಸಮಯ ವಿದೆ.
* ಅಮಾನತುಗೊಂಡ ಪೊಲೀಸ್ ಅಧಿಕಾರಿಯನ್ನು ಅನೇಕ ಐಪಿಎಸ್ ಅಧಿಕಾರಿಗಳು ಬೆಂಬಲಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆಗೆದುಕೊಂಡ ಅಮಾನತು ನಿರ್ಧಾರಕ್ಕೆ ಕೇಂದ್ರ ಅನುಮೋದನೆ ನೀಡದಂತೆ ರಾಜ್ಯ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ.
* ಬೆಂಗಳೂರಿನ ಮಾಜಿ ಪೊಲೀಸ್ ಆಯುಕ್ತ ಹಾಗೂ ಬಿಜೆಪಿ ನಾಯಕ ಭಾಸ್ಕರ್ ರಾವ್ ಅವರು ತೀಕ್ಷಣವಾಗಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯ ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ಭಯಭೀತರಾಗಿದ್ದಾರೆ' ಎಂದು ಟೀಕಿಸಿದ್ದಾರೆ. ಪೊಲೀಸ್ ಆಯುಕ್ತರ ಅಮಾನತು ರದ್ದುಗೊಳಿಸಬೇಕೆಂದು ತಾವು ಬಿಜೆಪಿ ಹೈಕಮಾಂಡ್ ಅನ್ನು ಕೇಳುವುದಾಗಿ ತಿಳಿಸಿದ್ದಾರೆ.
* ಕಾಲ್ತುಳಿತ ಪ್ರಕರಣ ಬಳಿಕ ಐಪಿಎಸ್ ಹಾಗೂ ಇತರ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಕೈಗೊಂಡ ಕ್ರಮವು ಖಾಕಿ ನೈತಿಕ ಸ್ಥೈರ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಅಮಾನತು ಕರ್ನಾಟಕ ಪೊಲೀಸರ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ. ಬೆಂಗಳೂರು ನಗರ ಸುರಕ್ಷತೆಗೆ ಶ್ರಮಿಸಿದವರಿಗೆ ಸರ್ಕಾರ ಅಮಾನತಿನ ಬಳುವಳಿ ನೀಡಿದೆ. ಇದು ಖಂಡನೀಯ ಎಂದು ಭಾಸ್ಕರ್ ರಾವ್ ಟೀಕಿಸಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications