ಬೆಂಗಳೂರು: ಫ್ರೀಡಂ ಪಾರ್ಕ್ನಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕೆಂಬ ಆದೇಶದ ಹಿಂಪಡೆಯಿರಿ: ಹಲವು ಸಂಘಟನೆಗಳ ಆಕ್ರೋಶ
ಬೆಂಗಳೂರು, ಅಕ್ಟೋಬರ್, 02: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ ಮಾಡುವಂತಿಲ್ಲ, ಸರ್ಕಾರದ ವಿರುದ್ಧ ಗುಂಪು ಗೂಡಿ ಆಕ್ರೋಶ ಹೊರ ಹಾಕಲು ಅನುಮತಿ ಇಲ್ಲ. ಪ್ರತಿಭಟನೆ ಮಾಡಲೇ ಬೇಕು ಅಂತಿದ್ರೆ ಫ್ರೀಡಂ ಪಾರ್ಕ್ಗೆ ಬಂದು ಪ್ರತಿಭಟನೆ ಮಾಡಬೇಕು ಎನ್ನುವ ಆದೇಶ ಹೊರಬಿದ್ದಿತ್ತು. ಸದ್ಯ ಈ ವಿಚಾರ ಸಾಕಷ್ಟು ಸಂಘಟನೆಗಳ ಆಕ್ರೋಶಕ್ಕೆ ಕಾರಣ ಆಗಿದೆ. ಯಾವ ಜಾಗದಲ್ಲಿ ನಮಗೆ ಅನ್ಯಾಯ ಆಗಿದ್ಯೋ ಅಲ್ಲಿ ಧ್ವನಿ ಎತ್ತಬೇಕು. ಆದ್ರೆ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡಬೇಕು ಅಂದ್ರೆ ಎಷ್ಟು ಸರಿ? ಅಂತಾ ಪ್ರಶ್ನೆ ಹಲವು ದಿನಗಳಿಂದ ಮಾಡುತ್ತಲೇ ಇದ್ದರು.
ಮುಂದುವರಿದ ಭಾಗವಾಗಿ ಇಂದು ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಮಾಡಿ ಹಲವು ಸಂಘಟನೆಗಳು ಆಕ್ರೋಶ ಹೊರ ಹಾಕಿದೆ. ಪ್ರತಿಭಟನೆ ಮಾಡಿದೆ. ಪ್ರತಿಭಟಿಸುವ ಹಕ್ಕಿಗಾಗಿ ಮೆರವಣಿಗೆ ಅನ್ನೋ ಘೋಷ ವಾಕ್ಯದ ಜೊತೆ ಪ್ರತಿಭಟಿಸಲಾಯಿತು.

ಹೋರಾಟವನಗನು ಫ್ರೀಡಂ ಪಾರ್ಕ್ಗೆ ಸೀಮಿತಮಾಡಿರುವ ಆದೇಶದ ವಿರುದ್ಧ ಪ್ರತಿಭಟನೆ ಮಾಡಿದ್ದು, ಜನಾಂದೋಲನ ಸಮಿತಿಯಿಂದ ಹೋರಾಟ ಮಾಡಲಾಗಿತ್ತು. ಮೌರ್ಯ ಸರ್ಕ್ಲ್ನಿಂದ ವಿಧಾನಸೌಧದ ಅಂಬೇಡ್ಕರ್ ಪ್ರತಿಮೆವರೆಗೂ ಪ್ರತಿಭಟನಾ ಮೆರವಣಿಗೆ ಮಾಡುವ ಪ್ಲಾನ್ ಮಾಡಿಕೊಂಡಿದ್ದರು. ಈ ವೇಳೆ ಪ್ರತಿಭಟನೆಯನ್ನು ಫ್ರೀಡಂ ಪಾರ್ಕ್ಗೆ ಸೀಮಿತವಾಗಿರಿಸಿರುವ ಆದೇಶ ಹಿಂಪಡೆಯುವಂತೆ ಸರ್ಕಾರಕ್ಕೆ ಆಗ್ರಹ ಮಾಡಲಾಯಿತು.
ಪ್ರಜಾಪ್ರಭುತ್ವದ ಉಳಿವಿಗಾಗಿ ನಡೆಯುತ್ತಿರುವ ಹೋರಾಟ ಇದು, ನಮ್ಮ ಪ್ರತಿಭಟನೆ ತಡೆದು ಅವರ ಇಷ್ಟಕ್ಕೆ ತಕ್ಕಂತೆ ನಿಯಮಗಳನ್ನು ಮಾಡುತ್ತಿದ್ದಾರೆ. ಪ್ರತಿಭಟನೆ ಮಾಡಿದರೆ ಅವರ ವಿರುದ್ಧವೇ ಎಫ್ಐಆರ್ ಹಾಕುವ ಕೃತ್ಯ ನಡೆಯುತ್ತಿದೆ. ಇದನ್ನು ಕೊಡಲೇ ರದ್ದು ಮಾಡಬೇಕು ಎಂದು ಸಂಘಟನೆಗಳು ಘೋಷಣೆ ಕೂಗಿದವು.
ನಮ್ಮ ಹೋರಾಟಕ್ಕಾಗಿ ನಮ್ಮ ಪ್ರತಿಭಟನೆ ಎಂದು ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರದ ಘೋಷಣೆ ಕೂಗಿದರು. ಈ ವೇಳೆ ಮಾವಳ್ಳಿ ಶಂಕರ್ ಗೌಡ, ವಿನಯ್ ಶ್ರೀವತ್ಸವ್ಯ ಸೇರಿ 100ಕ್ಕೂ ಹೆಚ್ಚು ಪ್ರತಿಭಟನಾಕಾರರು ಭಾಗಿ ಆಗಿದ್ದರು. ಫ್ರೇಡ್ಸ್ ಫಾರ್ ಫ್ಯೂಚರ್, ಸ್ಲಂ ಮಹಿಳಾ ಸಂಘಟನೆ, ವಿದ್ಯಾರ್ಥಿ ಸಂಘಟನೆಗಳು , ಪಿಪಲ್ ಯುನಿಯನ್ ಸಂಘಟನೆ, ಬಹುತ್ವ ಕರ್ನಾಟಕ, ಗಮನ ಮಹಿಳಾ ಸಮೂಹ, ವಕೀಲರ ಸಂಘಟನೆ ಸೇರಿದಂತೆ 35ಕ್ಕೂ ಹೆಚ್ಚು ಸಂಘಟನೆಗಳು ಭಾಗಿಯಾಗಿದ್ದವು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications