ಮಾನ್ಯತಾ ಟೆಕ್ ಪಾರ್ಕ್ ವಿರುದ್ಧ ಕ್ರಿಮಿನಲ್ ಪ್ರಕರಣ?
ಬೆಂಗಳೂರು, ಅ.08: ರಾಜ ಕಾಲುವೆ ಒತ್ತುವರಿ ಮಾಡಿಕೊಂಡ ಮಾನ್ಯತಾ ಟೆಕ್ ಪಾರ್ಕ್ ವಿರುದ್ಧ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕ್ರಿಮಿನಲ್ ಪ್ರಕರಣ ದಾಖಲಿಸಲಿದೆ ಎಂದು ಮೇಯರ್ ಮಂಜುನಾಥ್ ರೆಡ್ಡಿ ಅವರು ಗುರುವಾರ ಹೇಳಿದ್ದಾರೆ.
ವಸಂತನಗರ ವಾರ್ಡ್ನಲ್ಲಿ ಬಿಬಿಎಂಪಿ ವತಿಯಿಂದ ನಿರ್ಮಿಸ ಲಾಗಿರುವ ವಾಣಿಜ್ಯ ಸಮುಚ್ಚಯವನ್ನು ಉದ್ಘಾಟಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು. ಮಾನ್ಯತಾ ಟೆಕ್ಪಾರ್ಕ್ನವರು ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಿಸಿದ್ದಾರೆ.
ಒತ್ತುವರಿ ತೆರವುಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಅವರು ಪ್ರತಿಕ್ರಿಯಿಸಿಲ್ಲ. ಪ್ರಕಾಶ್ ಎಂಬ ಬಾಲಕ ರಾಜಕಾಲುವೆಯಲ್ಲಿ ಕೊಚ್ಚಿಹೋದ ಪ್ರಕರಣಕ್ಕೆ ಒತ್ತುವರಿಯೇ ಕಾರಣವಾಗಿದೆ. ಮಾನ್ಯತಾ ಟೆಕ್ಪಾರ್ಕ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸೂಚಿಸಲಾಗಿದೆ ಎಂದರು.

ದೇವರಜೀವನಹಳ್ಳಿ (ಡಿ.ಜೆ.ಹಳ್ಳಿ) ಬಳಿಯ ಪಿ ಅಂಡ್ ಟಿ ಕಾಲೋನಿ ನಿವಾಸಿವೆಂಕಟೇಶ್ ಅವರ ಪುತ್ರ, ಬೆಂಗಳೂರು ತಮಿಳು ಸಂಘಂ ಸ್ಕೂಲ್ ನಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದ ಪ್ರಕಾಶ್ ಎಂಬಾತನ ಶವ ಗುರುವಾರ ಬೆಳಗ್ಗೆ ಪತ್ತೆಯಾಗಿದೆ.
ಮೃತ ಬಾಲಕನ ಕುಟುಂಬಕ್ಕೆ ಸಾಂತ್ವನ ಹೇಳಲು ಮೇಯರ್ ಮಂಜುನಾಥ್ ಅವರು ಆಗಮಿಸಿದ್ದರು. ರಾಜಕಾಲುವೆಯಲ್ಲಿ ಕೊಚ್ಚಿಹೋಗಿ ಮೃತಪಟ್ಟ ಬಾಲಕ ಪ್ರಕಾಶ್ ಕುಟುಂಬ ವರ್ಗದವರಿಗೆ ಮಾನ್ಯತಾ ಟೆಕ್ಪಾರ್ಕ್ ವತಿಯಿಂದಲೇ ಪರಿಹಾರ ಕೊಡಿಸುವುದಾಗಿ ಮೇಯರ್ ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮೇಯರ್, ಆಯಾ ವಾರ್ಡ್ಗಳಲ್ಲಿ ಚರಂಡಿ ವ್ಯವ್ಥೆಯನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಲ್ಲಿ ಅಧಿಕಾರಿಗಳು ವಿಫಲವಾಗಿರುವುದು ಕಂಡು ಬಂದಿದೆ.
ಟೆಕ್ಪಾರ್ಕ್ನವರು ಒತ್ತುವರಿ ಮಾಡಿಕೊಂಡಿರುವ ರಾಜಕಾಲುವೆಯನ್ನು ಈ ಕೂಡಲೇ ತೆರವುಗೊಳಿಸಲು ಸೂಚಿಸಿದ್ದೇವೆ ಇನ್ನು ಮುಂದೆ ಯಾವುದೇ ಚರಂಡಿಗಳಲ್ಲಿ ಅನಾಹುತ, ಪ್ರಾಣಹಾನಿ ಸಂಭವಿಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ












Click it and Unblock the Notifications