ಮಾನ್ಯತಾ ಟೆಕ್ ಪಾರ್ಕ್ ವಿರುದ್ಧ ಕ್ರಿಮಿನಲ್ ಪ್ರಕರಣ?
ಬೆಂಗಳೂರು, ಅ.08: ರಾಜ ಕಾಲುವೆ ಒತ್ತುವರಿ ಮಾಡಿಕೊಂಡ ಮಾನ್ಯತಾ ಟೆಕ್ ಪಾರ್ಕ್ ವಿರುದ್ಧ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕ್ರಿಮಿನಲ್ ಪ್ರಕರಣ ದಾಖಲಿಸಲಿದೆ ಎಂದು ಮೇಯರ್ ಮಂಜುನಾಥ್ ರೆಡ್ಡಿ ಅವರು ಗುರುವಾರ ಹೇಳಿದ್ದಾರೆ.
ವಸಂತನಗರ ವಾರ್ಡ್ನಲ್ಲಿ ಬಿಬಿಎಂಪಿ ವತಿಯಿಂದ ನಿರ್ಮಿಸ ಲಾಗಿರುವ ವಾಣಿಜ್ಯ ಸಮುಚ್ಚಯವನ್ನು ಉದ್ಘಾಟಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು. ಮಾನ್ಯತಾ ಟೆಕ್ಪಾರ್ಕ್ನವರು ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಿಸಿದ್ದಾರೆ.
ಒತ್ತುವರಿ ತೆರವುಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಅವರು ಪ್ರತಿಕ್ರಿಯಿಸಿಲ್ಲ. ಪ್ರಕಾಶ್ ಎಂಬ ಬಾಲಕ ರಾಜಕಾಲುವೆಯಲ್ಲಿ ಕೊಚ್ಚಿಹೋದ ಪ್ರಕರಣಕ್ಕೆ ಒತ್ತುವರಿಯೇ ಕಾರಣವಾಗಿದೆ. ಮಾನ್ಯತಾ ಟೆಕ್ಪಾರ್ಕ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸೂಚಿಸಲಾಗಿದೆ ಎಂದರು.

ದೇವರಜೀವನಹಳ್ಳಿ (ಡಿ.ಜೆ.ಹಳ್ಳಿ) ಬಳಿಯ ಪಿ ಅಂಡ್ ಟಿ ಕಾಲೋನಿ ನಿವಾಸಿವೆಂಕಟೇಶ್ ಅವರ ಪುತ್ರ, ಬೆಂಗಳೂರು ತಮಿಳು ಸಂಘಂ ಸ್ಕೂಲ್ ನಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದ ಪ್ರಕಾಶ್ ಎಂಬಾತನ ಶವ ಗುರುವಾರ ಬೆಳಗ್ಗೆ ಪತ್ತೆಯಾಗಿದೆ.
ಮೃತ ಬಾಲಕನ ಕುಟುಂಬಕ್ಕೆ ಸಾಂತ್ವನ ಹೇಳಲು ಮೇಯರ್ ಮಂಜುನಾಥ್ ಅವರು ಆಗಮಿಸಿದ್ದರು. ರಾಜಕಾಲುವೆಯಲ್ಲಿ ಕೊಚ್ಚಿಹೋಗಿ ಮೃತಪಟ್ಟ ಬಾಲಕ ಪ್ರಕಾಶ್ ಕುಟುಂಬ ವರ್ಗದವರಿಗೆ ಮಾನ್ಯತಾ ಟೆಕ್ಪಾರ್ಕ್ ವತಿಯಿಂದಲೇ ಪರಿಹಾರ ಕೊಡಿಸುವುದಾಗಿ ಮೇಯರ್ ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮೇಯರ್, ಆಯಾ ವಾರ್ಡ್ಗಳಲ್ಲಿ ಚರಂಡಿ ವ್ಯವ್ಥೆಯನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಲ್ಲಿ ಅಧಿಕಾರಿಗಳು ವಿಫಲವಾಗಿರುವುದು ಕಂಡು ಬಂದಿದೆ.
ಟೆಕ್ಪಾರ್ಕ್ನವರು ಒತ್ತುವರಿ ಮಾಡಿಕೊಂಡಿರುವ ರಾಜಕಾಲುವೆಯನ್ನು ಈ ಕೂಡಲೇ ತೆರವುಗೊಳಿಸಲು ಸೂಚಿಸಿದ್ದೇವೆ ಇನ್ನು ಮುಂದೆ ಯಾವುದೇ ಚರಂಡಿಗಳಲ್ಲಿ ಅನಾಹುತ, ಪ್ರಾಣಹಾನಿ ಸಂಭವಿಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications