ವಿಧಾನಸಭಾ ಚುನಾವಣೆ: ಮೊದಲ ಬಾರಿಗೆ 'ಮಾರ್ಕ್3' ಮತಯಂತ್ರ ಬಳಕೆ
ಬೆಂಗಳೂರು, ಏಪ್ರಿಲ್ 16: ಕೇಂದ್ರ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಮಾರ್ಕ್ 3 ಮಾದರಿಯ ಎಲೆಕ್ಟ್ರಾನಿಕ ಮತಯಂತ್ರವನ್ನು ಕಂಟ್ರೋಲ್ ಯುನಿಟ್ ಹಾಗೂ ವಿವಿಪ್ಯಾಟ್ ಸಮೇತ ದೇಶದಲ್ಲೇ ಮೊದಲ ಬಾರಿಗೆ ಬಳಕೆ ಮಾಡುತ್ತಿದೆ.
ಆ ಪೈಕಿ ಬೆಂಗಳೂರಿನ 3250 ಮತ ಕೇಂದ್ರಗಳಲ್ಲಿ ಅಳವಡಿಸಲಾಗುತ್ತಿದೆ. ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿ ಈ ಮೊದಲು ಮಾರ್ಕ್ 1 ಹಾಗೂ ಮಾರ್ಕ್ 2 ಮತಯಂತ್ರಗಳನ್ನು ಮಾತ್ರ ಬಳಕೆ ಮಾಡಲಾಗುತ್ತಿತ್ತು.
ಇದೀಗ ಮಾರ್ಕ್ 3 ಮಾದರಿಯ ಮತಯಂತ್ರಗಳನ್ನು ವಿವಿಪ್ಯಾಟ್ ಹಾಗೂ ಕಂಟ್ರೋಲ್ ಯುನಿಟ್ ಸಹಿತ ಬಳಸುತ್ತಿದ್ದು, ಇಂತಹ ಯಂತ್ರಗಳಲ್ಲಿ 324 ಅಭ್ಯರ್ಥಿಗಳ ಹೆಸರುಗಳನ್ನು ಅಳವಡಿಸಬಹುದಾಗಿದೆ ಎಂದು ತಿಳಿಸಿದರು.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಬೆಂಗಳೂರಿನಲ್ಲಿ 2,26,364 ಮತದಾರರನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದ್ದು, ಒಟ್ಟು 88 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. ಈಗಾಗಲೇ ಎಲ್ಲಾ ರಾಜಕೀಯ ಪಕ್ಷಗಳ ಜತೆ ಸಭೆ ನಡೆಸಲಾಗಿದ್ದು, ಅವರ ಕುಂದು ಕೊರತೆಗಳು ಹಾಗೂ ದೂರುಗಳನ್ನು ಆಲಿಸಲಾಗಿದೆ.

ಮಂಗಳವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಬೆಳಗ್ಗೆ 11 ಗಂಟೆಯಿಂದ ನಾಮಪತ್ರ ಸ್ವೀಕಾರ ಶುರುವಾಗಲಿದೆ ಎಂದು ತಿಳಿಸಿದರು. ರಾಜಕೀಯ ಪಕ್ಷಗಳು ಮತದಾನದ ಸಂದರ್ಭದಲ್ಲಿ ಯಾವುದೇ ಪಕ್ಷದ ಚಿಹ್ನೆ ಅಥವಾ ಅಭ್ಯರ್ಥಿಯ ಹೆಸರಿಲ್ಲದ ಓಟರ್ ಸ್ಲಿಪ್ ಗಳನ್ನು ಕೊಡಬಹುದಾಗಿದೆ ಅಲ್ಲದೆ ಯಾವುದೇ ಪಕ್ಷದ ಗುರುತು ಅಥವಾ ಅಭ್ಯರ್ಥಿಗಳ ಹೆಸರಿರುವ ಸ್ಲಿಪ್ ಗಳನ್ನು ನೀಡಿದರೆ ಚುನಾವಣಾ ಮಾದರಿ ಸಂಹಿತೆ ಉಲ್ಲಂಘನೆಯಾಗಲಿದೆ ಎಂದು ಸ್ಪಷ್ಟಪಡಿಸಿದರು.
ಹತ್ತು ಸಾವಿರ ಡೆಪಾಸಿಟ್ ಇಡಬೇಕು. ಎಸ್.ಸಿ, ಎಸ್.ಟಿ ಅಭ್ಯರ್ಥಿಗಳಿಗೆ ಐದು ಸಾವಿರ. ಸಾಮಾನ್ಯ ವಾರ್ಡಲ್ಲಿ ನಿಂತರೆ ಹತ್ತು ಸಾವಿರ ಕಟ್ಟಬೇಕು. ಎರಡು ಒರ್ಜಿನಲ್ ಸಹಿ ಇರಬೇಕು. ಸಾರ್ವಜನಿಕ ರಜೆ ದಿನಗಳ ಸಂದರ್ಭದಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಂತಿಲ್ಲ, ಬೆಳಗ್ಗೆ 11 ರಿಂದ ಮಧ್ಯಾಹ್ನ 3.30ರ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದ್ದ ನಂತರದಲ್ಲಿ ಸ್ವೀಕರಿಸಲಾಗುವುದಿಲ್ಲ.
ಸಣ್ಣ ಪುಟ್ಟ ತಪ್ಪುಗಳಾಗಿದ್ದರೆ ನಾಮಪತ್ರವನ್ನೇ ಸ್ವೀಕರಿಸೋದಿಲ್ಲ. ಈವರೆಗೂ ಅಬಕಾರಿ ಇಲಾಖೆಯಿಂದ 903 ತಪಾಸಣೆ ಮಾಡಲಾಗಿದೆ. 622 ಪ್ರಕರಣ ದಾಖಲಿಸಲಾಗಿದ್ದು, 238ಜನರನ್ನ ವಶಕ್ಕೆ ಪಡೆಯಲಾಗಿದೆ. 7,630 ಲೀಟರ್ ಲಿಕ್ಕರ್. 3687 ಲೀಟರ್ ಬಿಯರ್. 179 ಲೀಟರ್ ವೈನ್ ಹಾಗೂ 83,990 ಹಣ ವಶಕ್ಕೆ ಪಡೆಯಲಾಗಿದೆ. ಒಟ್ಟು 62.30ಲಕ್ಷ ಅಂತ ಅಂದಾಜಿಸಲಾಗಿದೆ ಎಂದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications