ಪತ್ನಿಯ ಸ್ನೇಹಿತೆ ಮೇಲೆ ಅತ್ಯಾಚಾರ: ಗಂಡ ಜೈಲಿಗೆ

ಘಟನೆ ವಿವರ: ಸ್ಥಳೀಯ ಫೈನಾನ್ಸ್ ಕಂಪನಿಯೊಂದರಲ್ಲಿ ಉದ್ಯೋಗಿ ಆಗಿರುವ ಶ್ರೀನಿವಾಸ್ ಕಳೆದ 5-6 ವರ್ಷಗಳ ಹಿಂದೆ ವಿವಾಹವಾಗಿದ್ದ. ಈತ 6 ತಿಂಗಳ ಹಿಂದೆ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ರಚನಾ (23) (ಹೆಸರು ಬದಲಿಸಿದೆ) ಮೇಲೆ ಮೋಹಗೊಂಡಿದ್ದ. ರಚನಾ, ಶ್ರೀನಿವಾಸ್ ಪತ್ನಿಯ ಸ್ನೇಹಿತೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಗಣೇಶ ಹಬ್ಬದ ಸಂದರ್ಭದಲ್ಲಿ ಆಕೆ ಮನೆಗೆ ಬಂದಿದ್ದಾಗ ಶ್ರೀನಿವಾಸ್ ತಂಟೆ ಮಾಡಿದ್ದ ಎನ್ನಲಾಗಿದೆ. ನಂತರ ಮೂರ್ನಾಲ್ಕು ದಿನ ಕಳೆದ ನಂತರ ಆಕೆಗೆ ದೂರವಾಣಿ ಕರೆ ಮಾಡಿ ಪತ್ನಿಗೆ ಅಪಘಾತವಾಗಿದೆ. ಮನೆಗೆ ಬಂದು ನೋಡಿಕೊಂಡು ಹೋಗಿ ಎಂದು ಹೇಳಿದ್ದಾನೆ. ಅದರಂತೆ ರಚನಾ ಮನೆಗೆ ಬಂದಾಗ ಚಾಕು ತೋರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗಿದೆ.
ಕಳೆದ ಎರಡು ತಿಂಗಳ ಹಿಂದೆ ಶ್ರೀನಿವಾಸನ ಕುಕೃತ್ಯದ ಬಗ್ಗೆ ಪತ್ನಿಗೆ ಗೊತ್ತಾಗಿತ್ತು ಎನ್ನಲಾಗಿದೆ. ಹೇಗಾದರೂ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಲು ಪ್ರಯತ್ನ ನಡೆಸಿದ್ದರು. ದೌರ್ಜನ್ಯಕ್ಕೊಳಗಾಗಿದ್ದ ರಚನಾರನ್ನು ಕರೆಸಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಮದುವೆಯಾಗುವಂತೆ ಬೇಡಿಕೆ ಇಟ್ಟಿದ್ದಳು.
ಇದಕ್ಕೆ ಶ್ರೀನಿವಾಸ್ ಒಪ್ಪದೆ ಸತಾಯಿಸಿದ ಹಿನ್ನೆಲೆಯಲ್ಲಿ ದಾರಿ ಕಾಣದೆ ಯುವತಿ ರಾಜಾಜಿನಗರ ಠಾಣೆಗೆ ಬಂದು ದೂರು ನೀಡಿದ್ದಾರೆ. ಪ್ರಸ್ತುತ ರಚನಾ ಗರ್ಭಿಣಿ ಎಂದು ತಿಳಿದು ಬಂದಿದೆ. ರಾಜಾಜಿನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications