ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚೀನಾ ವಾರ್‌ನಲ್ಲಿ ಮಡಿದವರ ವೀರಗಲ್ಲು ಶೀಘ್ರ ಸ್ಥಳಾಂತರ: ಪರಮೇಶ್ವರ

|
Google Oneindia Kannada News

ಬೆಂಗಳೂರು, ನವೆಂಬರ್ 12: ನ್ಯಾಷನಲ್ ಮಿಲಿಟರಿ ಸ್ಮಾರಕಕ್ಕೆ ಶೀಘ್ರವೇ ವೀರಗಲ್ಲು ಸ್ಥಳಾಂತರಿಸುವ ಕೆಲಸವನ್ನು ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.

ಭಾರತ ಮತ್ತು ಚೀನಾ ನಡುವೆ ನಡೆದ ಯುದ್ಧದ ಸಂದರ್ಭದಲ್ಲಿ ಹುತಾತ್ಮರಾದ ವೀರಯೋಧರ ಸ್ಮರಣಾರ್ಥವಾಗಿ ಇಂದು ನ್ಯಾಷನಲ್ ಮಿಲಿಟರಿ ಸ್ಮಾರಕದಲ್ಲಿ ಪುಷ್ಪ ಸಮರ್ಪಿಸುವ ಮೂಲಕ ಗೌರವ ಸಲ್ಲಿಸಿದರು.

ಜಮ್ಮು ಮತ್ತು ಕಾಶ್ಮೀರ: ಸೈನಿಕನಿಗೆ ಕಲ್ಲಿನಿಂದ ಹೊಡೆದು ಸಾಯಿಸಿದ ದುಷ್ಕರ್ಮಿ ಯುವಕರು ಜಮ್ಮು ಮತ್ತು ಕಾಶ್ಮೀರ: ಸೈನಿಕನಿಗೆ ಕಲ್ಲಿನಿಂದ ಹೊಡೆದು ಸಾಯಿಸಿದ ದುಷ್ಕರ್ಮಿ ಯುವಕರು

ಬಳಿಕ ಮಾತನಾಡಿದ ಅವರು, ಚೀನಾ ಹಾಗೂ ಪಾಕಿಸ್ತಾನದ ಗಡಿ ಕಾಯುವ ಯೋಧರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಸಮರ್ಪಿಸಿದ್ದಾರೆ. ಅವರನ್ನು ಪ್ರತಿ ವರ್ಷ ಸ್ಮರಿಸಲೆಂದೇ ನಗರದಲ್ಲಿ ಸ್ಮಾರಕ ಉದ್ಯಾನವನ ನಿರ್ಮಿಸಿದ್ದೇವೆ. ಈ ಮೂಲಕ ಅವರಿಗೆ ಪ್ರತಿ ವರ್ಷ ಗೌರವ ಸಲ್ಲಿಸಬೇಕು ಎಂದರು.

Martyrs stones will be shifted military memoire

ಭಾರತೀಯ ಸೇನೆ ಸೇರುತ್ತಿದೆ ಭೀಕರ ಅಸ್ತ್ರ ಎಸ್‌-400, ಏನಿದರ ಸಾಮರ್ಥ್ಯ? ಭಾರತೀಯ ಸೇನೆ ಸೇರುತ್ತಿದೆ ಭೀಕರ ಅಸ್ತ್ರ ಎಸ್‌-400, ಏನಿದರ ಸಾಮರ್ಥ್ಯ?

ಈ ಸ್ಮಾರಕ ಉದ್ಯಾನವನಕ್ಕಾಗಿ 1 ಕೋಟಿ ರು. ವೆಚ್ಚ ಮಾಡಿದ್ದು ಇದರ ನಿರ್ವಹಣೆಗೂ ಪ್ರತಿ ವರ್ಷ ಹಣ ಬಿಡುಗಡೆ ಮಾಡಲಾಗುತ್ತದೆ. ಜೊತೆಗೆ ಎನ್‌ಡಬ್ಲ್ಯುಎನ್‌ ಗೂ ಪ್ರತಿ ವರ್ಷ 57 ಲಕ್ಷ ರೂ ಅನುದಾನ ಬಿಡುಗಡೆ ಮಾಡಲಿದ್ದೇವೆ ಎಂದು ಹೇಳಿದರು. ಶೀಘ್ರ ವೀರಗಲ್ಲು ಸ್ಥಳಾಂತರಿಸುವ ಕಾರ್ಯವನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.

English summary
Deputy chief minister Dr.G. Parameshwar has said that the martyr stones of Indo-China war will be shifted to national military memoire soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X