ಗಣಪತಿ ಆತ್ಮಹತ್ಯೆಯ ಪ್ರಮುಖ ಸಾಕ್ಷಿಗಳ ನಾಶ? ಇಲ್ಲಿದೆ ಸ್ಫೋಟಕ ಮಾಹಿತಿ
ಡಿವೈಎಸ್ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಭಾರೀ ಲೋಪ. ಟೌಮ್ಸ್ ನೌ ವಾಹಿನಿಯಿಂದ ಆರೋಪ. ವಿಧಿವಿಜ್ಞಾನ ತಜ್ಞರ ವರದಿಯನ್ನು ಆಧರಿಸಿ ನೀಡಲಾಗಿರುವ ವರದಿ.
ಬೆಂಗಳೂರು, ಆಗಸ್ಟ್ 23: ಕಳೆದ ವರ್ಷಾಂತ್ಯಕ್ಕೆ ಕರ್ನಾಟಕದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಭಾರೀ ಪ್ರಮಾಣದ ಲೋಪ ದೋಷಗಳಾಗಿವೆ ಎಂದು ಟೈಮ್ಸ್ ನೌ ವರದಿ ಮಾಡಿದೆ.
ಈ ಪ್ರಕರಣದ ತನಿಖೆಯ ವೇಳೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಸಂಗ್ರಹಿಸಿದ್ದ ಕೆಲವಾರು ದಾಖಲೆಗಳ ವಿವರಗಳುಳ್ಳ ವರದಿಯ ಪ್ರತಿಗಳನ್ನು ಆಧಾರವಾಗಿಟ್ಟುಕೊಂಡು ವರದಿ ಮಾಡಿರುವ ವಾಹಿನಿಯು, ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಗಂಭೀರವಾದ ಲೋಪಗಳಾಗಿದ್ದು, ಸಿಐಡಿ ತನಿಖೆಯಲ್ಲಿ ಹಲವಾರು ಅಂಶಗಳನ್ನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿದೆ.
ವಾಹಿನಿಯು ಹೇಳುವಂತೆ, ವಿಧಿವಿಜ್ಞಾನ ತಜ್ಞರ ವರದಿಯಲ್ಲಿನ ಅಂಶಗಳು ಹೀಗಿವೆ:

ಕರೆ ವಿವರ ಡಿಲೀಟ್ ಮಾಡಿದ್ದೇಕೆ?
- ಸಿಐಡಿ ವರದಿಯಲ್ಲಿ ಗಣಪತಿ ಅವರು ಲಾಡ್ಜ್ ಒಂದರ ಕೊಠಡಿಯೊಂದರಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡಿದ್ದರೆಂದು ಹೇಳಲಾಗಿದೆ. ಆದರೆ, ಅದರ ಫೋಟೋವನ್ನು ತೆಗೆದಿಲ್ಲ.
- ಗಣಪತಿ ಶವ ದೊರೆತ ಸ್ಥಳದಿಂದ ಅವರ ಮೊಬೈಲ್ ವಶಕ್ಕೆ ಪಡೆದಿರುವ ಅಧಿಕಾರಿಗಳಿಂದ ಅದರಲ್ಲಿನ ಅನೇಕ ಮಾಹಿತಿಗಳನ್ನು ಡಿಲೀಟ್ ಮಾಡಲಾಗಿದೆ. ಗಣಪತಿ ಬಳಸುತ್ತಿದ್ದ ಪೆನ್ ಡ್ರೈವ್ ಗಳಿಂದ ಅನೇಕ ಫೈಲ್ ಗಳನ್ನು ಡಿಲೀಟ್ ಮಾಡಲಾಗಿದೆ.

ಮಾಜಿ ಮಂತ್ರಿ, ಹಾಲಿ ಶಾಸಕರ ಕರೆಗಳು ಡಿಲೀಟ್ ಏಕಾದವು?
- ಅವರ ಪರ್ಸನಲ್ ಕಂಪ್ಯೂಟರ್ ನಿಂದ 100 ಇ-ಮೇಲ್ ಗಳನ್ನು ಡಿಲೀಟ್ ಮಾಡಲಾಗಿದೆ.
- ಪೆನ್ ಡ್ರೈವ್ ನಿಂದ 145 ಪಿಡಿಎಫ್ ಫೈಲ್ ಗಳು ಡಿಲೀಟ್
- ಮೊಬೈಲ್ ನ ಕಾಲ್ ಲಾಗ್ ನಲ್ಲಿದ್ದ ಕೆಲವಾರು ಕರೆಗಳು, ಹೆಸರುಗಳು ಡಿಲೀಟ್. ಇದರಲ್ಲಿ ಒಬ್ಬ ಮಾಜಿ ಮಂತ್ರಿ, ಹಾಲಿ ಕಾಂಗ್ರೆಸ್ ಶಾಸಕ, ಕೇಂದ್ರ ಸಚಿವರೊಬ್ಬರ ಸಂಬಂಧಿಯ ಕರೆಗಳ ಲಾಗ್ ಡಿಲೀಟ್ ಆಗಿದೆ.
- ಮೊಬೈಲ್ ನಲ್ಲಿದ್ದ 52 ಮೆಸೇಜ್ ಗಳು ಡಿಲೀಟ್ ಆಗಿದೆ.

ಹಲವಾರು ಅನುಮಾನಗಳು
- ಮೊಬೈಲ್ ನಲ್ಲಿದ್ದ 2500 ಫೋಟೋಗಳು ಡಿಲೀಟ್ ಆಗಿದೆ.
- ಕಂಪ್ಯೂಟರ್ ನಲ್ಲಿದ್ದ 910 ಎಕ್ಸೆಲ್ ಫೈಲ್ ಗಳು ಡಿಲೀಟ್ ಆಗಿದೆ.
- 2699 ಎಂಎಸ್ ವರ್ಡ್ ಫೈನಲ್ ಗಳು ಡಿಲೀಟ್ ಆಗಿದೆ.
- 791 ಟೆಕ್ಸ್ ಫೈಲ್ ಗಳು ಡಿಲೀಟ್ ಆಗಿದೆ.
- ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದ ಹೋಟೆಲ್ ಕೊಠಡಿಯ ಚಿಲಕ ಒಳಗಿನಿಂದ ಹಾಕಿರುವುದರ ಬಗ್ಗೆ ಅನುಮಾನ.

ಏನಿದು ಕ್ಯಾನ್ವಾಸ್ ಬೆಲ್ಟ್?
- ಗಣಪತಿ ಶವ ನೇತಾಡುತ್ತಿದ್ದ ಸೀಲಿಂಗ್ ಫ್ಯಾನ್ ನ ಮೇಲಿರುವ ಕೆಲವಾರು ಬೆರಳಚ್ಚುಗಳನ್ನು (ಫಿಂಗರ್ ಪ್ರಿಂಟ್ ಗಳನ್ನು) ಪರಿಗಣಿಸಿಲ್ಲ.
- ಅಲ್ಲದೆ, ಫ್ಯಾನಿಗೆ ಗಣಪತಿ ಬಟ್ಟೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಅದರ ಜತೆಗೇ, ಪೊಲೀಸರು ಉಪಯೋಗಿಸುವ ಕ್ಯಾನ್ವಾಸ್ ಬೆಲ್ಟ್ ಕೂಡ ಫೋಟೋದಲ್ಲಿ ಕಾಣುತ್ತಿದೆ. ಇದನ್ನು ಸಿಐಡಿಯು ತನಿಖೆಯಲ್ಲಿ ಪರಿಗಣಿಸಿಲ್ಲ.

ಸಾಕ್ಷಿಯಿಂದ ಹೇಳಿಕೆ
- ಆತ್ಮಹತ್ಯೆ ನಡೆದ ಸ್ಥಳದಲ್ಲಿ ಎರಡು ಹಾರಿಸಿರುವ ಬುಲೆಟ್ ಗಳ ಗುರುತು ಹಾಗೂ ಸಿಡಿದ ಗುಂಡಿನ ಕ್ಯಾಟ್ರಿಡ್ಜ್ ಗಳು ಪತ್ತೆಯಾಗಿದ್ದರ ಬಗ್ಗೆ ಮಾಹಿತಿ ಇಲ್ಲ. ಇದಕ್ಕೆ ಪೂರಕವಾಗಿ, ಸಿಐಡಿ ಅಧಿಕಾರಿಗಳು ತನಿಖೆಯ ವೇಳೆ, ಒಬ್ಬ ಪ್ರತ್ಯಕ್ಷ ಸಾಕ್ಷಿಯಿಂದ, ತಮ್ಮಿಂದ ಹೇಳಿಕೆ ಪಡೆದುಕೊಂಡಿದ್ದಲ್ಲದೆ, ಖಾಲಿ ಪೇಪರ್ ನ ಮೇಲೆ ಸಹಿ ಮಾಡಿಸಿಕೊಂಡಿದ್ದಾಗಿ ಹೇಳಿದ್ದನ್ನು ಪ್ರಸಾರ ಮಾಡಿರುವ ವಾಹಿನಿ, ಈ ಹೇಳಿಕೆಗೆ ಆದ್ಯತೆ ನೀಡಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications