Bengaluru Fire Accident: ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: 19 ಎಲೆಕ್ಟ್ರಿಕ್ ಸ್ಕೂಟರ್ಗಳು ಸುಟ್ಟು ಭಸ್ಮ
ಬೆಂಗಳೂರು, ಅಕ್ಟೋಬರ್ 2: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಅಕ್ಟೋಬರ್ 2) ಬೆಳ್ಳಂಬೆಳಗ್ಗೆ ಕಮರ್ಷಿಯಲ್ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ 19 ಎಲೆಕ್ಟ್ರಿಕ್ ಸ್ಕೂಟರ್ಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಕನಕಪುರ ಮುಖ್ಯರಸ್ತೆಯಲ್ಲಿನ ಯಲಚೇನಹಳ್ಳಿಯ ಮೂರು ಅಂತಸ್ತಿನ ಕಮರ್ಷಿಯಲ್ ಕಟ್ಟಡದಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಇನ್ನು 19 ಇವಿ ಬೈಕ್ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಡಾಮಿನೋಸ್ ಪಿಜ್ಜಾ ಪಾರ್ಕಿಂಗ್ ಆವರಣದಲ್ಲಿ ಇದ್ದ ಬೈಕ್ಗೆ ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ.

ಎಲೆಕ್ಟ್ರಿಕ್ ದ್ವಿಚಕ್ರವಾಹನ ಪ್ಲಗ್ ಪಾಯಿಂಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿದ್ದ ಎಲೆಕ್ಟ್ರಿಕ್ ಸ್ಕೂಟರ್ಗಳು ಹೊತ್ತಿ ಉರಿದಿವೆ. ಇದೇ ವೇಳೆ ನೆಲಮಹಡಿಯಲ್ಲಿದ್ದ 6 ಸಿಲಿಂಡರ್ಗಳು ಗ್ಯಾಸ್ ಸೋರಿಕೆಯಾಗಿ ಸ್ಫೋಟ ಆಗಿವೆ. ಸ್ಥಳೀಯರ ಮಾಹಿತಿ ಮೇರೆಗೆ ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ, ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಎಲೆಕ್ಟ್ರಿಕ್ ದ್ವಿಚಕ್ರವಾಹನ ಪ್ಲಗ್ ಪಾಯಿಂಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿದ್ದ ಎಲೆಕ್ಟ್ರಿಕ್ ಸ್ಕೂಟರ್ಗಳು ಹೊತ್ತಿ ಉರಿದಿವೆ. ಇದೇ ವೇಳೆ ನೆಲಮಹಡಿಯಲ್ಲಿದ್ದ 6 ಸಿಲಿಂಡರ್ಗಳು ಗ್ಯಾಸ್ ಸೋರಿಕೆಯಾಗಿ ಸ್ಫೋಟ ಆಗಿವೆ. ಸ್ಥಳೀಯರ ಮಾಹಿತಿ ಮೇರೆಗೆ ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ, ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಯಲಚೇನಹಳ್ಳಿಯ ಕಮರ್ಷಿಯಲ್ ಕಟ್ಟಡದ ಬೇಸ್ಮೆಂಟ್ನಲ್ಲಿ ಇವಿ ಬೈಕ್ಗಳ ಚಾರ್ಜಿಂಗ್ ಪಾಯಿಂಟ್ ಇದ್ದು, ಅಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ ಎಂದು ಶಂಕಿಸಲಾಗಿದೆ. ಚಾರ್ಜ್ ಆಗುತ್ತಿದ್ದ ಬೈಕ್ಗ ಒಂದರಲ್ಲಿ ಓವರ್ ಹೀಟ್ ಆಗಿ ಬೆಂಕಿ ತಗುಲಿದ್ದು, ಅದು ಅಕ್ಕಪಕ್ಕದಲ್ಲಿದ್ದ ಇವಿ ಬೈಕ್ಗಳಿಗೆ ಹೊತ್ತಿ ಉರಿದಿದೆ.
ಅಲ್ಲದೆ, ಬೇಸ್ಮೆಂಟ್ನಲ್ಲಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಪಾಯಿಂಟ್ನಲ್ಲಿದ್ದ ವೈರ್ಗೆ ಬೆಂಕಿ ತಗುಲಿ ಗ್ಯಾಸ್ ಲೀಕ್ ಉಂಟಾಗಿ, ಒಂದು ಸಿಲಿಂಡರ್ ಬ್ಲಾಸ್ಟ್ ಆಗಿತ್ತು. ಇದರಿಂದ ಸ್ಥಳೀಯರು ಬೆಂಕಿ ಭಯಭೀತರಾದ ಘಟನೆ ನಡೆದದಿದೆ. ಸ್ಥಳೀಯರ ಮಾಹಿತಿ ಪ್ರಕಾರ, ಬೆಳಗ್ಗೆ ಇದ್ದಕ್ಕಿದ್ದಂತೆ ಬೆಂಕಿ ತಗುಲಿ ಹೊಗೆ ಉಸಿರಾಟಕ್ಕೆ ಭಾರೀ ತೊಂದರೆಯಾಗಿದ್ದು, ತಕ್ಷಣ ಅಗ್ನಿ ಶಾಮಕ ಸಿಬ್ಬಂದಿಗೆ ಕರೆ ಮಾಡಿದೆವು ಎಂದು ತಿಳಿಸಿದರು.
ಸದ್ಯ ಘಟನೆಯಲ್ಲಿ ಯಾವುದೇ ಜೀವನ ಹಾನಿ ಉಂಟಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, 19 ಇವಿ ಬೈಕ್ಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಡೋಮಿನೋಸ್ ಪಿಜ್ಜಾ ಪಾರ್ಕಿಂಗ್ನಲ್ಲಿದ್ದ ಇತರ ವಾಹನಗಳು ಕೂಡ ಬೆಂಕಿ ಕೆನ್ನಾಲಿಗೆಗೆ ಹಾನಿಗೆ ಒಳಗಾಗಿವೆ ಎಂದು ತಿಳಿದುಬಂದಿದೆ.
ಕುಮಾರಸ್ವಾಮಿ ಲೇಔಟ್ ಪೊಲೀಸ್ ಇನ್ಸ್ಪೆಕ್ಟರ್ ಮಾತನಾಡಿದ್ದು, ಚಾರ್ಜಿಂಗ್ ಪಾಯಿಂಟ್ನಲ್ಲಿ ಶಾರ್ಟ್ ಸರ್ಕ್ಯೂಟ್ ಮತ್ತು ಗ್ಯಾಸ್ ಲೀಕ್ ಕಾರಣದಿಂದ ಅಗ್ನಿ ಅಪಘಡ ಸಂಭವಿಸಿದೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದೇವೆ. ಕಟ್ಟಡ ಮಾಲೀಕರ ವಿರುದ್ಧ ಭದ್ರತಾ ನಿಯಮಗಳ ಉಲ್ಲಂಘನೆಯ ಕುರಿತು ಪ್ರಕರಣ ದಾಖಲಿಸುತ್ತೇವೆ ಎಂದು ಹೇಳಿದ್ದಾರೆ. ಇನ್ನೂ ಇಂತಹ ಅಗ್ನಿ ಅವಘಡಗಳು ನಡೆದಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಸಹ ಎಲೆಕ್ಟ್ರಿಕ್ ಸ್ಕೂಟಿಗಳು ನಡುರಸ್ತೆಯಲ್ಲೇ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಘಟನೆಗಳು ನಡೆದಿವೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications