ಪದ್ಮಾವತಿ ಚಿತ್ರ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ
ಬೆಂಗಳೂರು, ನವೆಂಬರ್ 12 : ಹಿಂದಿ ಭಾಷೆಯ ಪದ್ಮಾವತಿ ಸಿನಿಮಾ ವಿರುದ್ಧ ರಾಷ್ಟ್ರೀಯ ರಜಪೂತ ಕರಣಿ ಸೇನೆಯು ಇಂದು(ನ.15)ರಂದು ಟೌನ್ ಹಾಲ್ ನಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಬೆಂಗಳೂರಿನ 50ಕ್ಕೂ ಹೆಚ್ಚು ಸಂಘಟನೆಗಳು ಹಾಗೂ ಕರ್ನಾಟಕಾದ್ಯಂತ ಇರುವ ವಿವಿಧ ಸಂಘಟನೆಗಳಿಂದ 500 ಕ್ಕೂ ಹೆಚ್ಚಿನ ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪದ್ಮಾವತಿ ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಹಾಗೂ ನಟಿ ದೀಪಿಕಾ ಪಡುಕೋಣೆ ಅವರ ವಿರುದ್ಧ ಘೋಷಣೆ ಕೂಗಲಾಯಿತು. ಪದ್ಮಾವತಿ ಚಲನಚಿತ್ರದಲ್ಲಿ ರಜಪೂತರನ್ನು ಕೀಳಾಗಿ ತೋರಿಸಲಾಗಿದೆ. ಪದ್ಮಾವತಿ ಚಿತ್ರದಲ್ಲಿರುವ ದೀಪಿಕಾ ಪಡುಕೋಣೆಯವರು ಮಾಡಿರುವ ನೃತ್ಯವನ್ನು ಕೈಬಿಡಬೇಕು.
ಹಿಂದಿನ ರಜಪೂತ ಇತಿಹಾಸವನ್ನು ನೋಡಿದಾಗ ರಾಣಿ ಪದ್ಮಿನಿಯವರು ಸಖಿಯರು ಮಾಡುವ ನೃತ್ಯವನ್ನು ವೀಕ್ಷಿಸುತ್ತಿರೇ ವಿನಃ ತಾವು ನೃತ್ಯ ಮಾಡುತ್ತಿರಲಿಲ್ಲ. ಇದು ರಜಪೂತ ಇತಿಹಾಸಕ್ಕೆ ಕಳಂಕ ತರುವಂತಹ ವಿಚಾರ.

ಡಿಸೆಂಬರ್ 1ರಂದು ಪದ್ಮಾವತಿ ಚಿತ್ರ ದೇಶಾದ್ಯಂತ ಬಿಡುಗಡೆಯಾಗಲಿದೆ. ಬಿಡುಗಡೆಗೂ ಮುನ್ನ ರಜಪೂತರಿಗೆ ಈ ಚಲನಚಿತ್ರವನ್ನು ನೋಡಲು ಅವಕಾಶ ಮಾಡಿಕೊಡಬೇಕು. ನಾವು ಚಿತ್ರವನ್ನು ನೋಡಿ ಅದರಲ್ಲಿರುವ ರಜಪೂತರಿಗೆ ಕಳಂಕ ತರುವ ತುಣುಕುಗಳನ್ನು ತೆಗೆಯುವಂತೆ ತಿಳಿಸುತ್ತೇವೆ.
ಒಂದೊಮ್ಮೆ ಚಿತ್ರವನ್ನು ನೋಡಲು ಅವಕಾಶ ಮಾಡಿಕೊಡದೆ ಚಿತ್ರವನ್ನು ಬಿಡುಗಡೆ ಮಾಡಿದಲ್ಲಿ ದೇಶಾದ್ಯಂತ ಉಗ್ರ ಹೋರಾಟ ಕೈಗೊಳ್ಳುವುದಾಗಿ ರಾಷ್ಟ್ರೀಯ ರಜಪೂತ ಕರಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
-
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications