ಮಾಸ್ತಿ ಕಲ್ಲು – ಒಂದು ಪೀಡಿತ ಪ್ರೇಮ ಕಥೆ, ತಪ್ಪದೇ ನೋಡಿ
ಬೆಂಗಳೂರು, ಏಪ್ರಿಲ್ 22: ಜಟ್ಟ, ಮೈತ್ರಿ ಚಲನಚಿತ್ರ ಖ್ಯಾತಿಯ ಗಿರಿರಾಜ್ ಬಿಎಂ ಅವರ ನಿರ್ದೇಶನದ 'ಮಾಸ್ತಿಕಲ್ಲು' ನಾಟಕದ ಪ್ರದರ್ಶನ ಏಪ್ರಿಲ್ 23ರಂದು ಕಮಲಾನಗರದ ಕೆಇಎ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಸತಿ ಪದ್ಧತಿಯ ಶೋಷಣೆಯ ವಿವಿಧ ನೋವುಗಳ ನೋಟವನ್ನು ತೆರೆದಿಡುವ ಈ ನಾಟಕ, ರಾಜಜಾಸ್ಥಾನದಲ್ಲಿ ನಡೆದ ರೂಪಾ ಕನ್ವರ್ ಎಂಬುವರ ಸತಿ ಸಹಗಮನದ ಕಥೆಗೆ ಹತ್ತಿರವಾಗಿದ್ದರೂ, ನಮ್ಮ ನಾಟಕವು ಒಂದು ಪ್ರೇಮಕಥೆಯಾಗಿ ವಿಭಿನ್ನತೆಯನ್ನು ತನ್ನದಾಗಿಸಿಕೊಂಡಿದೆ. ನಮ್ಮ ನಾಟಕವನ್ನು ಡಾ||ಶಿವರಾಂ ಕಾರಂತರ 'ಸರಸಮ್ಮನ ಸಮಾಧಿ' ಕಾದಂಬರಿಯ ಪ್ರೇರಣೆಯಿಂದಲೂ ರಚಿಸಲಾಗಿದೆ.
ರೂಪಾ ಕನ್ವರ್ ಅವರ ಪರಿಸ್ಥಿತಿಗೆ ಒಳಗಾದಾಗ ವಿವಿಧ ಪಾತ್ರಗಳು ಹೇಗೆ ವರ್ತಿಸಬಹುದು ಎಂಬುದನ್ನು ತೋರಿಸುವ ಪ್ರಯತ್ನ ಇದಾಗಿದೆ. ವಿವಿಧ ಪ್ರೀತಿ, ತ್ಯಾಗಗಳ ಕಥೆಗಳಿಗೆ ಸಾಕ್ಷಿಯಾಗಿ ನಿಂತಿರುವ ಹಲವು ಮಾಸ್ತಿ ಕಲ್ಲುಗಳ ಪ್ರತೀಕವಾಗಿ ನಮ್ಮ ನಾಟಕದ ಹೆಸರನ್ನು ಮಾಸ್ತಿ ಕಲ್ಲು ಎಂದಿರಿಸಿದ್ದೇವೆ. ಈ ರೀತಿಯ ಒಂದು ಕಥೆಯೆ ನಮ್ಮ ನಾಟಕದ ಸಾರ.

ಮಾಸ್ತಿ ಕಲ್ಲು- ಪ್ರಕಸಂ ಸಂಸ್ಥೆಯ 16ನೇ ಪ್ರಯೋಗವಾಗಿದ್ದು, ಗಿರಿರಾಜ್ ಬಿ.ಎಂ ಇದನ್ನು ರಚಿಸಿ ನಿರ್ದೇಶಿಸಿದ್ದಾರೆ. ನಾಟಕದ ಪ್ರಧಾನ ಪಾತ್ರಧಾರಿಯಾದ ಚಂದ್ರಯ್ಯನ ಜೀವನೋದ್ದೇಶವಾದ ಪ್ರೇತಗಳ ಅನ್ವೇಷಣೆ ಅವನನ್ನು ಹಲವು ಮಾನವಾತೀತ ಹಾಗು ರೋಮಾಂಚನಕಾರಿ ಅನುಭವ ಹಾಗು ಸನ್ನಿವೇಷಗಳಿಗೆ ಗುರಿಪಡಿಸುತ್ತದೆ. ಈ ಎಲ್ಲಾ ಸನ್ನಿವೇಷಗಳು ಪ್ರೇಕ್ಷಕರಿಗೆ ವಿಭಿನ್ನ ಅನುಭವ ನೀಡಲಿದೆ ಎಂಬ ನಂಬಿಕೆ ನಮ್ಮದು.
ನಾಟಕ: ಮಾಸ್ತಿಕಲ್ಲು
ಸ್ಥಳ: ಕೆಇಎ ಪ್ರಭಾತ್ ರಂಗಮಂದಿರ, 8ನೇ ಮುಖ್ಯರಸ್ತೆ, ಕಮಲಾನಗರ, ಬೆಂಗಳೂರು. Phone:096320 57799
ದಿನಾಂಕ: ಏಪ್ರಿಲ್ 23, ಶನಿವಾರ.
ಸಮಯ : 7.30 ಸಂಜೆ
ನಿರ್ದೇಶಕರ ನುಡಿ - ಬಿ.ಎಂ. ಗಿರಿರಾಜ್
ಒಂದು ಕೃತಿ ಒಬ್ಬೋಬ್ಬರ ಓದು ಮತ್ತು ಮಾಗುವಿಕೆಯ ಅನುಸಾರವಾಗಿ ಅವರವರಿಗೆ ಬೇರೆ ಬೇರೆ ಅರ್ಥಗಳನ್ನ ಕೋಡುತ್ತದೆ. ಕಾರಂತರ ಬರಹಗಳು ನಮ್ಮ ಅನುಭವ ಮತ್ತು ನಂಬಿಕೆಗಳನ್ನ ಓರೆಗೆ ಹಚ್ಚುತ್ತದೆ. ಹಲವು ಸಲ ಓದಿದಾಗಲೂ ಹಲವು ಅರ್ಥ ಸಾಧ್ಯತೆಗಳನ್ನ ತೋರಿ ನಮ್ಮ ಆಶಾಢಭೂತಿತನಕ್ಕೆ ಬೆಂಕಿ ಇಡುತ್ತದೆ. 60 ವರ್ಷಕ್ಕೂ ಹಿಂದೆ ರಚಿಸಿದ ಕೃತಿ ಇಂದಿಗೂ ahead of its time
ಅಂತ ಅನಿಸಿಕೊಳ್ಳುತ್ತದೆ ಅಂದರೆ ಅದು ಲೇಖಕರ ಪ್ರಜ್ವಲ ಕರ್ತೃಶಕ್ತಿಯೂ ಹೌದು ನಮ್ಮ ಸಮಾಜದ ದುರಂತ ಸ್ಥಿತಿಯೂ ಹೌದು. ಇಂತಹ ದ್ವೈತ ಆಯಾಮವನ್ನ ಅದರ ಘನ ಶಕ್ತಿಯಲ್ಲೇ ರಂಗದ ಮೇಲೆ ತರುವ ಪ್ರಾಮಾಣಿಕ ಪ್ರಯತ್ನ ನಮ್ಮದು.

ಪ್ರದರ್ಶನ ಕಲಾ ಸಂಸ್ಥೆ:
ಪ್ರಕಸಂ ಪ್ರದರ್ಶನಕಲೆಗಳ ಪ್ರಚಾರ, ಪಾಲನೆ, ಪೋಷಣೆ, ನಿರೂಪಣೆ ಹಾಗು ನಿರ್ವಹಿಸಲು ಪಣ ತೊಟ್ಟಿರುವ ಸಂಸ್ಥೆ. ಕಲಾಸೇವೆಗಾಗಿ ಪ್ರಕಸಂ ಕೆಂಗಲ್ ಹನುಮಂತಯ್ಯ ಕಲಾಸೌಧದ ನಿರ್ವಹಣೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಗುತ್ತಿಗೆಗೆ ಪಡೆದುಕೊಂಡು ಪ್ರದರ್ಶನ ಕಲೆಗಳಾದ ನಾಟಕ, ನೃತ್ಯ, ಸಂಗೀತ ಮತ್ತು ಚಲನಚಿತ್ರಗಳ ಆಯಾಮಗಳ ಪರಿಚಯವನ್ನು ಬಸವನಗುಡಿಯ ಹಾಗು ಬೆಂಗಳೂರಿನ ಸಹೃದಯಿ ನಾಗರೀಕರರಿಗೆ ಪ್ರಸ್ತುತ ಪಡಿಸಿದೆ.
ಯುವಜನರನ್ನು ಪ್ರೋತ್ಸಾಹಿಸಿ ರಂಗಭೂಮಿಗೆ ಹೊಸ ಪ್ರೇಕ್ಷಕವರ್ಗವನ್ನು ಸೃಷ್ಟಿಸಲು ಅನುಪಮ ಪ್ರದರ್ಶನ ಕಲಾ ಪ್ರಯೋಗಗಳನ್ನು ನಿರ್ಮಿಸುತ್ತ ಬಂದಿದೆ. ಈ ರಂಗಮಂಚದ ಮೇಲೆ ಪ್ರಪಂಚದ ಎಲ್ಲಾ ಭಾಗಗಳಿಂದ ಕಲಾವಿದರು ಬಂದು ತಮ್ಮ ಅನನ್ಯ ಕಲಾಜ್ಯೋತಿಯನ್ನು ಬೆಳಗಿಸಿದ್ದಾರೆ. ಜನವರಿ 2010ರಿಂದ ಜನವರಿ 2014ರವರಗೆ 1800ಕ್ಕೂ ಹೆಚ್ಚು ಕಲಾ ಪ್ರದರ್ಶನಗಳಾಗಿವೆ.
ಪ್ರದರ್ಶನ ಕಲಾ ಸಂಸ್ಥೆ, ರಾಮಾಂಜನೇಯ ಗುಡ್ದದ ಆವರಣ, ಹನುಮಂತನಗರ, ಬಸವನಗುಡಿ, ಬೆಂಗಳೂರು - 560019
ದೂರವಾಣಿ: 0725 9998222/333; ಅಂತರ್ಜಾಲದ ವಿಳಾಸ: www.parkasamtrust.org, ಇಮೇಲ್ :[email protected]
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ












Click it and Unblock the Notifications