ಗಿರಿರಾಜ್ ನಿರ್ದೇಶನದ 'ಮಾಸ್ತಿಕಲ್ಲು' ನಾಟಕ ನೋಡಿ
ಬೆಂಗಳೂರು, ಜುಲೈ 09: ಜಟ್ಟ, ಮೈತ್ರಿ ಚಲನಚಿತ್ರ ಖ್ಯಾತಿಯ ಗಿರಿರಾಜ್ ಬಿಎಂ ಅವರ ನಿರ್ದೇಶನದ 'ಮಾಸ್ತಿಕಲ್ಲು' ನಾಟಕದ ಪ್ರದರ್ಶನ ಜುಲೈ 10ರಂದು ನಗರದ ಕೆಂಗಲ್ ಹನುಮಂತಯ್ಯ ಕಲಾಸೌಧದಲ್ಲಿ ಆಯೋಜಿಸಲಾಗಿದೆ.
ಸತೀ ಪದ್ಧತಿಯ ಶೋಷಣೆಯ ನೋವುಗಳ ನೋಟವನ್ನು ತೆರೆದಿಡುವ 'ಮಾಸ್ತಿ ಕಲ್ಲು' ನಾಟಕ, ರಾಜಸ್ಥಾನದಲ್ಲಿ ನಡೆದ ರೂಪಾ ಕನ್ವರ್ ಎಂಬುವರ ಸತೀ ಸಹಗಮನದ ಕಥೆಗೆ ಹತ್ತಿರವಾಗಿದ್ದರೂ, ಡಾ. ಶಿವರಾಮ ಕಾರಂತರ 'ಸರಸಮ್ಮನ ಸಮಾಧಿ' ಕಾದಂಬರಿಯ ಪ್ರೇರಣೆಯಿಂದಲೂ ರಚಿಸಲಾಗಿದೆ. ಬಿ.ಎಂ.ಗಿರಿರಾಜ್ ಅವರು ಇದನ್ನು ರಚಿಸಿ, ನಿರ್ದೇಶಿಸಿದ್ದಾರೆ.
ನಾಟಕದ ಪ್ರಧಾನ ಪಾತ್ರಧಾರಿಯಾದ ಚಂದ್ರಯ್ಯನ ಜೀವನೋದ್ದೇಶವಾದ ಪ್ರೇತಗಳ ಅನ್ವೇಷಣೆ ಅವನನ್ನು ಹಲವು ಮಾನವಾತೀತ ಹಾಗು ರೋಮಾಂಚನಕಾರಿ ಅನುಭವ ಹಾಗು ಸನ್ನಿವೇಶಗಳಿಗೆ ಗುರಿಪಡಿಸುತ್ತದೆ.

ಪ್ರೀತಿ, ತ್ಯಾಗಗಳ ಕಥೆಗಳಿಗೆ ಸಾಕ್ಷಿಯಾಗಿ ನಿಂತಿರುವ ಹಲವು ಮಾಸ್ತಿ ಕಲ್ಲುಗಳ ಪ್ರತೀಕವಾಗಿ ನಾಟಕದ ಹೆಸರನ್ನು 'ಮಾಸ್ತಿಕಲ್ಲು' ಎಂದು ಇಡಲಾಗಿದೆ.
ನಿರ್ದೇಶಕ ಬಿ.ಎಂ. ಗಿರಿರಾಜ್ ನುಡಿ : ಒಂದು ಕೃತಿ ಒಬ್ಬೊಬ್ಬರ ಓದು ಮತ್ತು ಮಾಗುವಿಕೆಯ ಅನುಸಾರವಾಗಿ ಅವರವರಿಗೆ ಬೇರೆ ಬೇರೆ ಅರ್ಥಗಳನ್ನ ಕೋಡುತ್ತದೆ. ಕಾರಂತರ ಬರಹಗಳು ನಮ್ಮ ಅನುಭವ ಮತ್ತು ನಂಬಿಕೆಗಳನ್ನ ಓರೆಗೆ ಹಚ್ಚುತ್ತದೆ. ಹಲವು ಸಲ ಓದಿದಾಗಲೂ ಹಲವು ಅರ್ಥ ಸಾಧ್ಯತೆಗಳನ್ನ ತೋರಿ ನಮ್ಮ ಆಷಾಢಭೂತಿತನಕ್ಕೆ ಬೆಂಕಿ ಇಡುತ್ತದೆ.
60 ವರ್ಷಕ್ಕೂ ಹಿಂದೆ ರಚಿಸಿದ ಕೃತಿ ಇಂದಿಗೂ ahead of its time ಅಂತ ಅನಿಸಿಕೊಳ್ಳುತ್ತದೆ ಅಂದರೆ ಅದು ಲೇಖಕರ ಪ್ರಜ್ವಲ ಕರ್ತೃಶಕ್ತಿಯೂ ಹೌದು ನಮ್ಮ ಸಮಾಜದ ದುರಂತ ಸ್ಥಿತಿಯೂ ಹೌದು. ಇಂತಹ ದ್ವೈತ ಆಯಾಮವನ್ನ ಅದರ ಘನ ಶಕ್ತಿಯಲ್ಲೇ ರಂಗದ ಮೇಲೆ ತರುವ ಪ್ರಾಮಾಣಿಕ ಪ್ರಯತ್ನ ನಮ್ಮದು.
ನಾಟಕ: ಮಾಸ್ತಿಕಲ್ಲು
ದಿನಾಂಕ/ ಸಮಯ: ಜುಲೈ 10, ಶುಕ್ರವಾರ ಸಂಜೆ 7.30 PM
ಸ್ಥಳ: ಕೆಂಗಲ್ ಹನುಮಂತಯ್ಯ ಕಲಾಸೌಧ, ಹನುಮಂತ ನಗರ, ರಾಮಾಂಜನೇಯ ಗುಡ್ಡ ದೇವಾಲಯ ಬಳಿ, ಬೆಂಗಳೂರು.
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ : 7259 98222/333.
(ಒನ್ ಇಂಡಿಯಾ ಸುದ್ದಿ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications