ಜೂನ್ 28, 29ರಂದು ಮಾಸ್ತಿಕಲ್ಲು ನಾಟಕ ಪ್ರದರ್ಶನ
ಬೆಂಗಳೂರು, ಜೂ.27 : ಸತೀ ಪದ್ಧತಿಯ ಶೋಷಣೆಯ ನೋವುಗಳ ನೋಟವನ್ನು ತೆರೆದಿಡುವ 'ಮಾಸ್ತಿಕಲ್ಲು' ನಾಟಕದ 16ನೇ ಪ್ರದರ್ಶನ ಜೂನ್ 28 ಮತ್ತು 29ರಂದು ನಡೆಯಲಿದೆ. ಬಿ.ಎಂ.ಗಿರಿರಾಜ್ ಈ ನಾಟಕವನ್ನು ರಚಿಸಿ, ನಿರ್ದೇಶಿಸಿದ್ದಾರೆ.
ಜೂನ್ 28 ಭಾನುವಾರ ಸಂಜೆ 4 ಮತ್ತು 7.30ಕ್ಕೆ ಹಾಗೂ 29 ಸೋಮವಾರ ಸಂಜೆ 7.30ಕ್ಕೆ ಕೆಂಗಲ್ ಹನುಮಂತಯ್ಯ ಕಲಾಸೌಧ, ರಾಮಾಂಜನೇಯ ದೆವಸ್ಥಾನದ ಆವರಣ, ಹನುಮಂತನಗರದಲ್ಲಿ ನಾಟಕ ಪ್ರದರ್ಶನವಿದೆ.

ಸತೀ ಪದ್ಧತಿಯ ಶೋಷಣೆಯ ನೋವುಗಳ ನೋಟವನ್ನು ತೆರೆದಿಡುವ ಈ ನಾಟಕ, ರಾಜಾಸ್ಥಾನದಲ್ಲಿ ನಡೆದ ರೂಪಾ ಕನ್ವರ್ ಎಂಬುವರ ಸತೀ ಸಹಗಮನದ ಕಥೆಗೆ ಹತ್ತಿರವಾಗಿದ್ದರೂ, ಡಾ. ಶಿವರಾಮ ಕಾರಂತರ 'ಸರಸಮ್ಮನ ಸಮಾಧಿ' ಕಾದಂಬರಿಯ ಪ್ರೇರಣೆಯಿಂದಲೂ ರಚಿಸಲಾಗಿದೆ.
ಬಿ.ಎಂ.ಗಿರಿರಾಜ್ ಅವರು ಇದನ್ನು ರಚಿಸಿ, ನಿರ್ದೇಶಿಸಿದ್ದಾರೆ. ನಾಟಕದ ಪ್ರಧಾನ ಪಾತ್ರಧಾರಿಯಾದ ಚಂದ್ರಯ್ಯನ ಜೀವನೋದ್ದೇಶವಾದ ಪ್ರೇತಗಳ ಅನ್ವೇಷಣೆ ಅವನನ್ನು ಹಲವು ಮಾನವಾತೀತ ಹಾಗು ರೋಮಾಂಚನಕಾರಿ ಅನುಭವ ಹಾಗು ಸನ್ನಿವೇಶಗಳಿಗೆ ಗುರಿಪಡಿಸುತ್ತದೆ.
ಪ್ರೀತಿ, ತ್ಯಾಗಗಳ ಕಥೆಗಳಿಗೆ ಸಾಕ್ಷಿಯಾಗಿ ನಿಂತಿರುವ ಹಲವು ಮಾಸ್ತಿ ಕಲ್ಲುಗಳ ಪ್ರತೀಕವಾಗಿ ನಾಟಕದ ಹೆಸರನ್ನು 'ಮಾಸ್ತಿಕಲ್ಲು' ಎಂದು ಇಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ 725998222/333, http://www.prakasamtrust.org/mk
ರಂಗಶಂಕರದಲ್ಲಿ ಜುಲೈ 1ರಂದು ನಾಟಕ ಪ್ರದರ್ಶನ : ಜೆ.ಪಿ.ನಗರದಲ್ಲಿರುವ ರಂಗಶಂಕರದಲ್ಲಿ ಶ್ರೀನಿವಾಸ ವೈದ್ಯ ಮತ್ತು ವಸುಧೇಂದ್ರ ಅವರ ಸಣ್ಣ ಕಥೆಗಳ ಆಧಾರಿತ 'ಶ್ರದ್ಧ ಮತ್ತು ಸ್ಟೇನ್ ಲೆಸ್ ಸ್ಟೀಲ್ ಪಾತ್ರೆಗಳು' ನಾಟಕ ಪ್ರದರ್ಶನವಿದೆ. ದಿನಾಂಕ : ಜುಲೈ 1, ಬುಧವಾರ. ಸಮಯ ಸಂಜೆ 7.30. ಆನ್ ಲೈನ್ ಮೂಲಕ ಟಿಕೆಟ್ ಬುಕ್ ಮಾಡಲು ಕ್ಲಿಕ್ ಮಾಡಿ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications