ಗೌರಿ ಲಂಕೇಶ್ ಹತ್ಯೆಗೆ ಕಂಬನಿ ಮಿಡಿದ ಮಾತೆ ಮಹದೇವಿ
ಗೌರಿ ಲಂಕೇಶ್ ಅವರ ಹತ್ಯೆ ವೈಚಾರಿಕತೆಯ ಹತ್ಯೆ ಎಂದ ಮಾತೆ ಮಹದೇವಿ. ಗೌರಿ ಲಂಕೇಶ್ ಹತ್ಯೆ ಬಗ್ಗೆ ಲಿಂಗಾಯತ ಧರ್ಮದ ಮಹಾಗುರು ಪ್ರತಿಕ್ರಿಯೆ.
ಬೆಂಗಳೂರು, ಸೆಪ್ಟೆಂಬರ್ 5: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿರುವ ಮಾತೆ ಮಹದೇವಿ ಅವರು ಇದೊಂದು ವೈಚಾರಿಕತೆಯ ಹತ್ಯೆ ಎಂದು ವ್ಯಾಖ್ಯಾನಿಸಿದ್ದಾರೆ.
ಒನ್ ಇಂಡಿಯಾದೊಂದಿಗೆ ಮಾತನಾಡಿದ ಅವರು, ಗೌರಿ ಲಂಕೇಶ್ ಅವರ ಹತ್ಯೆಯಾಗಿದೆ ಎಂಬ ವಿಚಾರ ತಿಳಿದು ದುಃಖವಾಗಿದೆ. ನಾನು ಸುಮಾರು ವರ್ಷಗಳಿಂದ ಅವರನ್ನು ಬಲ್ಲೆ. ಅವರೊಬ್ಬ ವೈಚಾರಿಕತೆಯುಳ್ಳ ವ್ಯಕ್ತಿಯಾಗಿದ್ದರು. ಅನಿಸಿದ್ದನ್ನು ನೇರವಾಗಿ ಹೇಳುತ್ತಿದ್ದರು. ನಿಷ್ಠುರವಾದಿಯಾಗಿದ್ದರು. ಒಬ್ಬ ಪತ್ರಕರ್ತೆಯಾಗಿ ಸತ್ಯವನ್ನು ಧೈರ್ಯವಾಗಿ ಪ್ರತಿಪಾದಿಸುವಂಥವರಾಗಿದ್ದರು. ಅಂಥ ವ್ಯಕ್ತಿಗೆ ಇಂಥದ್ದೊಂದು ಸಾವು ಬಂದಿರುವುದು ದುರದೃಷ್ಟಕರ ಎಂದರು.

''ವೈಚಾರಿಕತೆಗೆ, ವಿಚಾರವಂತರಿಗೆ ಈ ದೇಶದಲ್ಲಿ ನೆಲೆಯಿಲ್ಲ ಎಂಬುದು ಗೌರಿಯವರ ಹತ್ಯೆಯಿಂದ ನಮಗೆ ತಿಳಿಯುತ್ತದೆ. ನೇರವಾಗಿ ಮಾತನಾಡುವ ವ್ಯಕ್ತಿಯಾಗಿದ್ದ ಸಾಹಿತಿ ಕಲಬುರಗಿ ಅವರನ್ನು ಇದೇ ರೀತಿ ಹತ್ಯೆ ಮಾಡಲಾಗಿತ್ತು. ಇದೀಗ, ಮತ್ತೊಬ್ಬ ವಿಚಾರವಾದಿಯ ಹತ್ಯೆಯಾಗಿದೆ. ಅವರ ಸಾವಿನಿಂದ ಆಗಿರುವ ಆಘಾತವನ್ನು ನಾವು ಶಬ್ದಗಳಿಂದ ವರ್ಣಿಸಲು ಸಾಧ್ಯವಿಲ್ಲ. ಅವರ ಸಾವು ಸಮಾಜಕ್ಕೆ ಬಹಳ ದೊಡ್ಡ ಹಾನಿ'' ಎಂದು ಮಾತೆ ಮಹದೇವಿ ತಿಳಿಸಿದರು.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications