ಜೂ. 21ರಂದು ಮಾಯಾವಿ ಸರೋವರ ನಾಟಕ
ಬೆಂಗಳೂರು, ಜೂ. 19 : ರಂಗಭೂಮಿಯ ಮೇಲೆ ವಿಶಿಷ್ಟ ಪ್ರಯೋಗಗಳನ್ನು ಮಾಡುತ್ತಿರುವ ಬೆಂಗಳೂರಿನ ‘ಹೆಜ್ಜೆ' ತಂಡ, "ಮಾಯಾವಿ ಸರೋವರ" ನಾಟಕವನ್ನು ಇದೇ ಶನಿವಾರ, ಜೂ. 21ರಂದು, ನಗರದ ಕೆ.ಎಚ್. ಕಲಾಸೌಧ ರಂಗಮಂದಿರದಲ್ಲಿ ಸಂಜೆ 7 ಗಂಟೆಗೆ ಪ್ರಸ್ತುತಪಡಿಸುತ್ತಿದೆ.
ಮುಂಬಯಿಯ ಖ್ಯಾತ ಅಭಿನೇತ್ರಿ ಅಹಲ್ಯಾ ಬಲ್ಲಾಳ ಅವರು ಈ ನಾಟಕವನ್ನು ನಿರ್ದೇಶಿಸಿದ್ದಾರೆ. ಮೂಲ ಹಿಂದಿ ರಚನೆ: ಡಾ. ಶಂಕರ್ ಶೇಷ್ ಅವರದ್ದು. ಕನ್ನಡಕ್ಕೆ ಅಮೆರಿಕನ್ನಡಿಗ ಡಾ. ಮೈ.ಶ್ರೀ. ನಟರಾಜ್ ಅವರು ಅನುವಾದಿಸಿದ್ದಾರೆ.
ಮುಂಗಡ ಬುಕಿಂಗ್, ಟಿಕೆಟ್ಗಳಿಗಾಗಿ ಮತ್ತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 9900196591. ಟಿಕೆಟ್ ಮಾರಾಟದಿಂದ ಸಂಗ್ರಹವಾದ ಹಣದ ಒಂದು ಭಾಗವನ್ನು ಪ್ರತಿಭಾವಂತ ವಿದ್ಯಾರ್ಥಿನಿಗೆ ದೇಣಿಗೆಯಾಗಿ ನೀಡಲಾಗುತ್ತಿದೆ.

ಮಾಯಾವಿ ಸರೋವರ ನಾಟಕದ ಬಗ್ಗೆ
ಉತ್ತರ ಭಾರತದ 'ನೌಟಂಕಿ' ಶೈಲಿಯಲ್ಲಿ ಬರೆಯಲ್ಪಟ್ಟಿರುವ ಈ ನಾಟಕ ಅನೇಕ ಕಾರಣಗಳಿಂದಾಗಿ ವಿಶಿಷ್ಟವೆನಿಸುತ್ತದೆ. ಗಂಡು ಹೆಣ್ಣುಗಳ ವಿಭಿನ್ನ ವ್ಯಕ್ತಿತ್ವದಲ್ಲಿರುವ ಅನನ್ಯತೆಯನ್ನು ಶೋಧಿಸುವ ನಾಟಕದ ವಸ್ತು ಕಾಲ-ದೇಶಗಳನ್ನು ಮೀರುತ್ತದೆ. ಗಂಡು ಹೆಣ್ಣಿನ ನಡುವೆ ಪರಸ್ಪರ ಸ್ಪರ್ಧಾತ್ಮಕ ವೈರುದ್ಧ್ಯಗಳಿರುವಂತೆ ತೋರಿದರೂ ಅವರೀರ್ವರ ನಡುವೆ ಆಕರ್ಷಣೆ, ಅರ್ಪಣೆ ಮತ್ತು ಅವಲಂಬನೆ ಇರುತ್ತದೆ ಎಂಬುದನ್ನು ಅಲ್ಲಗಳೆಯಲಾಗದು. ಅಂತೆಯೇ ಪ್ರತಿ ಗಂಡಿನಲ್ಲಿ ಓರ್ವ ಹೆಣ್ಣು ಮತ್ತು ಪ್ರತಿ ಹೆಣ್ಣಿನಲ್ಲೂ ಒಬ್ಬ ಗಂಡು ಇರುವುದು ಅನುಭವವೇದ್ಯವೇ. ಇದು ಮೇಲ್ನೋಟಕ್ಕೆ ಪ್ರಹಸನವೆನಿಸಿದರೂ ಇಲ್ಲಿ ವ್ಯವಸ್ಥೆ, ಆಡಳಿತ, ಗಂಡು -ಹೆಣ್ಣಿನ ಪರಸ್ಪರ ಸಂಬಂಧ ಹಾಗೂ ಲಿಂಗಾಧಾರಿತ ಕಾರ್ಯವಿಭಜನೆ, ಮೌಲ್ಯಗಳಂತಹ ಗಂಭೀರ ವಿಷಯಗಳನ್ನು ವಿಡಂಬನೆಯ ಮೂಲಕ ಚರ್ಚಿಸಲಾಗಿದೆ.

ರಂಗದ ಮೇಲೆ
ಸೂತ್ರಧಾರ : ಸುರೇಂದ್ರಕುಮಾರ್ ಮಾರ್ನಾಡ್
ರಾಜ : ಮೋಹನ್ ಮಾರ್ನಾಡ್
ರಾಣಿ : ಅಹಲ್ಯ ಬಲ್ಲಾಳ್
ಸ್ತ್ರೀ : ಗೀತಾ ಶಂಕರ್
ಮಂತ್ರಿ : ಹರ್ಷಕುಮಾರ್ ಉಡುಪಿ
ಪತ್ರಿಕೆಯ ಎಡಿಟರ್ : ಮನೋಹರ್ ನಾಯಕ್
ವಿಶ್ವವಿದ್ಯಾಲಯದ ಡೈರೆಕ್ಟರ್ : ಪ್ರವೀಣ್ ಸುವರ್ಣ, ಬೈಕಂಪಾಡಿ
ಡೇರಿ ಬೋರ್ಡ್ ಅಧ್ಯಕ್ಷೆ : ಕೃಪಾ ಪೂಜಾರಿ
ನ್ಯಾಯಾಧೀಶ : ರಾಘವೇಂದ್ರ ಐತಾಳ್
ಕುಮಾರ : ಶಂತನು ಬಲ್ಲಾಳ್
ರಾಜಕುಮಾರ : ಭೀಮರಾವ್ ಚಿಲ್ಕಾ
ನರ್ತಕಿ : ರಕ್ಷಿತಾ ನಾಯಕ್
ಋಷಿ : ಅವಿನಾಶ್ ಕಾಮತ್
ರಂಗದ ಹಿಂದೆ
ಬೆಳಕು : ಚಂದ್ರಶೇಖರ್ ಹೆಗ್ಡೆ
ಸಂಗೀತ : ಜ್ಯೋತಿ ಭಟ್ ಹಾಗೂ ಶಂತನು
ಗಾಯನ : ಜ್ಯೋತಿ, ಅವಿನಾಶ್ ಹಾಗೂ ಶಂತನು
ತಬಲಾ ಹಾಗೂ ಢೋಲಕ್ : ಮನೋಜ್ ರಾವ್
ಪರಿಕರ : ಗಣೇಶಕುಮಾರ್
ವಿನ್ಯಾಸ ಹಾಗೂ ನಿರ್ದೇಶನ : ಅಹಲ್ಯಾ ಬಲ್ಲಾಳ್
ಮೂಲ ಹಿಂದಿ : ಡಾ. ಶಂಕರ್ ಶೇಷ್, ಕನ್ನಡಕ್ಕೆ: ಡಾ.ಮೈ.ಶ್ರೀ. ನಟರಾಜ್
ದಿನಾಂಕ : 21.06.2014
ಸಮಯ : ಸಂಜೆ 7.00 ಗಂಟೆ
ಸ್ಥಳ : ಕೆ.ಎಚ್.ಕಲಾಸೌಧ ರಂಗಮಂದಿರ, ಹನುಮಂತನಗರ, ಬೆಂಗಳೂರು.
ಆಯೋಜನೆ ಹಾಗೂ ನಿರ್ವಹಣೆ : ‘ಹೆಜ್ಜೆ' ಬೆಂಗಳೂರು.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications