ರೈಲ್ವೆ ಕೆಳ ಸೇತುವೆಯಲ್ಲಿ ಮಲಿನ ನೀರು ಸೋರಿಕೆ ತಡೆಗಟ್ಟಲು ಮೇಯರ್ ಮನವಿ
ಬೆಂಗಳೂರು, ಜೂನ್ 18: ರೈಲು ಸಂಚರಿಸುವಾಗ ಬಹುತೇಕ ರೈಲ್ವೆ ಕೆಳಸೇತುವೆಯಲ್ಲಿ ಮಲಿನ ನೀರು ಸೋರಿಕೆಯಾಗುತ್ತದೆ ಅದನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಮನವಿ ಮಾಡಿದ್ದಾರೆ.
ನಗರದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಡಿಜಿ ಮಲ್ಯ ಅವರನ್ನು ಭೇಟಿ ಮಾಡಿದ ಅವರು, ರೈಲ್ವೆ ಸೇತುವೆಗಳಲ್ಲಿ ರೈಲು ಸಂಚಾರದ ಸಂದರ್ಭದ್ಲಿ ಮಲಿನ ನೀರು ಸೋರಿಕೆಯಾಗುತ್ತದೆ.
ಬೆಂಗಳೂರಲ್ಲಿ ರೈಲ್ವೆ ಪ್ರಯಾಣಿಕರ ಮೊಬೈಲ್ ಕದಿಯೋದು ಇವರೇ ನೋಡಿ
ಮೇಯರ್ ಅವರ ಮನವಿಗೆ ರೈಲ್ವೆ ವಿಭಾಗೀಯ ವ್ಯವಸ್ಥಾಪಕರು ಸ್ಪಂದಿಸಿದ್ದಾರೆ. ಈಗಾಗಲೇ ಬಯೋ ಟಾಯ್ಲೆಟ್ಗಳನ್ನು ರೈಲುಗಳಲ್ಲಿ ಅಳವಡಿಸಲು ಕ್ರಮ ವಹಿಸಲಾಗಿದೆ. ಇದರಿಂದಾಗಿ ಸಕಷ್ಟು ಸುಧಾರಣೆಯಾಗಲಿದೆ ಎಂದು ಹೇಳಿದ್ದಾರೆ.
ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ತಾವು ಸೂಚನೆ ನೀಡುವುದಾಗಿ ತಿಳಿಸಿದರು. ವಾಹನ ಸವಾರರು ಸಂಚರಿಸುವಾಗ ತೊಂದರೆಯಾಗುತ್ತಿದೆ. ರೈಲು ಮುಂದೆ ಸಾಗುವ ತನಕ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ ನಂತರ ಹೋಗುತ್ತಾರೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.