ಅನಧಿಕೃತ ಪೋಸ್ಟರ್ಗಳನ್ನು ಹರಿದುಹಾಕಿದ ಮೇಯರ್ ಸಂಪತ್ರಾಜ್
ಬೆಂಗಳೂರು, ಆಗಸ್ಟ್ 11: ಬೆಂಗಳೂರಲ್ಲಿರುವ ಅನಧಿಕೃತ ಫ್ಲೆಕ್ಸ್, ಹೋರ್ಡಿಂಗ್ಸ್ಗಳನ್ನು ತೆರವುಗೊಳಿಸಲು ಹೈಕೋರ್ಟ್ ಬಿಬಿಎಂಪಿಗೆ ನೀಡಿದ್ದ ಸೂಚನೆ ಮೇರೆಗೆ ಮೇಯರ್ ಸಂಪತ್ರಾಜ್ ಸ್ವತಃ ತೆರವು ಕಾರ್ಯಕ್ಕೆ ಮುಂದಾದರು.
ಬಿಬಿಎಂಪಿ ನಗರದಲ್ಲಿರುವ ಫ್ಲೆಕ್ಸ್, ಬ್ಯಾನರ್, ಪೋಸ್ಟರ್ಗಳ ವಿರುದ್ಧ ಸಮರ ಸಾರಿದ್ದು, ಕೇವಲ ರಸ್ತೆಗಳಲ್ಲಿ ಮಾತ್ರವಲ್ಲ ಇನ್ನುಮುಂದೆ ಸಮಾರಂಭಗಳಲ್ಲೂ ಕೂಡ ಬ್ಯಾನರ್ ಹಾಕುವಂತಿಲ್ಲ ಎಂದು ಕಟ್ಟುನಿಟ್ಟಿನ ಆದೇಶ ನೀಡಿದೆ, ಆದರೂ ನಗರದ ಕೆಲವೆಡೆ ಇನ್ನೂ ಅಕ್ರಮ ಫ್ಲೆಕ್ಸ್ಗಳು ರಾರಾಜಿಸುತ್ತಿರುವ ಹಿನ್ನೆಲೆಯಲ್ಲಿ ಖುದ್ದಾಗಿ ಮೇಯರ್ ಈ ತೆರವು ಕಾರ್ಯಕ್ಕೆ ಮುಂದಾಗಿದ್ದಾರೆ.
ಶನಿವಾರ ಬೆಳಗ್ಗೆ ಗಾಂಧಿನಗರ ಸುತ್ತಮುತ್ತಲ ಪ್ರದೇಶದಲ್ಲಿ ಅಕ್ರಮ ಹೋರ್ಡಿಂಗ್ಸ್, ಬ್ಯಾನರ್, ಫ್ಲೆಕ್ಸ್ ಗಳನ್ನು ಬಿಬಿಎಂಪಿ ಇತರೆ ಅಧಿಕಾರಿಗಳ ಜತೆ ತೆರಳಿ ತೆರವುಗೊಳಿಸಿದ್ದಾರೆ. ಇತ್ತೀಚೆಗೆ ಅಕ್ರಮ ಫ್ಲೆಕ್ಸ್ ಹಾಗೂ ಹೋರ್ಡಿಂಗ್ಗಳ ವಿರುದ್ಧ ಹೈಕೋರ್ಟ್ ಸಮರ ಸಾರಿದ್ದ ಹಿನ್ನೆಲೆಯಲ್ಲಿ ಬಿಬಿಎಂಪಿ ನಗರದ ಎಲ್ಲೆಡೆ ಅಕ್ರಮ ಫ್ಲೆಕ್ಸ್ ಹಾಗೂ ಹೋರ್ಡಿಂಗ್ ತೆರವುಗೊಳಿಸಲು ಮುಂದಾಗಿತ್ತು.
ಇದೀಗ ನಗರದಲ್ಲಿ ಎಲ್ಲೆಂದರಲ್ಲಿ ಅಕ್ರಮವಾಗಿ ಜಾಹೀರಾತು ಕಂಪನಿಗಳು ಹಾಗೂ ಖಾಸಗಿ ಸಂಸ್ಥೆ, ವಾಣಿಜ್ಯ ಹಾಗೂ ಧಾರ್ಮಿಕ ಭಿತ್ತಿಪತ್ರಗಳನ್ನು ಪಾಲಿಕೆಯ ನಿಯಮ ಪಾಲಿಸದೆ ಅಂಟಿಸುತ್ತಿರುವುದರ ವಿರುದ್ಧ ಕ್ರಮಕ್ಕೂ ಕೂಡ ಮುಂದಾಗಿದೆ.

ಮರ ಹಾಗೂ ಗೋಡೆ ಮೇಲೆ ಭಿತ್ತಪತ್ರ ಅಂಟಿಸುವವರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಬಿಬಿಎಂಪಿ ಅಂತವರಿಗೆ 1 ಲಕ್ಷ ರೂ. ದಂಡ ವಿಧಿಸಲು ಚಿಂತನೆ ನಡೆಸಿದೆ. ಅಕ್ರಮವಾಗಿ ಎಲ್ಲೆಂದರಲ್ಲಿ ಇನ್ನುಮುಂದೆ ಭಿತ್ತಿಪತ್ರಗಳನ್ನು ಅಂಟಿಸುವಂತಿಲ್ಲ, ಭಿತ್ತಿಪತ್ರ ಅಂಟಿಸಿದರೆ ಬೀಳಲಿದೆ ಭಾರಿ ಪ್ರಮಾಣದ ದಂಡ, ಮರಕ್ಕೆ ಸೀರಿಯಲ್ ಸೆಟ್ ಹಾಕಿದರೂ ದಂಡಪಾವತಿಸಬೇಕಾಗುತ್ತದೆ. ಅಷ್ಟೇ ಅಲ್ಲದೆ ಕ್ರಿಮಿನಲ್ ಮೊಕದ್ದಮೆ ಕೂಡ ದಾಖಲಿಸಲಾಗುತ್ತದೆ ಎಂದು ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications