ಅನಧಿಕೃತ ಪೋಸ್ಟರ್ಗಳನ್ನು ಹರಿದುಹಾಕಿದ ಮೇಯರ್ ಸಂಪತ್ರಾಜ್
ಬೆಂಗಳೂರು, ಆಗಸ್ಟ್ 11: ಬೆಂಗಳೂರಲ್ಲಿರುವ ಅನಧಿಕೃತ ಫ್ಲೆಕ್ಸ್, ಹೋರ್ಡಿಂಗ್ಸ್ಗಳನ್ನು ತೆರವುಗೊಳಿಸಲು ಹೈಕೋರ್ಟ್ ಬಿಬಿಎಂಪಿಗೆ ನೀಡಿದ್ದ ಸೂಚನೆ ಮೇರೆಗೆ ಮೇಯರ್ ಸಂಪತ್ರಾಜ್ ಸ್ವತಃ ತೆರವು ಕಾರ್ಯಕ್ಕೆ ಮುಂದಾದರು.
ಬಿಬಿಎಂಪಿ ನಗರದಲ್ಲಿರುವ ಫ್ಲೆಕ್ಸ್, ಬ್ಯಾನರ್, ಪೋಸ್ಟರ್ಗಳ ವಿರುದ್ಧ ಸಮರ ಸಾರಿದ್ದು, ಕೇವಲ ರಸ್ತೆಗಳಲ್ಲಿ ಮಾತ್ರವಲ್ಲ ಇನ್ನುಮುಂದೆ ಸಮಾರಂಭಗಳಲ್ಲೂ ಕೂಡ ಬ್ಯಾನರ್ ಹಾಕುವಂತಿಲ್ಲ ಎಂದು ಕಟ್ಟುನಿಟ್ಟಿನ ಆದೇಶ ನೀಡಿದೆ, ಆದರೂ ನಗರದ ಕೆಲವೆಡೆ ಇನ್ನೂ ಅಕ್ರಮ ಫ್ಲೆಕ್ಸ್ಗಳು ರಾರಾಜಿಸುತ್ತಿರುವ ಹಿನ್ನೆಲೆಯಲ್ಲಿ ಖುದ್ದಾಗಿ ಮೇಯರ್ ಈ ತೆರವು ಕಾರ್ಯಕ್ಕೆ ಮುಂದಾಗಿದ್ದಾರೆ.
ಶನಿವಾರ ಬೆಳಗ್ಗೆ ಗಾಂಧಿನಗರ ಸುತ್ತಮುತ್ತಲ ಪ್ರದೇಶದಲ್ಲಿ ಅಕ್ರಮ ಹೋರ್ಡಿಂಗ್ಸ್, ಬ್ಯಾನರ್, ಫ್ಲೆಕ್ಸ್ ಗಳನ್ನು ಬಿಬಿಎಂಪಿ ಇತರೆ ಅಧಿಕಾರಿಗಳ ಜತೆ ತೆರಳಿ ತೆರವುಗೊಳಿಸಿದ್ದಾರೆ. ಇತ್ತೀಚೆಗೆ ಅಕ್ರಮ ಫ್ಲೆಕ್ಸ್ ಹಾಗೂ ಹೋರ್ಡಿಂಗ್ಗಳ ವಿರುದ್ಧ ಹೈಕೋರ್ಟ್ ಸಮರ ಸಾರಿದ್ದ ಹಿನ್ನೆಲೆಯಲ್ಲಿ ಬಿಬಿಎಂಪಿ ನಗರದ ಎಲ್ಲೆಡೆ ಅಕ್ರಮ ಫ್ಲೆಕ್ಸ್ ಹಾಗೂ ಹೋರ್ಡಿಂಗ್ ತೆರವುಗೊಳಿಸಲು ಮುಂದಾಗಿತ್ತು.
ಇದೀಗ ನಗರದಲ್ಲಿ ಎಲ್ಲೆಂದರಲ್ಲಿ ಅಕ್ರಮವಾಗಿ ಜಾಹೀರಾತು ಕಂಪನಿಗಳು ಹಾಗೂ ಖಾಸಗಿ ಸಂಸ್ಥೆ, ವಾಣಿಜ್ಯ ಹಾಗೂ ಧಾರ್ಮಿಕ ಭಿತ್ತಿಪತ್ರಗಳನ್ನು ಪಾಲಿಕೆಯ ನಿಯಮ ಪಾಲಿಸದೆ ಅಂಟಿಸುತ್ತಿರುವುದರ ವಿರುದ್ಧ ಕ್ರಮಕ್ಕೂ ಕೂಡ ಮುಂದಾಗಿದೆ.

ಮರ ಹಾಗೂ ಗೋಡೆ ಮೇಲೆ ಭಿತ್ತಪತ್ರ ಅಂಟಿಸುವವರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಬಿಬಿಎಂಪಿ ಅಂತವರಿಗೆ 1 ಲಕ್ಷ ರೂ. ದಂಡ ವಿಧಿಸಲು ಚಿಂತನೆ ನಡೆಸಿದೆ. ಅಕ್ರಮವಾಗಿ ಎಲ್ಲೆಂದರಲ್ಲಿ ಇನ್ನುಮುಂದೆ ಭಿತ್ತಿಪತ್ರಗಳನ್ನು ಅಂಟಿಸುವಂತಿಲ್ಲ, ಭಿತ್ತಿಪತ್ರ ಅಂಟಿಸಿದರೆ ಬೀಳಲಿದೆ ಭಾರಿ ಪ್ರಮಾಣದ ದಂಡ, ಮರಕ್ಕೆ ಸೀರಿಯಲ್ ಸೆಟ್ ಹಾಕಿದರೂ ದಂಡಪಾವತಿಸಬೇಕಾಗುತ್ತದೆ. ಅಷ್ಟೇ ಅಲ್ಲದೆ ಕ್ರಿಮಿನಲ್ ಮೊಕದ್ದಮೆ ಕೂಡ ದಾಖಲಿಸಲಾಗುತ್ತದೆ ಎಂದು ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications