Industry: ಕರ್ನಾಟಕದಲ್ಲಿ ಕೈಗಾರಿಕಾ ಘಟಕಗಳ ಸ್ಥಾಪನೆಗೆ ದ.ಕೋರಿಯಾ ಜತೆ ₹1,040 ಕೋಟಿ ಒಪ್ಪಂದ
ಬೆಂಗಳೂರು, ಜುಲೈ 03: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ವರ್ಷ 2025ರ ಫೆಬ್ರುವರಿಯಲ್ಲಿ ನಗರದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸುವುದಕ್ಕೆ ದಕ್ಷಿಣ ಕೊರಿಯಾದ ಉದ್ಯಮಿಗಳನ್ನು ಆಹ್ವಾನಿಸಲು ಕರ್ನಾಟಕ ರಾಜ್ಯ ಸರ್ಕಾರವು ಮಂಗಳವಾರ ದಕ್ಷಿಣ ಕೋರಿಯಾದ ಸೋಲ್ನಲ್ಲಿ ಯಶಸ್ವಿಯಾಗಿ ರೋಡ್ ಶೋ ನಡೆಸಿತು.
ರೋಡ್ಷೋನಲ್ಲಿ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು, ವಿದ್ಯುತ್ಚಾಲಿತ ವಾಹನಗಳ ಭವಿಷ್ಯ, ಅತ್ಯಾಧುನಿಕ ಯಂತ್ರೋಪಕರಣ, ಬಾಹ್ಯಾಕಾಶ ತಂತ್ರಜ್ಞಾನ ಸೇರಿದಂತೆ ವಿವಿಧ ಉದ್ದಿಮೆ ವಲಯಗಳಲ್ಲಿ ರಾಜ್ಯದಲ್ಲಿ ಇರುವ ವಿಪುಲ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.

ʼಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ರಾಜ್ಯ ಸರ್ಕಾರ ನೀಡಿದ ಆಹ್ವಾನ ಮನ್ನಿಸಿ ಕೆಲ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿ, ಕರ್ನಾಟಕದ ಕೈಗಾರಿಕಾ ಅಭಿವೃದ್ಧಿಗೆ ಕೈಜೋಡಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಆಗಿದೆʼ ಎಂದು ಸಚಿವರು ಹರ್ಷ ವ್ಯಕ್ತಪಡಿಸಿದರು.
ಉದ್ಯಮಿಗಳ ಗಮನ ಸೆಳೆಯುವಲ್ಲಿ ಯಶಸ್ವಿ
ಕೈಗಾರಿಕೆಗಳ ಸ್ಥಾಪನೆಗೆ ಕರ್ನಾಟಕದಲ್ಲಿ ಇರುವ ಪೂರಕ ಪರಿಸರ ಹಾಗೂ ಬಂಡವಾಳ ಹೂಡಿಕೆಗೆ ಕರ್ನಾಟಕವು ಅಚ್ಚುಮೆಚ್ಚಿನ ತಾಣವಾಗಿರುವುದನ್ನು ರೋಡ್ಷೋನಲ್ಲಿ ಮನವರಿಕೆ ಮಾಡಿಕೊಡಲಾಯಿತು. ಭಾರತದಲ್ಲಿ ಪ್ರಮುಖ ಆವಿಷ್ಕಾರ ಕೇಂದ್ರವಾಗಿರುವ ಕರ್ನಾಟಕವು ರೋಡ್ ಶೋನಲ್ಲಿ ಕೊರಿಯಾದ ಉದ್ಯಮಿಗಳ ಗಮನ ಸೆಳೆಯುವಲ್ಲಿ ಸಫಲವಾಯಿತು.

ದಕ್ಷಿಣ ಕೊರಿಯಾದಲ್ಲಿನ ಭಾರತೀಯ ವಾಣಿಜ್ಯೋದ್ಯಮ ಮಹಾಸಂಘದ (ಐಸಿಸಿಕೆ) ಸಹಯೋಗದಲ್ಲಿ ಈ ರೋಡ್ಷೋ ಏರ್ಪಡಿಸಲಾಗಿತ್ತು. ಸಚಿವರ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು, ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳ ವಿಸ್ತರಣೆಗೆ ಕೊರಿಯಾದ ಕಂಪನಿಗಳಿಗೆ ಕರ್ನಾಟಕದಲ್ಲಿ ಇರುವ ಅವಕಾಶಗಳನ್ನು ಮನವರಿಕೆ ಮಾಡಿಕೊಟ್ಟಿತು.
ರಾಜ್ಯಕ್ಕೆ ಬಂಡವಾಳ ಆಕರ್ಷಿಸಲು ಉನ್ನತ ಮಟ್ಟದ ನಿಯೋಗವು ದಕ್ಷಿಣ ಕೊರಿಯಾಕ್ಕೆ 5 ದಿನಗಳ ಭೇಟಿ ನೀಡುತ್ತಿದೆ. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ ಅವರು ರೋಡ್ ಶೋನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶದ ಬಗ್ಗೆ ಮಾಹಿತಿ ನೀಡಿದರು.
ಈ ರೋಡ್ಷೋನಲ್ಲಿ ದಕ್ಷಿಣ ಕೊರಿಯಾದ 45ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಂಡಿದ್ದವು. ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸುವ ಬಗ್ಗೆ ಆಸಕ್ತಿ ತೋರ್ಪಡಿಸವೆ ಎಂದರು.
ಕೈಗಾರಿಕಾ ಘಟಕಗಳ ಸ್ಥಾಪನೆಗೆ ₹1,040 ಕೋಟಿ ಒಪ್ಪಂದ
ಮಷಿನ್ಟೂಲ್ಸ್ ಮತ್ತು ಕೈಗಾರಿಕಾ ಯಂತ್ರೋಪಕರಣ ತಯಾರಿಕಾ ಕಂಪನಿ ಡಿಎನ್ ಸೊಲುಷನ್ಸ್, ರಾಜ್ಯದಲ್ಲಿ ತನ್ನ ತಯಾರಿಕಾ ಘಟಕ ಸ್ಥಾಪಿಸಲು ₹1,000 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ರಾಜ್ಯ ಸರ್ಕಾರದ ಜೊತೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಕಂಪನಿಯ ಅಧ್ಯಕ್ಷ ಸಂಘುನ್ ಕಿಮ್ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್ ಅವರು ಒಪ್ಪಂದಕ್ಕೆ ಸಹಿ ಹಾಕಿದರು.
ಬೆಂಗಳೂರು ಬಳಿಯ ಮಾಹಿತಿ ತಂತ್ರಜ್ಞಾನ ಹೂಡಿಕೆ ಪ್ರದೇಶದಲ್ಲಿ (ಐಟಿಐಆರ್) ಈ ತಯಾರಿಕಾ ಘಟಕ ಅಸ್ತಿತ್ವಕ್ಕೆ ಬರಲಿದೆ.
ಅತ್ಯಾಧುನಿಕ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಬಿಡಿಭಾಗಗಳನ್ನು ತಯಾರಿಸುವ ಇಎಂಎನ್ಐ ಕಂಪನಿಯು ಬ್ಯಾಟರಿಕೋಶಗಳ ದಾಸ್ತಾನು ಹಾಗೂ ಬ್ಯಾಟರಿಕೋಶಗಳ ಮರುಬಳಕೆ ಸಂಗ್ರಹಣಾ ಕೇಂದ್ರವನ್ನು ₹ 40 ಕೋಟಿ ವೆಚ್ಚದಲ್ಲಿ ನಿರ್ಮಿಸುವ ಒಪ್ಪಂದಕ್ಕೆ ರಾಜ್ಯ ಸರ್ಕಾರದ ಜೊತೆ ಸಹಿ ಹಾಕಿದ್ದನ್ನು ಸಚಿವರು ಖಚಿತಪಡಿಸಿದರು.
ಕೊರಿಯಾ ವಾಣಿಜ್ಯೋದ್ಯಮ ಮಹಾಸಂಘದ (ಕೆಸಿಸಿಐ) ಪದಾಧಿಕಾರಿಗಳ ಜೊತೆಗೂ ನಿಯೋಗವು ಸಮಾಲೋಚನೆ ನಡೆಸಿತು.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications