Namma metro: ಕೆಂಗೇರಿಗೆ 'ಮೆಟ್ರೋ'ದಲ್ಲಿ ಪ್ರಯಾಣಿಸಿದ ಸಚಿವರು: ಯಾರು? ಏಕೆ?
ಬೆಂಗಳೂರು, ಅಕ್ಟೋಬರ್ 18: ಬೆಂಗಳೂರಿನ ಕೆಂಗೇರಿ ಸಮೀಪದ ಮೈಲಸಂದ್ರ- ಶ್ರೀನಿವಾಸಪುರದಲ್ಲಿ ಬುಧವಾರ ನಿಗದಿಯಾಗಿದ್ದ ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ವಿಧಾನಸೌಧದಿಂದ ಕೆಂಗೇರಿ ಬಸ್ ಟರ್ಮಿನಲ್ ವರೆಗೆ 'ನಮ್ಮ ಮೆಟ್ರೋ'ದಲ್ಲಿ ಪ್ರಯಾಣ ಮಾಡಿದರು. ತಾವು ಮೊದಲ ಬಾರಿಗೆ ಮೆಟ್ರೋದಲ್ಲಿ ಓಡಾಡಿದ ಕುರಿತು ಅವರು ಖುಷಿ ಹಂಚಿಕೊಂಡರು.
ಮೆಟ್ರೋ ಸಂಚಾರ ಬಳಿಕ ಮಾತನಾಡಿದ ಸಚಿವ ಎಂಬಿ ಪಾಟೀಲ್ ಅವರು, 'ದೇಶದ ಬೇರೆ ಬೇರೆ ಭಾಗಗಳಲ್ಲಿ ನಾನು ಮೆಟ್ರೋದಲ್ಲಿ ಸಂಚರಿಸಿ ಅನುಭವ ಪಡೆದಿದ್ದೇನೆ. ಆದರೆ, ಬೆಂಗಳೂರಿನಲ್ಲಿ ನಮ್ಮ ಮನೆಗೆ ಹತ್ತಿರದಲ್ಲಿ ಇನ್ನೂ ಮೆಟ್ರೋ ಬಂದಿಲ್ಲ. ಹೀಗಾಗಿ ನಮ್ಮ ರಾಜಧಾನಿಯಲ್ಲಿ ಈವರೆಗೆ ಮೆಟ್ರೋದಲ್ಲಿ ಸಂಚರಿಸುವ ಅವಕಾಶ ಸಿಕ್ಕಿರಲಿಲ್ಲ.

ಇವತ್ತು ವಾರದ ದಿನವಾದ್ದರಿಂದ ಸಂಚಾರ ದಟ್ಟಣೆ ಇರುತ್ತದೆ ಎನ್ನುವುದು ಗೊತ್ತಿತ್ತು. ಹೀಗಾಗಿ, ಮೊದಲೇ ನಮ್ಮ ಮೆಟ್ರೋದಲ್ಲಿ ಸಂಚರಿಸಲು ನಿರ್ಧರಿಸಿದ್ದೆ. ಇದರಂತೆ ವಿಧಾನಸೌಧದಿಂದ ಮೈಲಸಂದ್ರಕ್ಕೆ ಕೇವಲ 30 ನಿಮಿಷಗಳಲ್ಲಿ ತಲುಪಿದೆ. ಮುಂದಿನ ದಿನಗಳಲ್ಲಿ ನಮ್ಮ ಮೆಟ್ರೋ ನಗರದ ಜೀವನಾಡಿಯಾಗಲಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.
ಸಹ ಪ್ರಯಾಣಿಕರ ಜೊತೆ ಸಚಿವರ ಮಾತು
ಪ್ರಯಾಣದ ಉದ್ದಕ್ಕೂ ಸಹ ಪ್ರಯಾಣಿಕರ ಜೊತೆ ಮಾತನಾಡಿಕೊಂಡು, ನಮ್ಮ ಮೆಟ್ರೋದ ಬಗ್ಗೆ ಕೇಳಿಕೊಂಡು ಬಂದೆ. ಪ್ರತಿಯೊಬ್ಬರೂ ಇದರಿಂದ ಸುಗಮ ಸಂಚಾರ ಸಾಧ್ಯವಾಗಿದೆ ಎಂದು ಹೇಳಿದರು. ಸಂಚಾರ ದಟ್ಟಣೆಯ ಸಮಸ್ಯೆ ಆಧುನಿಕ ನಗರಗಳ ಭಾಗವಾಗಿ ಬಿಟ್ಟಿದೆ.

ಈ ಮೆಟ್ರೋ ಸೌಲಭ್ಯವು ನಗರದ ಸಂಚಾರ ವ್ಯವಸ್ಥೆಯ ರೂಪುರೇಷೆಗಳನ್ನೇ ಆಮೂಲಾಗ್ರವಾಗಿ ಬದಲಿಸುತ್ತಿದೆ. ಇದರಿಂದ ಬೆಂಗಳೂರಿನ ಉತ್ಪಾದಕತೆ ಗಣನೀಯವಾಗಿ ಹೆಚ್ಚಲಿದೆ. ಜೊತೆಗೆ ಇದು ಶಬ್ದ, ಧೂಳು ಮತ್ತು ಇಂಗಾಲದ ಮಾಲಿನ್ಯಗಳಿಗೆ ಪರಿಹಾರವಾಗಿದೆ. ಅಲ್ಲದೆ, ಆರೋಗ್ಯದ ಸಮಸ್ಯೆಗಳಿಂದಲೂ ತಕ್ಕ ಮಟ್ಟಿಗೆ ಪಾರಾಗಬಹುದು ಎಂದು ಸಚಿವರು ವಿವರಿಸಿದರು.
ಕೆಂಗೇರಿಯಲ್ಲಿ ಇಳಿದ ಅವರು, ಅಲ್ಲಿಂದ ಮುಂದಕ್ಕೆ ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿಯ ಕಾರ್ಯಕ್ರಮಕ್ಕೆ ತೆರಳಿದರು.
ಇನ್ನೂ ರಾಜ್ಯದ ಸಚಿವರೊಬ್ಬರು ಮೆಟ್ರೋದಲ್ಲಿ ಪ್ರಯಾಣಿಸುವುದನ್ನು ಕಂಡ ಪ್ರಯಾಣಿಕರು ಸಚಿವ ಎಂಬಿ ಪಾಟೀಲ್ ಅವರೊಂದಿಗೆ ಸೆಲ್ಫಿ ತೆಗೆದುಕೊಂಡರು. ಮೆಟ್ರೋ ಪ್ರಯಾಣ ಕುರಿತು ಮಾಹಿತಿ ಹಂಚಿಕೊಂಡಿದ್ದು ಕಂಡು ಬಂತು.
-
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್










Click it and Unblock the Notifications