ನನ್ನ ಸಿದ್ದರಾಮಯ್ಯ ನಡುವಿನ ಜಗಳಕ್ಕೆ ಸಾಕ್ಷ್ಯ ಕೊಡಿ: ಪರಮೇಶ್ವರ್
ಬೆಂಗಳೂರು, ಸೆಪ್ಟೆಂಬರ್ 24: ಜಿ.ಪರಮೇಶ್ವರ್ ಮತ್ತು ಸಿದ್ದರಾಮಯ್ಯ ನಡುವೆ ಮನಸ್ತಾಪದ ವಿಷಯವನ್ನು ಇಬ್ಬರೂ ನಾಯಕರು ಅಲ್ಲಗಳೆದರಲ್ಲದೆ, ತಮಾಷೆಯಾಗಿಯೇ ಮಾಧ್ಯಮದವರನ್ನೂ ಛೇಡಿಸಿದರು.
ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆದಿತ್ತು. ಸಭೆಯ ವರದಿಗೆ ತೆರಳಿದ್ದ ಮಾಧ್ಯಮ ಛಾಯಾಗ್ರಾಹಕರು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಶಾಸಕಾಂಗ ಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿಡಿಯೋ ಮಾಡುತ್ತಿದ್ದರು. ಆಗ ಅವರನ್ನು ತಡೆದ ದಿನೇಶ್ ಗುಂಡೂರಾವ್ ಪರಮೇಶ್ವರ್ ಇಲ್ಲೇ ಹೊರಗಿದ್ದಾರೆ ಅವರು ಬರಲಿ ಆಮೇಲೆ ವಿಡಿಯೋ ಮಾಡಿ ಎಂದರು.
ಇದೇ ಸಮಯದಲ್ಲಿ ತಮಾಷೆಯಾಗಿ ಮಾತನಾಡಿದ ಸಿದ್ದರಾಮಯ್ಯ, ಹೌದು ಪರಮೇಶ್ವರ್ ಬರಲಿ, ಇಲ್ಲದಿದ್ದರೆ ನನಗೆ ಅವರಿಗೆ ನಡುವೆ ಅಸಮಾಧಾನ ಇದೆ ಎಂದು ವರದಿ ಮಾಡಿಬಿಡುತ್ತೀರಾ ಎಂದು ನಕ್ಕರು.

ಇದೇ ಸಮಯದಲ್ಲಿ ಒಳಕ್ಕೆ ಬಂದ ಪರಮೇಶ್ವರ್ ಅವರನ್ನು ಮಾತನಾಡಿಸಿದ ಸಿದ್ದರಾಮಯ್ಯ, 'ನನ್ನ ನಿಮ್ಮ ನಡುವೆ ಯಾವುದಾದರೂ ಮನಸ್ತಾಪಗಳಿದೆಯಾ?' ಎಂದು ಪ್ರಶ್ನೆ ಮಾಡಿದರು.
ಇದಕ್ಕೆ ನಗುತ್ತಲೇ ಉತ್ತಿರಿಸಿದ ಪರಮೇಶ್ವರ್, 'ನನ್ನ ನಿಮ್ಮ ನಡುವೆ ಜಗಳ ಆಗಿದೆಯಂತೆ, ಜಗಳಕ್ಕೆ, ಅಸಮಾಧಾನಕ್ಕೆ ಯಾವುದಾದರೂ ಸಾಕ್ಷ್ಯ ಇದ್ದರೆ ಕೊಡಿ ಎಂದು ಕೇಳುತ್ತಿದ್ದೇನೆ, ಯಾರೂ ಕೊಡುತ್ತಿಲ್ಲ' ಎಂದು ಹೇಳಿದರು.
ಆ ಮೂಲಕ ಪರಮೇಶ್ವರ್ ಹಾಗೂ ಸಿದ್ದರಾಮಯ್ಯ ನಡುವೆ ಯಾವುದೇ ಅಸಮಾಧಾನ ಇಲ್ಲವೆಂದು ಇಬ್ಬರೂ ಸ್ಪಷ್ಟಪಡಿಸಿದರು.
ಕೆಲವು ದಿನಗಳ ಹಿಂದೆಯಷ್ಟೆ ಪರಮೇಶ್ವರ್ ಅವರು ದೆಹಲಿಗೆ ತೆರಳಿ ಸೋನಿಯಾ ಗಾಂಧಿ ಅವರನ್ನು ಭೇಟಿ ಆಗಿ ಬಂದರು. ಇದು ಸಿದ್ದರಾಮಯ್ಯ ಮತ್ತು ಪರಮೇಶ್ವರ್ ನಡುವೆ ಕಂದಕ ಹೆಚ್ಚಿಸಿದೆ ಎನ್ನಲಾಗಿತ್ತು. ಆದರೆ ಈ ಸುದ್ದಿಯನ್ನು ಇಬ್ಬರೂ ನಾಯಕರು ತಳ್ಳಿ ಹಾಕಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications