Meat Sale Banned : ಈ ನಗರಗಳಲ್ಲಿ ಮಾಂಸ ಮಾರಾಟ ನಿಷೇಧ, ತಪ್ಪಿದರೆ ಈ ಕ್ರಮದ ಎಚ್ಚರಿಕೆ!
Meat Sale Banned: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಕರ್ನಾಟಕದ ಮಹಾನಗರ ಪಾಲಿಕೆಗಳು, ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಮುಂಜಾಗ್ರತೆ ತೆಗೆದುಕೊಳ್ಳುತ್ತಿವೆ. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸುವುದು ಹಾಗೂ ಗಣೇಶ ಮೂರ್ತಿಗಳ ವಿಸರ್ಜನೆಗೆ ಮೊಬೈಲ್ ಟ್ಯಾಂಕರ್ಗಳ ವ್ಯವಸ್ಥೆ ಕಲ್ಪಿಸುವುದು ಹಾಗೂ ನೋಡಲ್ ಅಧಿಕಾರಿಗಳ ನೇಮಕವನ್ನೂ ಮಾಡಲಾಗುತ್ತಿದೆ. ಇದರೊಂದಿಗೆ ಮಣ್ಣಿನ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವಂತೆಯೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಮಾಂಸ ಮಾರಾಟ ನಿಷೇಧ ಎಲ್ಲೆಲ್ಲಿ: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯ ಮಾಂಸದಂಗಡಿಗಳಲ್ಲಿ (ಕಸಾಯಿಖಾನೆಗಳಲ್ಲಿ) ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟನ್ನು ಸಂಪೂರ್ಣ ನಿಷೇಧಿಸಿರುವುದಾಗಿ ತಿಳಿಸಿದ್ದಾರೆ.

Why Meat Sale Is Banned: ಹುಬ್ಬಳ್ಳಿ - ಧಾರವಾಡ ಪಾಲಿಕೆ ವ್ಯಾಪ್ತಿಯಲ್ಲೂ ಗಣೇಶ ಚತುರ್ಥಿ ಹಿನ್ನೆಲೆಯಲಿ ಮಾಂಸ ಮಾರಾಟವನ್ನು ನಿಷೇಧ ಮಾಡಲಾಗಿದೆ. ಅಲ್ಲದೇ ಈ ಭಾಗದಲ್ಲಿ ಹುಬ್ಬಳ್ಳಿ - ಧಾರವಾಡ ಪಾಲಿಕೆಯು ವಿಶೇಷ ಎಚ್ಚರಿಕೆಯೊಂದನ್ನು ಸಹ ನೀಡಿದೆ. ಗಣೇಶ ಚತುರ್ಥಿ ಇರುವುದರಿಂದ ಪಾಲಿಕೆಯ ಹುಬ್ಬಳ್ಳಿ ಮತ್ತು ಧಾರವಾಡ ಕಸಾಯಿಖಾನೆಗಳು ಹಾಗೂ ಎಲ್ಲಾ ಮಾಂಸದ ಅಂಗಡಿಗಳನ್ನು ಬಂದ್ ಮಾಡಲು ಸೂಚನೆ ನೀಡಲಾಗಿದೆ.
ಲೈಸನ್ಸ್ ರದ್ದುಪಡಿಸುವ ಎಚ್ಚರಿಕೆ
ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಹುಬ್ಬಳ್ಳಿ - ಧಾರವಾಡ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಮಾದರಿಯ ಮಾಂಸದಂಗಡಿಗಳನ್ನು ಸಹ ಬಂದ್ ಮಾಡಬೇಕು. ಒಂದೊಮ್ಮೆ ಮಾಂಸದ ಅಂಗಡಿಗಳನ್ನು ತೆರೆದಿದ್ದು ಖಚಿತವಾದರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಮಾಂಸದ ಅಂಗಡಿಗಳನ್ನು ತೆರೆದಿದ್ದಲ್ಲಿ ಹುಬ್ಬಳ್ಳಿ - ಧಾರವಾಡ ಪಾಲಿಕೆಯಿಂದ ಮಾಂಸದಂಗಡಿಯ ಲೈಸೆನ್ಸ್ ರದ್ದು ಪಡಿಸಿ, ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಈ ಸಂಬಂಧ ಪಾಲಿಕೆಯ ಮುಖ್ಯ ಪಶು ವೈದ್ಯಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.
-
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications