ಸುದ್ದಿಗೋಷ್ಠಿಗೆ ಕರೆದ ಡಿಸಿಎಂ, ಕ್ಯಾಮೆರಾ ಆನ್ ಮಾಡದೇ ಪ್ರತಿಭಟಿಸಿದ ಪತ್ರಕರ್ತರು
ಬೆಂಗಳೂರು, ಅಕ್ಟೋಬರ್ 11: ವಿಧಾನಸೌಧ ಕಲಾಪ ವರದಿ ಮಾಡದಂತೆ ನಿಷೇಧ ಹೇರಿದ ಸರ್ಕಾರದ ಸುದ್ದಿಗೋಷ್ಠಿಗಳನ್ನು ಪತ್ರಕರ್ತರು ಬಹಿಷ್ಕರಿಸುವ ಮೂಲಕ 'ಪಾಠ' ಕಲಿಸಲು ಮುಂದಾಗಿದ್ದಾರೆ.
ಇಂದು ಕಲಾಪ ನಡುವೆಯು ವೇಳೆ ಬಿಡುವಿನ ಸಮಯದಲ್ಲಿ ಸುದ್ದಿಯೊಂದನ್ನು ನೀಡಲು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಪತ್ರಕರ್ತರನ್ನು ಸುದ್ದಗೋಷ್ಠಿಗೆ ಕರೆದಿದ್ದಾರೆ. ಆಹ್ವಾನದಂತೆ ಮಾಧ್ಯಮದವರೂ ಹೋಗಿದ್ದಾರೆ ಆದರೆ ಅಲ್ಲಿಗೆ ಹೋಗಿ ಕ್ಯಾಮೆರಾ ಸಹ ಆನ್ ಮಾಡದೆ ಡಿಸಿಎಂ ಮುಂದೆ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.
ಗೋವಿಂದ ಕಾರಜೋಳ ಅವರು 'ಸುದ್ದಿಗೋಷ್ಠಿ ಶುರು ಮಾಡೋಣ' ಎಂದಾಗ, 'ನೀವು ದೂರದರ್ಶನಕ್ಕೆ ಮಾತ್ರವೇ ಅವಕಾಶ ಕೊಡುವುದಲ್ಲವೇ ಅವರಿಗೆ ಮಾತ್ರವೇ ಸಂದರ್ಶನ ನೀಡಿ' ಎಂದು ಮಾಧ್ಯಮದವರು ಹೇಳಿದ್ದಾರೆ. ಇದರಿಂದ ಪಾಪ ಡಿಸಿಎಂ ಕಾರಜೋಳ ಅವರು ಮುಜುಗರಕ್ಕೆ ಸಿಲುಕಿದ್ದಾರೆ.

ಡಿಸಿಎಂ ಅವರು ಕೇಳಿದರೂ ಸಹ ಯಾವೊಬ್ಬ ಮಾಧ್ಯಮದವರೂ ಸಹ ಕ್ಯಾಮೆರಾ ಆನ್ ಮಾಡಲಿಲ್ಲ, ವಾಹಿನಿಯ ಲೋಗೋ ಇಡದೆ, ಡಿಸಿಎಂ ಅವರು ದೂರದರ್ಶನಕ್ಕೆ ನೀಡಿದ ಬೈಟ್ ನೋಡುತ್ತಾ ನಿಂತು ನಂತರ ಅಲ್ಲಿಂದ ವಾಪಸ್ಸಾಗಿದ್ದಾರೆ.
ಚಂದನ ವಾಹಿನಿ ಹೊರತುಪಡಿಸಿ ಕಲಾಪವನ್ನು ಯಾವ ಮಾಧ್ಯಮದವರೂ ಪ್ರಸಾರ ಮಾಡದಂತೆ ಸರ್ಕಾರ ನಿಷೇಧ ಹೇರಿದೆ. ಪತ್ರಿಕೆಗಳ ಛಾಯಾಚಿತ್ರಕಾರರಿಗೂ ಅವಕಾಶ ನಿರಾಕರಿಸಲಾಗಿದೆ. ಇದು ಮಾಧ್ಯಮಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಸರ್ಕಾರದ ವಿರುದ್ಧ ಇಂದು ಪ್ರತಿಭಟನೆ ಸಹ ಮಾಡಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications