ಹಿಸ್ಟರಿ ಟಿವಿ18ಯಲ್ಲಿ ವೀಕ್ಷಿಸಿ ಬೆಂಗಳೂರಿನ ಜ್ಯೂಸ್ ರಾಜಾ ಕಥೆ
ಬೆಂಗಳೂರು, ಏಪ್ರಿಲ್ 2: ಭಾರತೀಯರು ಪ್ರತಿ ವರ್ಷ ಅಂದಾಜು 40% ಆಹಾರವನ್ನು ವ್ಯರ್ಥವಾಗಿ ಎಸೆಯುತ್ತಾರೆ. ಇದು ಒಂದು ವರ್ಷದಲ್ಲಿ 6.7 ಕೋಟಿ ಟನ್ ಕಸಕ್ಕೆ ಎಸೆದ ಹಾಗೆ ಎಂದು ಭಾವಿಸಬಹುದು. ಇದು ನಿಮಗೆ ಆಘಾತ ನೀಡಿದರೆ, ಚಿಂತೆ ಮಾಡಬೇಡಿ! ಯಾಕೆಂದರೆ ನಮ್ಮ ಬೆಂಗಳೂರಿನಲ್ಲಿ ಒಬ್ಬರು ಶೂನ್ಯ ತ್ಯಾಜ್ಯದ ಹೀರೋ ಇದ್ದಾರೆ.
ಈ ಆನಂದ್ ರಾಜ್ ಜ್ಯೂಸ್ ರಾಜಾ ಎಂದೇ ಹೆಸರಾಗಿದ್ದಾರೆ. ಈ ಸೋಮವಾರ ರಾತ್ರಿ 8 ಗಂಟೆಗೆ HistoryTV18 ಟ್ಯೂನ್ ಮಾಡಿ ಮತ್ತು ಆನಂದ್ ಅವರ ಬಗ್ಗೆ 'OMG! Yeh Mera India' ದಲ್ಲಿ ವೀಕ್ಷಿಸಬಹುದು.
ಈ ಮಾಜಿ ರೇಡಿಯೋ ಜಾಕಿ ತನ್ನ ಜನಪ್ರಿಯ ಜ್ಯೂಸ್ ಶಾಪ್ನಲ್ಲಿ ಹಣ್ಣಿನ ಜ್ಯೂಸ್ ಅನ್ನು ಅವುಗಳ ಚಿಪ್ಪಿನಲ್ಲೇ ಒದಗಿಸುವ ಅಪರೂಪದ ಕಲ್ಪನೆಯನ್ನು ಸಾಕಾರಗೊಳಿಸಿದ್ದು, ತ್ಯಾಜ್ಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸ್ಫೂರ್ತಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹದಿಮೂರು ವರ್ಷಗಳವರೆಗೆ ಆರ್ಜೆ ಆಗಿ ಕೆಲಸ ಮಾಡಿದ್ದ ಆನಂದ್ ರಾಜ್, ತನ್ನ ತಂದೆ ನಡೆಸುತ್ತಿದ್ದ ಜ್ಯೂಸ್ ಶಾಪ್ 'ಈಟ್ ರಾಜಾ' ಅನ್ನು ವಹಿಸಿಕೊಂಡರು. ಅವರ ವಿಶಿಷ್ಟ ಕಾನ್ಸೆಪ್ಟ್ನಿಂದ ಶಾಪ್ ಹೆಸರಾಯಿತು. ಅತ್ಯಂತ ಜನಪ್ರಿಯ ಪರಿಸರ ಸ್ನೇಹಿ ಕೆಫೆಯಾಗಿ ಇದು ಮಾರ್ಪಟ್ಟಿತು.

ರುಚಿಕರವಾದ ಜ್ಯೂಸ್ ಅನ್ನು ಹೀರಲು ನೂರಾರು ಜನರು ನಿತ್ಯವೂ ಇಲ್ಲಿಗೆ ಆಗಮಿಸುತ್ತಾರೆ. ಅಷ್ಟೇ ಅಲ್ಲ, ಇಲ್ಲಿ ಗ್ರಾಹಕರಿಗೆ ಆತ್ಮತೃಪ್ತಿಯೂ ಆಗುತ್ತದೆ. ರುಚಿಕರವಾದ 99 ವಿಧದ ಜ್ಯೂಸ್ ಅನ್ನು ತಯಾರಿಸುವ ಇವರು ಬಾಳೆಹಣ್ಣು, ಕ್ಯಾಪ್ಸಿಕಂ, ಕಲ್ಲಂಗಡಿ, ಕಿತ್ತಳೆ ಮತ್ತು ಇತರ ಹಲವು ವಿಧದ ಹಣ್ಣಿನ ಚಿಪ್ಪಿನಲ್ಲೇ ಜ್ಯೂಸ್ ಅನ್ನು ಗ್ರಾಹಕರಿಗೆ ಒದಗಿಸುತ್ತಾರೆ. ಈ ಮೂಲಕ ಇವರು ತ್ಯಾಜ್ಯವನ್ನೂ ಕಡಿಮೆ ಮಾಡುತ್ತಾರೆ.
ಜ್ಯೂಸ್ನ ತ್ಯಾಜ್ಯವನ್ನು ಬಳಸಿ ನಗರದಾದ್ಯಂತ ಜಾನುವಾರುಗಳಿಗೆ ಪೌಷ್ಠಿಕಾಂಶವನ್ನೂ ಒದಗಿಸುತ್ತಾರೆ. ಉಳಿದ ಹಣ್ಣಿನ ಭಾಗಗಳನ್ನು ಬಳಸಿ ಜೈವಿಕ ಕಿಣ್ವಗಳ ಮೂಲಕ ನೈಸರ್ಗಿಕ ಸ್ವಚ್ಛತಾ ದ್ರಾವಣವನ್ನು ತಯಾರಿಸುತ್ತಾರೆ. ಜ್ಯೂಸ್ ಅನ್ನು ಗ್ರಾಹಕರಿಗೆ ಒದಗಿಸಲು ಗ್ಲಾಸ್ಗಳನ್ನು ಬಳಸದೇ, ಜ್ಯೂಸ್ ರಾಜಾ ಪ್ರತಿ ವರ್ಷ ಅಂದಾಜು 54,750 ಲೀಟರ್ ನೀರನ್ನು ಉಳಿತಾಯ ಮಾಡುತ್ತಾರೆ!
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Summer: ಕರ್ನಾಟಕದಲ್ಲಿ ಪ್ರಕೃತಿ ವಿಕೋಪ - ಬೇಸಿಗೆ ನೀರಿನ ಸಂಕಷ್ಟ ತಡೆಗೆ ಸಿದ್ಧತೆ; ಉನ್ನತ ಮಟ್ಟದ ಸಭೆಯಲ್ಲಿ ಮಹತ್ವದ ನಿರ್ಧಾರ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Summer Super Drink: ಪ್ರತಿದಿನ ಎರಡು ಗ್ಲಾಸ್ ಕಬ್ಬಿನ ರಸ: ಬೇಸಿಗೆಯ ಸೂಪರ್ ಡ್ರಿಂಕ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ











Click it and Unblock the Notifications