ಹೋಟೆಲ್ ತಿಂಡಿ, ಊಟ ದರ ಏರಿಕೆ ಬಗ್ಗೆ ನ.18, 23ಕ್ಕೆ ಸಭೆ
ಬೆಂಗಳೂರು, ನವೆಂಬರ್ 14: ಸದ್ಯಕ್ಕೆ ಬೆಂಗಳೂರಿನ ಹೋಟೆಲ್ಗಳ ತಿಂಡಿ, ಊಟದ ಬೆಲೆ ಏರಿಕೆ ಮಾಡಲ್ಲ. ಪರಿಸ್ಥಿತಿ ನೋಡಿಕೊಂಡು ಈ ಬಗ್ಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಬೃಹತ್ ಬೆಂಗಳೂರು ಹೋಟೆಲ್ಗಳ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಸ್ಪಷ್ಟಪಡಿಸಿದರು.
ಹೋಟೆಲ್ ಊಟ, ತಿಂಡಿ ದರ ಏರಿಕೆ ಕುರಿತು 'ಒನ್ ಇಂಡಿಯಾ' ಜೊತೆಗೆ ಮಾತನಾಡಿದ ಅವರು, ಪ್ರತಿ ಲೀಟರ್ಗೆ ಹಾಲಿನ ದರ ಏರಿಕೆ ಆಗಿದೆ. ಸರ್ಕಾರಿ ಗ್ಯಾಸ್ ಸಿಲೆಂಡರ್ ಮೇಲಿನ ಸಬ್ಸಿಡಿ ಮರುಪಾವತಿ ಸ್ಥಗಿತಗೊಳಿಸಿದೆ. ಇದರಿಂದ ಹೋಟೆಲ್ ಉದ್ಯಮ ಮೇಲೆ ಹೊರೆಯಾಗಲಿದೆ. ಈ ಸಂಬಂಧ ಚರ್ಚಿಸಿ, ಸಾಧಕ ಬಾಧಕ ನೋಡಿಕೊಂಡು ದರ ಏರಿಕೆ ಮಾಡಲಾಗುವುದು ಎಂದು ಹೇಳಿದರು.
ಸಬ್ಸಿಡಿ ಕಡಿತ, ದರ ಏರಿಕೆ ಕುರಿತು ಚರ್ಚಿಸಿಲು ಇದೇ ನವೆಂಬರ್ 18ರಂದು ದಕ್ಷಿಣ ಭಾರತದ ಹೋಟೆಲ್ ಮಾಲೀಕರ ಸಂಘದಿಂದ ಸಭೆ ನಡೆಯಲಿದೆ. ನಂತರ ನವೆಂಬರ್ 23ಕ್ಕೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘದಿಂದ ಮತ್ತೊಂದು ಸಭೆ ನಡೆಸಲಾಗುವುದು. ಆನಂತರವೇ ದರ ಏರಿಕೆ ಬಗ್ಗೆ ನೀರ್ಧರಿಸಲಾಗುವುದು.

ಸರ್ಕಾರಕ್ಕೆ ಈಗಾಗಲೇ ನೀಡಿದ ಮನವಿಯಂತೆ ಸಿಲಿಂಡರ್ ಸಬ್ಸಿಡಿ ಮರಳಿ ನೀಡುವಂತೆ ಆಗ್ರಹಿಸಲಾಗುವುದು. ವಾರದ ಏಳು ದಿನವು 24x7 ಹೋಟೆಲ್ ತೆರೆಯಲು ಅವಕಾಶ ಮಾಡಿಕೊಡಬೇಕು. ಒಂದು ವೇಳೆ ಸರ್ಕಾರ ಸ್ಪಂದಿಸದಿದ್ದರೆ ಕಾನೂನು ರೀತಿ ಹೋರಾಟ ಕುರಿತು ಚರ್ಚಿಸಲಿದ್ದೇವೆ ಎಂದರು.
ನಿಯಮದಂತೆ ರಸ್ತೆ ಬದಿ ಸಿಲೆಂಡರ್ ಇಟ್ಟುಕೊಂಡು ಊಟು, ತಿಂಡಿ ಮಾರಾಟ ಮಾಡುವುದು ನಿಶಿದ್ಧ. ಹೀಗಾಗಿ ಹೋಟೆಲ್ಗಳಿಗೆ ಇರುವ ನಿಯಮದಂತೆ ರಸ್ತೆ ಬದಿ ತಿಂಡಿ, ಊಟ ಮಾರಾಟಗಾರರಿಗೆ ನಿಯಮ ವಿಧಿಸಬೇಕು. ಅವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಶುಚಿತ್ವ, ಗುಣಮಟ್ಟದ ಆಹಾರ ಮಾರಾಟಕ್ಕೆ ಸೂಚಿಸಬೇಕು ಎಂದು ಮನವಿ ಮಾಡಿದರು.
ಆತಂಕದಲ್ಲಿ ಗ್ರಾಹಕರು, ಭಯದಲ್ಲಿ ಉದ್ಯಮಿಗಳು
ಈಗಾಗಲೇ ಹೋಟೆಲ್ಗಳಲ್ಲಿ ಒಂದು ಕಪ್ ಟಿ/ಕಾಫಿ ಬೆಲೆ 10ರಿಂದ 20ರೂ.ವರೆಗೆ ಇದೆ. ಇದೇ ವೇಳೆ ಹಾಲಿನ ದರ ಏರಿಕೆ ಆಗಿದೆ. ಜೊತೆಗೆ ಸಿಲೆಂಡರ್ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ. ಇದೀಗ ಪುನಃ ಊಟ, ತಿಂಡಿ ಏರಿಸಿದರೆ ಹೇಗೆ ಎಂಬ ಆತಂಕದಲ್ಲಿ ಗ್ರಾಹಕರಿದ್ದಾರೆ.

ಇತ್ತ ಕೋವಿಡ್ ಬಳಿಕ ಹೋಟೆಲ್ ಉದ್ಯಮ ಚೇತರಿಸಿಕೊಂಡಿದೆ. ಇದೀಗ ಡಿಢೀರನೆ ತಿಂಡಿ, ಊಟ, ಚಹಾ, ಕಾಫಿ ದರ ಹೆಚ್ಚಿಸಿದರೆ ಇನ್ನಷ್ಟು ನಷ್ಟವಾಗುವ, ಹಾಲಿ ಆಗುವ ವ್ಯಾಪಾರ ವಹೀವಾಟಿನ ಮೇಲೆ ಹೊಡೆತ ಬೀಳಲಿದೆ ಎಂದು ಭಯ ಹೋಟೆಲ್ ಉದ್ಯಮಿದಾರರಲ್ಲಿಯೂ ಇದೆ.
ನವೆಂಬರ್ 23ರ ನಂತರ ಈ ಎಲ್ಲ ಗೊಂದಲ, ಭಯ, ಆತಂಕಗಳಿಗೆ ತೆರೆ ಬೀಳುವ ಸಾಧ್ಯತೆ ಇದೆ. ಒಂದು ವೇಳೆ ಸಭೆಯ ಬಳಿಕ ಹೋಟೆಲ್ ಮಾಲೀಕರು ದರ ಏರಿಕೆಗೆ ನಿರ್ಧರಿಸಿದರೆ ಡಿಸೆಂಬರ್ ತಿಂಗಳಿನಿಂದ ದರ ಏರಿಕೆ ಆಗಬಹುದು ಎನ್ನಲಾಗಿದೆ.
-
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಮಾರ್ಚ್ 26ರ ದರಪಟ್ಟಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications