ಕನ್ನಡಿಗರಿಗೆ ಉದ್ಯೋಗ : ಕರವೇಯಿಂದ ಇಂದು ಬೃಹತ್ ಪ್ರತಿಭಟನೆ, 8 ಬೇಡಿಕೆಗಳು
ಬೆಂಗಳೂರು, ಡಿಸೆಂಬರ್ 07 : ಕನ್ನಡಿಗರಿಗೆ ಕಡ್ಡಾಯವಾಗಿ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಡಿಸೆಂಬರ್ 23ರಂದು ಪ್ರತಿಭಟನೆ ನಡೆಯಲಿದ್ದು, ಬೆಳಿಗ್ಗೆ 11 ಗಂಟೆಗೆ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಿಂದ ವಿಧಾನಸೌಧದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಕರವೇ ಸದಸ್ಯರು ಮಾಡಲಿದ್ದಾರೆ. ಈ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯದ ನಾನಾ ಕಡೆಗಳಿಂದ ಪ್ರತಿಭಟನಾಕಾರರು ಭಾಗವಹಿಸಲಿದ್ದಾರೆ.

'ಕಡ್ಡಾಯವಾಗಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ' ಪ್ರಮುಖ ಬೇಡಿಕೆಯಾಗಿರುವ ಈ ಪ್ರತಿಭಟನೆಯಲ್ಲಿ ಒಟ್ಟು 8 ಕನ್ನಡ ಸಂಬಂಧಿ ಇತರ ಬೇಡಿಕೆಗಳ ಈಡೇರಿಕೆಗೆ ಕರವೇ ಒತ್ತಾಯಿಸುತ್ತಿದೆ.
ಕರವೇ ಬೇಡಿಕೆಗಳ ಪಟ್ಟಿ ಇಂತಿದೆ...
1) ರಾಜ್ಯಸರ್ಕಾರದ ಎಲ್ಲ ಇಲಾಖೆಗಳು ಮತ್ತು ರಾಜ್ಯ ಸರ್ಕಾರಿ ಸ್ವಾಮ್ಯದ ಎಲ್ಲ ಉದ್ದಿಮೆಗಳಲ್ಲಿ ಕರ್ನಾಟಕದ ಅಭ್ಯರ್ಥಿಗಳನ್ನೇ ಉದ್ಯೋಗಕ್ಕಾಗಿ ಆಯ್ಕೆ ಮಾಡಬೇಕು.
2) ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಕೇಂದ್ರ ಸರ್ಕಾರಿ ಇಲಾಖಾ ಕಚೇರಿಗಳು ಕೇಂದ್ರ ಸರ್ಕಾರಿ ಸಾಮ್ಯದ ಎಲ್ಲ ಉದ್ದಿಮೆಗಳಲ್ಲಿ ಕಡ್ಡಾಯವಾಗಿ ಕನಿಷ್ಠ 10ನೇ ತರಗತಿಯ ವರೆಗೆ ಕನ್ನಡವನ್ನು ಒಂದು ಭಾಷೆಯಾಗಿ ವ್ಯಾಸಂಗ ಮಾಡಿದ ಕರ್ನಾಟಕದ ಅಭ್ಯರ್ಥಿಗಳನ್ನೇ ಉದ್ಯೋಗಕ್ಕೆ ನೇಮಕ ಮಾಡಿಕೊಳ್ಳಬೇಕು.

3) ಕರ್ನಾಟಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಬಗೆಯ ಖಾಸಗಿ ಉದ್ದಿಮೆಗಳು ಕನಿಷ್ಠ 10ನೇ ತರಗತಿಯವರೆಗೆ ಕನ್ನಡವನ್ನು ಒಂದು ಭಾಷೆಯಾಗಿ ವ್ಯಾಸಂಗ ಮಾಡಿದ ಕರ್ನಾಟಕದ ಅಭ್ಯರ್ಥಿಗಳನ್ನೇ ಉದ್ಯೋಗಕ್ಕಾಗಿ ನೇಮಕ ಮಾಡಿಕೊಳ್ಳಬೇಕು.
4) ರಾಜ್ಯ ಮತ್ತು ಕೇಂದ್ರ ಸರ್ಕಾರದ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಕಡ್ಡಾಯವಾಗಿ ಕನ್ನಡದಲ್ಲಿ ಇರಬೇಕು ಹಾಗೂ ಕನ್ನಡದಲ್ಲಿಯೇ ಉತ್ತರಿಸಲು ಅವಕಾಶ ಇರಬೇಕು. ಅವುಗಳ ಸಂದರ್ಶನಗಳೂ ಕನ್ನಡದಲ್ಲಿಯೇ ನಡೆಯಬೇಕು.
5) ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳು ಮತ್ತು ಉದ್ದಿಮೆಗಳಲ್ಲಿ ಗುತ್ತಿಗೆ ಅಥವಾ ದಿನಗೂಲಿ ಆಧಾರದಲ್ಲಿ ನೇಮಕ ಮಾಡಿಕೊಳ್ಳುವ ವೇಳೆ 10ನೇ ತರಗತಿಯ ವರೆಗೆ ಕನ್ನಡವನ್ನು ಒಂದು ಭಾಷೆಯಾಗಿ ವ್ಯಾಸಾಂಗ ಮಾಡಿದ ಕರ್ನಾಟಕದ ಅಭ್ಯರ್ಥಿಗಳನ್ನೇ ಉದ್ಯೋಗಕ್ಕಾಗಿ ಆಯ್ಕೆ ಮಾಡಬೇಕು.
6) ರಾಜ್ಯದಲ್ಲಿ ವ್ಯವಹಾರ ನಡೆಸುವ ಕೇಂದ್ರ ಸರ್ಕಾರಿ ಸ್ವಾಮ್ಯದ ಖಾಸಗಿ ಬ್ಯಾಂಕ್ಗಳು, ಗ್ರಾಮೀಣ ಬ್ಯಾಂಕ್ಗಳು ಉದ್ಯೋಗ ನೇಮಕಾತಿ ವೇಳೆ 10ನೇ ತರಗತಿಯವರೆಗೆ ಕನ್ನಡವನ್ನು ಒಂದು ಭಾಷೆಯಾಗಿ ವ್ಯಾಸಂಗ ಮಾಡಿದ ಕರ್ನಾಟಕದ ಅಭ್ಯರ್ಥಿಗಳನ್ನೇ ಉದ್ಯೋಗಕ್ಕಾಗಿ ಆಯ್ಕೆ ಮಾಡಬೇಕು.
7) ಸ್ಥಳೀಯರು ಅಥವಾ ಕರ್ನಾಟಕ ರಾಜ್ಯದವರು ಎಂದು ಪರಿಗಣಿಸಲು ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 20 ವರ್ಷ ವಾಸಿಸಿರಬೇಕು ಅಲ್ಲದೇ ಕನ್ನಡ ಭಾಷಾ ಜ್ಞಾನವಿರಬೇಕು ಮತ್ತು ಕನ್ನಡದಲ್ಲಿ ಎಸ್ಎಸ್ಎಲ್ಸಿ ಓದಿದ ಶಾಲಾ ದಾಖಲೆ ಕಡ್ಡಾಯವಾಗಿ ಹೊಂದಿರಬೇಕು.
8) ಹೊರನಾಡಿನಲ್ಲಿ 10ನೇ ತರಗತಿಯವರೆಗೆ ಕನ್ನಡವನ್ನು ಒಂದು ಭಾಷೆಯಾಗಿ ಓದಿದ ಅಭ್ಯರ್ಥಿಗಳನ್ನು ಕನ್ನಡಿಗರೆಂದು ಪರಿಗಣಿಸಿ ಒಳನಾಡಿನ ಅಭ್ಯರ್ಥಿಗಳಿಗೆ ನೀಡುವ ಎಲ್ಲ ಸೌಲಭ್ಯಗಳನ್ನೂ ನೀಡಬೇಕು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications