ತಪ್ಪೊಪ್ಪಿಕೊಂಡ ಶಂಕಿತ ಉಗ್ರ ಮೆಹದಿ ಮಸ್ರೂರ್ ಬಿಸ್ವಾಸ್
ಬೆಂಗಳೂರು, ಡಿ. 13: ಐಎಸ್ಐಎಸ್ ಪರ ಟ್ವಿಟ್ಟರ್ ಖಾತೆ @shammiwitness ನಿರ್ವಹಿಸುತ್ತಿದ್ದ ಆರೋಪಿ ಮೆಹದಿ ಮಸ್ರೂರ್ ಬಿಸ್ವಾಸ್ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ಮೆಹದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಎನ್. ರೆಡ್ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. [ಜಾಣ ಮೆಹದಿ ಗೂಢಚಾರರ ಕಣ್ಣು ತಪ್ಪಿಸಿದ್ದು ಹೇಗೆ]

ಶುಕ್ರವಾರ ರಾತ್ರಿಯೇ ಡಿಸಿಪಿ ಸಂದೀಪ್ ಪಾಟೀಲ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಶಂಕಿತ ಉಗ್ರ ಮೆಹದಿಯನ್ನು ಬೆಂಗಳೂರಿನ ಜಾಲಹಳ್ಳಿಯ ಅಯ್ಯಪ್ಪನಗರದಲ್ಲಿ ಬಂಧಿಸಿದ್ದಾರೆ. ಶಂಕಿತ ಉಗ್ರನನ್ನು ವಿಚಾರಣೆಗೊಳಪಡಿಸಲಾಗಿದೆ. ಮೊದಲು ತನ್ನ ಅಕೌಂಟ್ ಹ್ಯಾಕ್ ಮಾಡಲಾಗಿದೆ ಎಂದು ವಾದಿಸುತ್ತಿದ್ದ. ನಂತರ ತಾನು ಟ್ಟಿಟ್ಟರ್ ಮೂಲಕ ಐಎಸ್ಐಎಸ್ ಸಂಘಟನೆ ಪರ ಸಂದೇಶ ರವಾನಿಸುತ್ತಿದ್ದುದನ್ನು ಒಪ್ಪಿಕೊಂಡಿದ್ದಾನೆಂದು ರೆಡ್ಡಿ ತಿಳಿಸಿದ್ದಾರೆ. [ಒಂದು ಕೈಯಲ್ಲಿ ಎಕೆ 47, ಇನ್ನೊಂದು ಕೈಯಲ್ಲಿ ಮಗು]
ಪಶ್ಚಿಮ ಬಂಗಾಳ ಮೂಲದ ಇಂಜಿನಿಯರ್ ಆಗಿರುವ ಮೆಹದಿ ಬೆಂಗಳೂರಿನಲ್ಲಿರುವ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಬೆಳಗ್ಗೆ, ರಾತ್ರಿ ಹಾಗೂ ಬಿಡುವಿನ ಸಂದರ್ಭಗಳಲ್ಲಿ ಟ್ವಿಟ್ಟರ್ ಸಂದೇಶ ರವಾನಿಸುತ್ತಿದ್ದ. ಯುವಕರನ್ನು ಐಎಸ್ಐಎಸ್ ಸೇರುವಂತೆ ಪ್ರೋತ್ಸಾಹಿಸುತ್ತಿದ್ದ. ಇಂಗ್ಲಿಷ್ ಮಾತನಾಡಬಲ್ಲ ಉಗ್ರರೊಂದಿಗೆ ಸಂಪರ್ಕದಲ್ಲಿದ್ದ ಎಂದು ತಿಳಿಸಿದ್ದಾರೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications