ಕಾವೇರಿ ಬೆನ್ನಲ್ಲೆ 'ಮೇಕೆದಾಟು' ಯೋಜನೆ ಜಾರಿಗೆ ಆಗ್ರಹ: 'ಪತ್ರ ಚಳವಳಿ' ಆರಂಭಿಸಿದ ಎಎಪಿ
ಬೆಂಗಳೂರು, ಅಕ್ಟೋಬರ್ 08: ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ವಿಚಾರ ಕುರಿತ ಪ್ರತಿಭಟನೆಗಳು, ಧರಣಿ ಸತ್ಯಾಗ್ರಹಗಳು ಮುಂದುವರಿದ ಬೆನ್ನಲ್ಲೆ ಮೇಕದಾಟು ಯೋಜನೆಗಾಗಿ ಆಗ್ರಹಗಳು ಕೇಳಿ ಬಂದಿವೆ. ಕಾವೇರಿ ಕಿಚ್ಚಿನ ಜೊತೆಗೆ ಮೇಕೆದಾಟು ಯೋಜನೆ ಜಾರಿಯ ಒತ್ತಾಯ ಸರ್ಕಾರದ ಮೇಲೆ ಮತ್ತಷ್ಟು ಒತ್ತಡ ತರುತ್ತಿದೆ.
ಕರ್ನಾಟಕಕ್ಕೆ ನಿರಂತರವಾಗಿ ಕಾವೇರಿ ನೀರನ್ನು ನೆರೆಯ ತಮಿಳುನಾಡಿಗೆ ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಸುಪ್ರೀಂ ಕೊರ್ಟ್ ಸೂಚಿಸಿದೆ. ಆದರೆ ಪಾಲಿಸಿದ ಕರ್ನಾಟಕ ಸರ್ಕಾರ ನೀರು ಹರಿಸಿದ್ದನ್ನು ವಿರೋಧಿಸಿ ಬೆಂಗಳೂರು ಬಂದ್, ಕರ್ನಾಟಕ ಬಂದ್, ಧರಣಿ ನಡೆದವು. ಇದೀಗ ಅದೇ ಸಂಘಟನೆಗಳ ಪೈಕಿ ಆಮ್ ಆದ್ಮಿ ಪಕ್ಷವು ಮೇಕೆದಾಟು ಯೋಜನೆಗೆ ಜಾರಿಗೆ ಒತ್ತಾಯಿಸಿ 'ಪತ್ರ ಚಳವಳಿ' ನಡೆಸಿದೆ.

ಬೆಂಗಳೂರು ನಗರಕ್ಕೆ ಶಾಶ್ವತ ಕುಡಿಯುವ ನೀರಿಗಾಗಿ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿಸಿ ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕ ಪತ್ರ ಚಳುವಳಿ ಆರಂಭಿಸಿದೆ.
ಯೋಜನೆ ಜಾರಿ, ಜಲ ಮೂಲ ರಕ್ಷಣೆಗೆ ಒತ್ತಾಯ
ವಸಂತ ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಶನಿವಾರ ಪತ್ರ ಚಳುವಳಿಗೆ ಚಾಲನೆ ನೀಡಿತು. ಮೇಕೆದಾಟು ಅಣೆಕಟ್ಟು ನಿರ್ಮಿಸಬೇಕು ಹಾಗೂ ಬೆಂಗಳೂರು ಜಲಮೂಲಗಳ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಗರದ ನಿವಾಸಿಗಳ ಕೈಯಿಂದ ಲಕ್ಷಾಂತರ ಸಂಖ್ಯೆಯಲ್ಲಿ ಪತ್ರಗಳನ್ನು ಬರೆಸುವ ಮೂಲಕ ಒತ್ತಡ ಹೇರಲಿದೆ.

ವಸಂತನಗರದ ನಾಗರಿಕರು ಅಂಗಡಿ ಮಾಲೀಕರುಗಳು ಅತ್ಯಂತ ಉತ್ಸುಕತೆಯಿಂದ ಪತ್ರ ಚಳುವಳಿಗೆ ಸಹಿ ಹಾಕುವ ಮೂಲಕ ಸಂಪೂರ್ಣ ಸಹಕಾರವನ್ನು ತೋರಿಸಿದರು. ಪಕ್ಷದ ಮುಖಂಡರು ಖುದ್ದಾಗಿ ಕಾರ್ಮಿಕರು, ಆಟೋ ಚಾಲಕರು, ಕಚೇರಿ ಸಿಬ್ಬಂದಿ, ಬಿಬಿಎಂಪಿ ಸಿಬ್ಬಂದಿ ಸೇರಿದಂತೆ ಬೆಂಗಳೂರಿನ ಎಲ್ಲ ವರ್ಗದ ಜನರನ್ನು ಭೇಟಿಯಾಗಿ ಪತ್ರವನ್ನು ಬರೆಸಿ ಸಂಗ್ರಹಿಸುವ ಮೂಲಕ ಚಳವಳಿ ಆರಂಭಿಸಿದ್ದಾರೆ.
ಪತ್ರ ಚಳುವಳಿ ಹಾಗೂ ಜಾಗೃತಿ ಕಾರ್ಯದಲ್ಲಿ ನಗರದಾದ್ಯಂತ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ, ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ, ಬೆಂಗಳೂರು ಸಂಘಟನಾ ಕಾರ್ಯದರ್ಶಿಗಳಾದ ಅಶೋಕ್ ಮೃತ್ಯುಂಜಯ , ವಿಶ್ವನಾಥ್, ಶಶಿಧರ್ ಆರಾಧ್ಯ, ಬಸವರಾಜ್ ಜಮ್ ಶೆಟ್ಟಿ, ಅನಿಲ್ ನಾಚಪ್ಪ ,ಜಗದೀಶ್ ಬಾಬು , ಮರಿಯಾ, ಉಸ್ಮಾನ್, ಡಾ. ಕೇಶವ್ ಕುಮಾರ್ ಚಂದನ್ ಶೆಟ್ಟಿ ಸೇರಿದಂತೆ ಪಕ್ಷದ ಎಲ್ಲ ಮುಖಂಡರು ಸಕ್ರಿಯವಾಗಿ ಪಾಲ್ಗೊಂಡಿದ್ದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು










Click it and Unblock the Notifications