ತೃತಿಯ ಲಿಂಗಿಗೂ ಟಿಕೆಟ್ ಕೊಟ್ಟ ಎಂಇಪಿ: 149 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ
ಬೆಂಗಳೂರು, ಏಪ್ರಿಲ್ 16: ಎಂಇಪಿ ಅಭ್ಯರ್ಥಿಗಳು ಬಲಿಷ್ಠ ರಾಗಿದ್ದು ಈ ಬಾರಿ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಡಾ.ನೌಹೀರಾ ಶೇಖ್ ವ್ಯಕ್ತಪಡಿಸಿದ್ದಾರೆ.
ಖಾಸಗಿ ಹೋಟೆಲ್ವೊಂದರಲ್ಲಿ 20 ಜಿಲ್ಲೆಗಳ 149 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಯಿತು. ಮೊದಲ ಪಟ್ಟಿಯಲ್ಲಿ ತೃತೀಯ ಲಿಂಗಿಗೂ ಒಂದು ಸ್ಥಾನವನ್ನು ನೀಡಲಾಗಿದೆ.
ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಜಾತಿ, ಸಮುದಾಯ, ಧರ್ಮದ ಆಧಾರ ಮೇಲೆ ಟಿಕೆಟ್ ಹಂಚಿಕೆ ಮಾಡಿಲ್ಲ ಲಂಚ ಮತ್ತು ವಸೂಲಿ ಬಾಜಿ, ಮಧ್ಯವರ್ತಿಗಳ ಹಾವಳಿಗೆ ಅವಕಾಶ ಕೊಟ್ಟಿಲ್ಲ ಸಮೀಕ್ಷೆ ಮಾಡಿಸಿ, ಪಾರದರ್ಶಕ ವಾಗಿ ಟಿಕೆಟ್ ನೀಡಲಾಗಿದೆ ಎಂದರು.

ಕೇವಲ 3 ತಿಂಗಳ ಅವಧಿಯಲ್ಲೇ ಎಂಇಪಿ ರಾಜ್ಯದ ಉದ್ದಗಲಕ್ಕೂ ಹೊಸ ಸಂಚಲನ ಮೂಡಿಸಿದ್ದು ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬರಲಿದೆ. ಭಾರತ ಬದಲಾಗಬೇಕು, ರಾಜಕೀಯದಲ್ಲಿ ಹೊಸ ನೀರು ಹರಿಯಬೇಕು. ದೇಶ ಎಂದೂ ಕೋಮುಜ್ವಾಲೆಯಲ್ಲಿ ಸಿಕ್ಕಿ ನರಳುವಂತಾಗಬಾರದು ಎಂದು ಹೇಳಿದರು.
ಜನರಿಂದ ನಾಯಕರಾಗುತ್ತಾರೆ ನಮ್ಮ ವಿರುದ್ಧ ಸ್ಪರ್ಧೆ ಮಾಡುವ ಅಭ್ಯರ್ಥಿಗಳು ಭಾರೀ ಹಣವಂತರಾಗಿದ್ದರೂ ಜನ ನಮ್ಮ ಸರಳತೆ, ಕಾರ್ಯಕ್ರಮ ನೋಡಿ ಎಂಇಪಿ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ ಜನ ಬಲದ ಮುಂದೆ ಹಣಬಲ ನಡೆಯುವುದಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಬೆಳಗಾವಿ, ಕಲಬುರಗಿ, ವಿಜಯಪುರ, ಬೀದರ್, ಕೊಪ್ಪಳ, ಗದಗ, ಧಾರವಾಡ, ಉತ್ತರಕನ್ನಡ, ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆ ಸೇರಿದಂತೆ ಇಪ್ಪತ್ತು ಜಿಲ್ಲೆಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.

ಉಳಿದ 10ಜಿಲ್ಲೆಗಳ ಅಭ್ಯರ್ಥಿಗಳ ಪಟ್ಟಿ ನಾಳೆ ಪ್ರಕಟವಾಗಲಿದೆ, . ಈಗ ಬಿಡುಗಡೆ ಮಾಡಿರುವ ಪಟ್ಟಿ ಅಂತಿಮವಾಗಿದ್ದು ಬದಲಾವಣೆಗೆ ಅವಕಾಶ ಇಲ್ಲ, ಒಂದು ವೇಳೆ ಅಪರಾಧ ಹಿನ್ನೆಲೆ ಪ್ರಕರಣಗಳು ಸಾಬೀತು ಆದಲ್ಲಿ ಅಂತಹ ಅಭ್ಯರ್ಥಿಗಳನ್ನು ಬದಲಾವಣೆ ಮಾಡಲಾಗುವುದು ಎಂದು ಹೇಳಿದರು.
ಒಟ್ಟಾರೆ 224 ಕ್ಷೇತ್ರಗಳ ಪೈಕಿ ಮಹಿಳೆಯರಿಗೆ 40, ದಲಿತರಿಗೆ 51, ರೈತರಿಗೆ 7 ಹಾಗೂ ತೃತೀಯ ಲಿಂಗಿಗೆ ಒಂದು ಟಿಕೆಟ್ ನೀಡಲಾಗುತ್ತಿದೆ ಎಂದು ವಿವರಿಸಿದರು.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ












Click it and Unblock the Notifications