ನಾಮಪತ್ರ ತಿರಸ್ಕಾರ: ಕಾನೂನು ಹೋರಾಟ ಎಂದ ನೌಹೀರಾ ಶೇಖ್
ಬೆಂಗಳೂರು, ಏಪ್ರಿಲ್ 25: ಎಂಇಪಿ ಅಭ್ಯರ್ಥಿಗಳು ಕೆಲವು ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಲು ಅವಕಾಶ ಮಾಡಿಕೊಡದೆ ಅಡ್ಡಿಪಡಿಸಿದವರ ವಿರುದ್ಧ ಕೋರ್ಟ್ ಮೆಟ್ಟಿಲೇರುವುದಾಗಿ ಎಂಇಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಡಾ.ನೌಹೀರಾ ಶೇಖ್ ಹೇಳಿದ್ದಾರೆ.
ನಗರದಲ್ಲಿ ಖಾಸಗಿ ಹೋಟೆಲ್ ಒಂದರಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನೌಹೀರಾ ಶೇಖ್, ಕೆಲವು ಕಡೆ ನಡೆದಿರುವ ಘಟನೆಗಳನ್ನು ನೋಡಿದರೆ ಸರ್ವಾಧಿಕಾರಿ ವರ್ತನೆ ಕಂಡುಬಂದಿದೆ ಇದನ್ನು ಬಲವಾಗಿ ಖಂಡಿಸುತ್ತೇನೆ. ನಿನ್ನೆ ರಾಜ್ಯದ ಐದು ಕಡೆಗಳಲ್ಲಿ ಎಂಇಪಿ ಅಭ್ಯರ್ಥಿಗಳು ನಾಮಪತ್ರಸಲ್ಲಿಸಲು ಅವಕಾಶ ಸಿಕ್ಕಿಲ್ಲ ಇದರ ವಿರುದ್ಧ ಪಕ್ಷ ಮುಖ್ಯಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಿದೆ ಎಂದರು.
ಯಾವ ಕಾರಣಕ್ಕಾಗಿ ಎಂಇಪಿ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅವಕಾಶ ಮಾಡಿಕೊಟ್ಟಿಲ್ಲ ಎಂಬುದರ ಬಗ್ಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಂದ ವರದಿ ಪಡೆದು ವಿವರ ನೀಡುವುದಾಗಿ ರಾಜ್ಯ ಮುಖ್ಯಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ಭರವಸೆ ಕೊಟ್ಟಿದ್ದಾರೆ.

ಅವರು ನೀಡುವ ವರದಿ ಆಧಾರದ ಮೇಲೆ ಎಂಇಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಿದವರ ವಿರುದ್ಧ ನ್ಯಾಯಲಯದಲ್ಲಿ ಮೊಕದ್ದಮೆ ದಾಖಲು ಮಾಡುವುದಾಗಿ ಅವರು ಹೇಳಿದರು.
ಮಂಗಳವಾರ ಬೆಳಗಾವಿ, ತುಮಕೂರಿನ ತುರುವೆಕೆರೆ, ಶಿರಾ, ಕೋಲಾರ ಜಿಲ್ಲೆಯ ಮಾಲೂರು, ರಾಮನಗರ ಜಿಲ್ಲೆಯ ಕನಕಪುರದಲ್ಲಿ ಎಂಇಪಿ ಅಭ್ಯರ್ಥಿಗಳು ನಾಮಪ್ತರ ಸಲ್ಲಿಸಲು ಕೆಲವರು ಅಡ್ಡಿಪಡಿಸಿದ್ದಾರೆ ಇದಕ್ಕೆ ಕಾರಣಾರದವರ ವಿರುದ್ಧ ಅಗತ್ಯ ಕ್ರಮ ಜರುಗಿಸುವಂತೆ ಮನವಿ ಮಾಡಲಾಗಿದೆ ಎಂದರು.
ದುಡ್ಡಿಯಿಲ್ಲದವರು, ಬಡವರು, ರೈತರು, ಕೂಲಿಕಾರರು ವಿಧಾನಸಭೆಗೆ ಮತ್ತು ಲೋಕಸಭೆಗೆ ಆಯ್ಕೆಯಾಗಿ ಬರಬೇಕು ಎಂಬ ಉದ್ದೇಶದಿಂದ ಎಂಇಪಿ ಸಮಾಜದ ಎಲ್ಲ ವರ್ಗ, ಸಮುದಾಯದವರಿಗೆ ಟಿಕೆಟ್ ಕೊಟ್ಟಿದೆ . ಬಿಜೆಪಿ ಪಟ್ಟಿಯನ್ನು ನೋಡಿದರೆ ಅವರು ಹೇಳುವ ಸಭ್ ಕಾ ಸಾತ್ ಸಬ್ ಕಾ ವಿಕಾಸ್ ನೀತಿ ಏನು ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ.
ಬಿಜೆಪಿ ಹೇಳುವುದೊಂದು ಮಾಡುವುದೊಂದು ಎಂಬುದು ಎಲ್ಲರಿಗೂ ಮನವರಿಕೆ ಆಗಿದೆ ಎಂದರು ಪ್ರಧಾನಿ ನರೇಂದ್ರ ಮೋದಿಯವರು ಅಮೇರಿಕಾ, ಲಂಡನ್, ದುಬೈ, ಅಬುದಾಬಿ ಸೇರಿದಂತೆ ಜಗತ್ತಿನ ದೊಡ್ಡ ದೊಡ್ಡ ನಗರಗಳಲ್ಲಿ ಭಾಷಣ ಮಾಡುತ್ತಾರೆ ಆದರೆ ಮಹಿಳೆಯರು ಮತ್ತು ಮಕ್ಕಳ ಮೇಲೆ ನಿತ್ಯವೂ ಅತ್ಯಾಚಾರ ಅನಾಚರ ಆಗುತ್ತಿರುವ ಬಗ್ಗೆ ಚಕಾರ ಎತ್ತುವುದಿಲ್ಲ ಇದು ಸರಿಯೇ?ಅವರಿಗೆ ಶೋಭೆ ತರುತ್ತದೆಯೇ ಎಂದು ಪ್ರಶ್ನೆ ಮಾಡಿದರು.
ಒಟ್ಟಾರೆ ಎಂಇಪಿ 52 ಮಹಿಳೆಯರಿಗೆ ಟಿಕೆಟ್ ನೀಡಿದೆ ಒಂದೆರೆಡು ದಿನದಲ್ಲಿ ತಾರಾ ಪ್ರಚಾರಕಾರ ಪಟ್ಟಿ ಬಿಡುಗಡೆ ಆಗಲಿದೆ ಇದೇ 26ರಿಂದ ಮೇ 10ರ ವರೆಗೂ ರಾಜ್ಯದ ಉದ್ದಾಗಲಕ್ಕೂ ಪ್ರವಾಸ ಮಾಡುವುದಾಗಿ ಹೇಳಿದರು.
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್












Click it and Unblock the Notifications