Metoo campaign: 2018ರಲ್ಲೇ ಅಭಿಯಾನ ಪ್ರಾರಂಭಿಸಿದ್ದ "ಫೈರ್", ಏನಿದರ ಹಿನ್ನೆಲೆ ?
kannada film industry |Fire: ಕನ್ನಡ ಚಿತ್ರರಂಗದಲ್ಲಿ ಮೀಟೂ ಅಭಿಯಾನ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಾರಿ ಮೀಟೂ ಅಭಿಯಾನ ಕನ್ನಡ ಚಿತ್ರರಂಗದಲ್ಲಿ ಭಾರೀ ಸಂಚನಲವನ್ನೇ ಮೂಡಿಸುವ ಸಾಧ್ಯತೆ ಇದೆ. ಈ ಬಾರಿ ಪ್ರಸಿದ್ಧ ನಟ, ನಟಿಯರು, ಕಲಾವಿದರು ಹಾಗೂ ಸಾಹಿತಿಗಳು ಸೇರಿದಂತೆ ನೂರಾರು ಜನ ಗಣ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಕೇರಳದಲ್ಲಿ ಹೇಮಾ ಕಮಿಟಿ ರಚನೆ ಮಾಡಿದ್ದ ಮಾದರಿಯಲ್ಲೇ ಇಲ್ಲೂ ಕಮಿಟಿಯೊಂದನ್ನು ರಚನೆ ಮಾಡಬೇಕು. ಕನ್ನಡ ಚಿತ್ರರಂಗವನ್ನು ಶುದ್ಧೀಕರಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಅದರಲ್ಲಿ "ಫೈರ್" ಮಹತ್ವದ ಪಾತ್ರ ವಹಿಸಿದೆ.
ಏನಿದು ಫೈರ್, ರಚನೆಯಾಗಿದ್ದು ಯಾವಾಗ ಮತ್ತು ಏಕೆ ?
ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಸೇರಿದಂತೆ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಿ, ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಬೇಕು ಎಂದು ಫೈರ್ ಸಂಸ್ಥೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಈ ಫೈರ್ (ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ) ಸಂಸ್ಥೆಯನ್ನು 2018ರಲ್ಲಿ ಶುರುಮಾಡಲಾಗಿತ್ತು. ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುವ ಮಹಿಳಾ ಶೋಷಣೆಯ ವಿರುದ್ಧವಾಗಿ ಕೆಲಸ ಮಾಡುವುದು ಈ ಸಂಸ್ಥೆಯ ಉದ್ದೇಶವಾಗಿದೆ. 2018ರಲ್ಲಿ ಕರ್ನಾಟಕದಲ್ಲೂ ಮೀಟೂ ಅಭಿಯಾನ ಜೋರಾಗಿತ್ತು.

ಆ ಸಂದರ್ಭಲ್ಲಿ ಮೀಟೂದ ಬಗ್ಗೆ ಪ್ರಖ್ಯಾತ ನಟಿ ಶ್ರುತಿ ಹರಿಹರನ್ ಅವರು ಮಾತನಾಡಿದ್ದರು. ಅಲ್ಲದೇ ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಮೇಲೆ ಮೀಟೂ ಆರೋಪವನ್ನು ಮಾಡಿದ್ದರು. ಈ ಅಭಿಯಾನಗಳಿಗೆ ನಟ ಚೇತನ್ ಸೇರಿದಂತೆ ಕೆಲವೇ ಕೆಲವು ಪ್ರಮುಖ ನಟ, ನಟಿಯರು ಬೆಂಬಲವಾಗಿ ನಿಂತಿದ್ದರು. ಈ ಫೈರ್ ಎನ್ನುವ ಸಂಸ್ಥೆಯು ನಟ ಚೇತನ್ ಅವರ ಕನಸಿನ ಕೂಸಾಗಿದ್ದು, ಇದಕ್ಕೆ ಹಲವರು ಬೆಂಬಲ ಸೂಚಿಸಿದ್ದಾರೆ. ಸಂಸ್ಥೆಯ ಮೂಲಕ ಗುರುತಿಸಿ ಕೊಂಡಿದ್ದಾರೆ.
ಮಲಯಾಳಂ ಫಿಲಂ ಇಂಡಸ್ಟ್ರಿ: ದೇಶದಲ್ಲಿ ಮೊದಲು ಪರ್ಯಾಯ ಸಂಘ
ದೇಶದಲ್ಲೇ ಮೊದಲ ಬಾರಿ ಎನ್ನುವಂತೆ ಮಲಯಾಳಂ ಚಿತ್ರರಂಗದಲ್ಲಿ ಮೀಟೂ ಅಭಿಯಾನ ಭಾರೀ ಸಂಚಲವನ್ನೇ ಮೂಡಿಸಿತ್ತು. ಮಲಯಾಳಂ ಚಿತ್ರರಂಗದ ಪ್ರಖ್ಯಾತ ನಟಿಯನ್ನು ಕೇರಳದ ಪ್ರಸಿದ್ಧ ನಗರವಾದ ಕೊಚ್ಚಿಯಲ್ಲಿ ಕೆಲವರು ಲೈಂಗಿಕ ದೌರ್ಜನ್ಯ ಎಸಗಿದ್ದರು. ಆ ಸಂಕಷ್ಟದ ಸಂದರ್ಭದಲ್ಲಿ ಅಮ್ಮಾ (ಅಸೋಸಿಯೇಷನ್ ಆಫ್ ಮಲೆಯಾಳಂ ಮೂವಿ ಆರ್ಟಿಸ್ಟ್)ನಿಂದ ನಿರೀಕ್ಷಿತ ನೆರವು ಸಿಗಲಿಲ್ಲ ಎನ್ನುವ ಆರೋಪ ಇದೆ. ಇದಾದ ಕೆಲವೇ ದಿನಗಳಲ್ಲಿ ಕೇರಳದ ಪ್ರಮುಖ ನಟಿಯರಿಂದಲೇ ವಿಮೆನ್ ಇನ್ ಸಿನಿಮಾ ಕಲೆಕ್ಟಿವ್ (wcc) ರಚನೆಯಾಯಿತು.
ಈ ಅಸೋಸಿಯೇಷನ್ ಮಹಿಳೆಯರ ಮೇಲಿನ ದೌರ್ಜನ್ಯಗಳ ಬಗ್ಗೆ ಮಾತನಾಡಲು ಪ್ರಾರಂಭಿಸಿತು. ಹೋರಾಟಕ್ಕೆ ಇಳಿಯಿತು. ನಿರ್ದಿಷ್ಟವಾಗಿ ಕನ್ನಡ ಚಿತ್ರರಂಗದಲ್ಲೂ 2017 -18ನೇ ವರ್ಷದ ಅವಧಿಯಲ್ಲಿ ಇದೇ ಮಾದರಿಯ ಹೋರಾಟಗಳು ನಡೆದಿದ್ದವು. ಆ ಹೋರಾಟದ ನಂತರ ಸೃಷ್ಟಿಯಾಗಿದ್ದೇ ಫೈರ್ ಎನ್ನುವ ಸಂಸ್ಥೆ. ನಟ ಚೇತನ್ ಅವರು ಈ ಸಂಸ್ಥೆ ಹಾಗೂ ಅಭಿಯಾನವನ್ನು ಮುಂದುವರಿಸಿದ್ದು. ಕನ್ನಡ ಚಿತ್ರರಂಗದಲ್ಲಿ ಮಹಿಳೆಯರ ಮೇಳೆ ಆಗುತ್ತಿರುವ ಶೋಷಣೆಯನ್ನು ತಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications