#MeToo ಆರೋಪ: ಬೆಂಗಳೂರಿನ ಐಐಎಸ್ಸಿ ಪ್ರೊಫೆಸರ್ಗೆ ಕಡ್ಡಾಯ ನಿವೃತ್ತಿ ಶಿಕ್ಷೆ
ಬೆಂಗಳೂರು, ಅಕ್ಟೋಬರ್ 31: ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ತನ್ನ ಹಿರಿಯ ಪ್ರೊಫೆಸರ್ ಒಬ್ಬರಿಗೆ ಕಡ್ಡಾಯ ನಿವೃತ್ತಿ ಪಡೆದುಕೊಳ್ಳುವಂತೆ ಆದೇಶಿಸಿದೆ.
ಸುದೀರ್ಘ ಕಾಲದಿಂದ ಐಐಎಸ್ಸಿ ಫ್ಯಾಕಲ್ಟಿ ಆಗಿರುವ ಪ್ರೊಫೆಸರ್ ಗಿರಿಧರ್ ಮದ್ರಾಸ್ ಜಗತ್ತಿನಲ್ಲಿ ಅತಿ ಹೆಚ್ಚು ವಿಜ್ಞಾನ ಸಂಬಂಧಿ ವಿಚಾರಗಳಲ್ಲಿ ಉಲ್ಲೇಖಕ್ಕೆ ಒಳಗಾಗುವ ಕೆಲವೇ ಪ್ರಮುಖ ವಿಜ್ಞಾನಿಗಳಲ್ಲಿ ಒಬ್ಬರಾಗಿದ್ದಾರೆ.
ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದ್ದು, ಅದರ ವಿಚಾರಣೆಗಾಗಿ ಐಐಎಸ್ಸಿ, ಸಮಿತಿಯೊಂದನ್ನು ರಚಿಸಿತ್ತು.

1988ರಲ್ಲಿ ಅಣ್ಣಾಮಲೈ ವಿಶ್ವವಿದ್ಯಾಲಯದಲ್ಲಿ ಕೆಮಿಕಲ್ ಎಂಜಿನಿಯರಿಂಗ್ ಬಿಇ ಪೂರೈಸಿದ ಗಿರಿಧರ್, 1989ರಲ್ಲಿ ಐಐಟಿ ಮದ್ರಾಸ್ನಿಂದ ಎಂಟೆಕ್ ಪದವಿ ಪಡೆದರು. 1993ರಲ್ಲಿ ಟೆಕ್ಸಾಸ್ ಎ&ಎಂ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಪಡೆದು ಬಳಿಕ ಐಐಎಸ್ಸಿ ಸೇರಿದ್ದರು.
ಗಿರಿಧರ್ ಅವರನ್ನು ವಿಚಾರಣೆಗೆ ಒಳಪಡಿಸಿದ ಸಮಿತಿಯು ಅವರನ್ನು ಕಡ್ಡಾಯ ನಿವೃತ್ತಿ ಪಡೆದುಕೊಳ್ಳುವಂತೆ ಆದೇಶಿಸಿದೆ ಎಂದು ಐಐಎಸ್ಸಿ ನಿರ್ದೇಶಕ ಪ್ರೊಫೆಸರ್ ಅನುರಾಗ್ ಕುಮಾರ್ ತಿಳಿಸಿದ್ದಾರೆ. ಆದರೆ, ಅವರು ಹೆಚ್ಚಿನ ವಿವರ ನೀಡಿಲ್ಲ.
ಗಿರಿಧರ್ ಅವರಿಗೆ ನಿವೃತ್ತಿ ನಂತರದ ಸೌಲಭ್ಯಗಳು ದೊರಕಲಿವೆಯೇ, ಭವಿಷ್ಯದಲ್ಲಿ ಬೇರೆ ರೀತಿಯಲ್ಲಿ ಸಂಸ್ಥೆಯೊಂದಿಗೆ ಅವರು ಸಂಪರ್ಕ ಹೊಂದಬಹುದೇ ಎಂಬುದು ತಿಳಿದಿಲ್ಲ.
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ಆರೋಪದಲ್ಲಿ ಪ್ರೊಫೆಸರ್ ತಪ್ಪಿತಸ್ಥರೆಂಬುದು ಕಂಡುಬಂದಿತ್ತು.
ಸಮಿತಿಯು ಇನ್ನೂ ಇತರೆ ಪ್ರಕರಣಗಳಲ್ಲಿ ತೀರ್ಪು ನೀಡಿದೆ. ಅವೆಲ್ಲವೂ ಹಳೆಯ ಪ್ರಕರಣಗಳು. ಇದು ಮಾತ್ರ ಇತ್ತೀಚಿನ ಪ್ರಕರಣ. ಹಳೆಯ ಪ್ರಕರಣಗಳ ಬಗ್ಗೆ ನಾನು ಮಾತನಾಡಲು ಬಯಸುವುದಿಲ್ಲ. ಸಂಸ್ಥೆಯು ಇಂತಹ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ಮತ್ತು ದಕ್ಷ ವ್ಯವಸ್ಥೆ ಹೊಂದಿದೆ. ಯಾರ ದೂರನ್ನೂ ನಿರ್ಲಕ್ಷಿಸುವುದಿಲ್ಲ ಎಂದು ಅನುರಾಗ್ ಕುಮಾರ್ ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications