''ಸಿದ್ದರಾಮಯ್ಯ 2 ವರ್ಷ ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ಪತ್ರ ಬರೆಯಲಿ''
ಬೆಂಗಳೂರು: ಮೆಟ್ರೊ ಟಿಕೆಟ್ ದರ ಏರಿಕೆಯಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ. ಒಂದು ವೇಳೆ ಕೇಂದ್ರ ಸರ್ಕಾರದಿಂದ ದರ ಏರಿಕೆ ಆಗುವುದಿದ್ದರೆ, ಮುಂದಿನ 2 ವರ್ಷ ದರ ಏರಿಕೆಯನ್ನು ಒಪ್ಪಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸವಾಲು ಹಾಕಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಮೆಟ್ರೊದಲ್ಲಿ ಶೇಕಡಾ 87 ರಷ್ಟು ಪಾಲು ರಾಜ್ಯ ಸರ್ಕಾರದ್ದಾಗಿದೆ ಎಂದು ಕಾಂಗ್ರೆಸ್ ಸರ್ಕಾರ ಹೇಳಿಕೊಳ್ಳುತ್ತದೆ. ಆದರೆ ಟಿಕೆಟ್ ದರ ಏರಿಕೆ ಮಾಡಿದ್ದು ಮಾತ್ರ ಕೇಂದ್ರ ಸರ್ಕಾರವೆಂದು ಆರೋಪಿಸಿದೆ. ಬಿಎಂಆರ್ಸಿಎಲ್ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನು ರಾಜ್ಯ ಸರ್ಕಾರದಿಂದಲೇ ನೇಮಿಸಲಾಗಿದೆ. ಸಾವಿರಾರು ಕೋಟಿ ರೂ. ಟೆಂಡರ್ ಅನ್ನು ರಾಜ್ಯ ಸರ್ಕಾರದಿಂದ ಕರೆಯಲಾಗುತ್ತದೆ. ರಾಜ್ಯ ಆರ್ಥಿಕ ಇಲಾಖೆ, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು ಟೆಂಡರ್ ಅಂತಿಮಗೊಳಿಸುತ್ತಾರೆ. ಇಷ್ಟೆಲ್ಲ ಅಧಿಕಾರವಿರುವಾಗ, ದರ ಏರಿಕೆಯನ್ನೂ ಇವರೇ ಮಾಡಿದ್ದಾರೆ. ಕೇಂದ್ರ ಸರ್ಕಾರ ಆದೇಶ ಮಾಡಿದರೆ ಎಲ್ಲ ಮೆಟ್ರೊ ನಿಗಮಗಳಲ್ಲೂ ಟಿಕೆಟ್ ದರ ಏರಿಕೆಯಾಗಬೇಕಾಗುತ್ತದೆ ಎಂದು ಅವರು ವಿವರಿಸಿದರು. ಜೊತೆಗೆ ಕೇಂದ್ರದ ಮೇಲಿನ ಆರೋಪವನ್ನು ಅವರು ತಳ್ಳಿ ಹಾಕಿದರು.

ಸಮಿತಿ ಕೇಂದ್ರಕ್ಕೆ ಶಿಫಾರಸು ಮಾಡಲ್ಲ
ಫೇರ್ ಫಿಕ್ಸೇಶನ್ ಕಮಿಟಿ ಸ್ವತಂತ್ರ ಸಮಿತಿಯಾಗಿದೆ. ನಿವೃತ್ತ ನ್ಯಾಯಧೀಶರು, ರಾಜ್ಯ ಸರ್ಕಾರ ಪ್ರಧಾನ ಕಾರ್ಯದರ್ಶಿ ಹಾಗೂ ಕೇಂದ್ರ ಸರ್ಕಾರದ ಒಬ್ಬ ಪ್ರತಿನಿಧಿ ಇರುತ್ತಾರೆ. ಈ ಸಮಿತಿ ದರ ಏರಿಕೆ ಶಿಫಾರಸನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸುವುದಿಲ್ಲ. ಕಳೆದ ವರ್ಷ ಇದೇ ಸಮಿತಿ 100ರಷ್ಟು ದರ ಏರಿಕೆಗೆ ಶಿಫಾರಸು ಮಾಡಿತ್ತು. ಜೊತೆಗೆ ಪ್ರತಿ ವರ್ಷ ಶೇ.5ರಷ್ಟು ಹೆಚ್ಚು ಮಾಡಬಹುದೆಂದು ಹೇಳಿದೆ. ಈ ಸಮಿತಿ ಬಿಎಂಆರ್ಸಿಎಲ್ನ ವ್ಯವಸ್ಥಾಪಕ ನಿರ್ದೇಶಕ ರವಿಶಂಕರ್ಗೆ ಶಿಫಾರಸು ನೀಡಿದೆ. ಅಧಿಕಾರಿ ರವಿಶಂಕರ್ ದರ ಏರಿಕೆಗೆ ಮುನ್ನ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಲ್ಲ. ದರ ಏರಿಕೆಯ ನಿರ್ಧಾರವನ್ನು ಈ ಅಧಿಕಾರಿ ಹಾಗೂ ಸರ್ಕಾರವೇ ಮಾಡಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವೇ ಇಲ್ಲ ಎಂದು ತಿಳಿಸಿದರು.
ಸಿದ್ದರಾಮಯ್ಯ 2 ಮೆಟ್ರೋ ದರ ಏರಿಕೆ ವಿರೋಧಿಸಲಿ
ಒಂದು ವೇಳೆ ಕೇಂದ್ರ ಸರ್ಕಾರವೇ ದರ ಏರಿಕೆ ಮಾಡಿದ್ದರೆ, ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮುಂದಿನ ಎರಡು ವರ್ಷ ದರ ಏರಿಕೆಗೆ ನಾವು ವಿರೋಧಿವಿದ್ದೇವೆ ಎಂದು ತಿಳಿಸಲಿ. ಇದನ್ನು ಮಾಡುವುದು ಬಿಟ್ಟು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು ಬೇಕಿಲ್ಲ. 2025 ರ ಫೆಬ್ರವರಿಯಲ್ಲಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ದರ ಇಳಿಕೆಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದರು. ಹಾಗಾದರೆ ರಾಜ್ಯ ಸರ್ಕಾರಕ್ಕೆ ಈ ಅಧಿಕಾರ ಹೇಗೆ ಬಂದಿದೆ? ಸರ್ಕಾರ ಪಾಪರ್ ಆಗಿರುವುದರಿಂದ ಟಿಕೆಟ್ ದರ ಏರಿಸಲಾಗಿದೆ ಎಂದು ವ್ಯಂಗ್ಯವಾಡಿದರು.
ಎಂಡಿ ನೇಮಕ ಕೇಂದ್ರವೇ ಮಾಡಲಿ ಬಿಡಿ
ಕೇಂದ್ರ ಸರ್ಕಾರಕ್ಕೆ ದರ ಏರಿಕೆಯ ಅಧಿಕಾರ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳುವುದಾದರೆ, ಇನ್ನು ಮುಂದೆ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಿಸುವ ಅಧಿಕಾರವನ್ನು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ನೀಡಬೇಕು. ಟೆಂಡರ್ಗಳನ್ನು ಕರೆಯುವ ಹಾಗೂ ವರ್ಗಾವಣೆಯ ಅಧಿಕಾರವನ್ನು ಕೇಂದ್ರಕ್ಕೆ ನೀಡಬೇಕು. ನಾನು ಕೇಂದ್ರದ ಸಚಿವರೊಂದಿಗೆ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ಟಿಕೆಟ್ ದರ ಏರಿಕೆಯಿಂದ ತೊಂದರೆಯಾಗುತ್ತದೆ ಹಾಗೂ ಇದನ್ನು ತನಿಖೆ ಮಾಡಿ ಎಂದು ಹೇಳಿದ್ದೇನೆ. ಕೇಂದ್ರ ಸರ್ಕಾರ ಜನರ ಪರವಾಗಿ ಧ್ವನಿ ಎತ್ತಿ ದರ ಏರಿಕೆಯನ್ನು ತಡೆ ಹಿಡಿದಿದೆ ಎಂದು ಹೇಳಿದರು.
ಪ್ರಧಾನಿ ಕರೆದ ಒಂದು ಸಭೆಗೂ ರಾಜ್ಯ ಸರ್ಕಾರದಿಂದ ಯಾರೂ ಹೋಗಿಲ್ಲ. ಜಿಎಸ್ಟಿಯಲ್ಲಿ ರಾಜ್ಯಕ್ಕೆ ಎಷ್ಟು ಹಣ ಬಂದಿದೆ, ರೈಲ್ವೆ, ಹೆದ್ದಾರಿ, ಇಂಧನ, ಗ್ರಾಮೀಣಾಭಿವೃದ್ಧಿ, ಕೃಷಿ ಮೊದಲಾದ ಕ್ಷೇತ್ರಗಳಲ್ಲಿ ಎಷ್ಟು ಹಣ ಬಂದಿದೆ ಎಂದು ಶ್ವೇತಪತ್ರ ಹೊರಡಿಸಲಿ. ರೈಲು ಯೋಜನೆಗಳಲ್ಲಿ ಭೂ ಸ್ವಾಧೀನ ಮಾಡಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲದೆ, ಯೋಜನೆಗಳು ಮುಂದುವರಿಯುತ್ತಿಲ್ಲ. ಈ ಹಿಂದೆ ಮನಮೋಹನ್ ಸಿಂಗ್ ಅವಧಿಯಲ್ಲಿ ಎಷ್ಟು ಹಣ ಬಂದಿದೆ ಎಂದು ಬಹಿರಂಗಪಡಿಸಬೇಕು. ಈ ಬಗ್ಗೆ ನಾನು ಹತ್ತು ಬಾರಿ ಕೇಳಿದ್ದರೂ ಮಾಹಿತಿ ನೀಡಿಲ್ಲ ಎಂದು ಕಿಡಿ ಕಾರಿದರು.
ರಾಜ್ಯದ ಸಾಲ 2 ಲಕ್ಷ ಕೋಟಿ ರೂ.
ಈಗಾಗಲೇ ರಾಜ್ಯದ ಸಾಲ 2 ಲಕ್ಷ ಕೋಟಿ ರೂ. ದಾಟಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 2-3 ಸಾವಿರ ರೇಷನ್ ಕಾರ್ಡ್ಗಳು ರದ್ದಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಜಿಎಸ್ಟಿ ವಿಧಿಸಿ ಸೌಲಭ್ಯಗಳನ್ನು ಕಿತ್ತುಕೊಳ್ಳಲಾಗಿದೆ. ಮುಂದೆ ಇನ್ನಷ್ಟು ಯೋಜನೆಗಳು ಕಡಿತಗೊಳ್ಳಲಿವೆ ಎಂದು ಭವಿಷ್ಯ ನುಡಿದರು.
ದುರ್ಬಲ ಕಾಂಗ್ರೆಸ್ ಹೈಕಮಾಂಡ್
ಸಿಎಂ ಕುರ್ಚಿ ಕಿತ್ತಾಟದ ನಡುವೆ ಆಡಳಿತ ಗೊಂದಲದ ಗೂಡಾಗಿದೆ. ಕಾಂಗ್ರೆಸ್ ಹೈಕಮಾಂಡ್ ದುರ್ಬಲವಾಗಿದ್ದು, ಇತ್ತ ಕಡೆ ಯಾರೂ ನೋಡುತ್ತಿಲ್ಲ. ನಿಗಮಗಳ ಅಧ್ಯಕ್ಷರಿಗೆ ಸಚಿವ ಸಂಪುಟ ಸ್ಥಾನಮಾನ ನೀಡುವ ಮೂಲಕ ಪ್ರತಿ ವರ್ಷ 40-50 ಕೋಟಿ ರೂ. ದುರ್ಬಳಕೆಯಾಗುತ್ತದೆ. ಗೃಹಲಕ್ಷ್ಮಿಯ ಎರಡು ತಿಂಗಳ, ಅನ್ನಭಾಗ್ಯದ ಒಂದು ತಿಂಗಳ ಹಣ ನೀಡಿಲ್ಲ. ಆದರೆ ಕಾಂಗ್ರೆಸ್ ಪಕ್ಷದ ಮೋಜು ಮಸ್ತಿಗೆ ಹಣ ನೀಡಲಾಗುತ್ತಿದೆ. ಕೂಡಲೇ ಈ ಆದೇಶ ರದ್ದು ಮಾಡಬೇಕು ಎಂದು ಆಗ್ರಹಿಸಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎಂಬುದು ಸುಳ್ಳು: ವಿರೋಧ ಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು











Click it and Unblock the Notifications