Bengaluru Metro: ಮೆಟ್ರೋ ದರ ಏರಿಕೆ ನಿರ್ಧಾರ ಮಾಡೋರು ಇವರೇ ನೋಡಿ: ರಾಮಲಿಂಗಾ ರೆಡ್ಡಿ
ಬೆಂಗಳೂರು: ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆಗೆ ತಡೆ ಬಿದ್ದಿದೆ. ಆದರೆ ಜನಪ್ರತಿನಿಧಿಗಳ ನಡುವಿನ ವಾಕ್ಸಮರಕ್ಕೆ, ಸಮರ್ಥನೆಯ ನಡೆ, ಆಕ್ರೋಶ ವ್ಯಕ್ತಪಡಿಸುವುದು ನಿಂತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ, ಡಿಸಿಎಂ ಡಿಕೆ ಶಿವಕುಮಾರ್ ಬೆನ್ನಲ್ಲೆ ಇದೀಗ ಸಚಿವ ರಾಮಲಿಂಗಾ ರೆಡ್ಡಿ ಅವರು ಪ್ರತಿಕ್ರಿಯಿಸಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದು, ಸಮಿತಿ ರಚನೆ, ದರ ಏರಿಕೆ ಯಾರು ಮಾಡುತ್ತಾರೆಂದು ವಿವರಿಸಿದ್ದಾರೆ.
ಬೆಂಗಳೂರು ಮೆಟ್ರೋ (BMRCL) ಪ್ರಯಾಣ ದರ ಏರಿಕೆ ಮಾಡುವ ಪ್ರಸ್ತಾವನೆಯು ಕೇಂದ್ರ ಸರ್ಕಾರದ ಅಧೀನಕ್ಕೆ ಬರುತ್ತದೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ ಎಂದು ಅವರು ಟ್ವಿಟ್ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ದರ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರವು 'ದರ ನಿಗದಿ ಸಮಿತಿ'ಯನ್ನು (Fare Fixation Committee) ರಚಿಸುತ್ತದೆ. ಈ ಸಮಿತಿಯು ನೀಡುವ ವರದಿಯ ಆಧಾರದ ಮೇಲೆ ದರಗಳು ನಿರ್ಧಾರವಾಗುತ್ತವೆ.

ಪ್ರತಿಪಕ್ಷಗಳು ಮೆಟ್ರೋ ದರ ಏರಿಕೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರವನ್ನು ಟೀಕಿಸುತ್ತಿರುವುದು ಸರಿಯಲ್ಲ. ಈ ಪ್ರಕ್ರಿಯೆಯು ಸಂಪೂರ್ಣವಾಗಿ ತಾಂತ್ರಿಕ ಮತ್ತು ಕೇಂದ್ರದ ನಿಯಮಾವಳಿಗಳಿಗೆ ಒಳಪಟ್ಟಿರುತ್ತದೆ. ಕೆಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಮೆಟ್ರೋ ಯೋಜನೆ ಆರಂಭ, ಉಸ್ತುವಾರಿ, ದರ ಏರಿಕೆ ಬರುತ್ತದೆ. ದೇಶದ ಎಲ್ಲ ಮೆಟ್ರೋಗಳಿಗೆ ಕೇಂದ್ರದ ನಗರಾಭಿವೃದ್ಧಿ ಸಚಿವಾಲಯದ ಪ್ರಧಾನ ಕಾರ್ಯದರ್ಶಿಗಳು ಮೆಟ್ರೋ ಮಂಡಳಿಯ ಅಧ್ಯಕ್ಷರಾಗಿರತ್ತಾರೆ.
ಮೆಟ್ರೋ ಮಂಡಳಿ ದರ ನಿಗದಿ ಸಮಿತಿ ರಚಿಸುತ್ತದೆ. ಈ ಸಮಿತಿಯ ಮುಖ್ಯಸ್ಥರ ಶಿಫಾರಸು, ಖರ್ಚು ವೆಚ್ಚಗಳನ್ನು ನೋಡಿ ಅವರು ದರ ಏರಿಕೆ ನಿರ್ಧಾರ ಮಾಡುತ್ತಾರೆ. ಈ ಸಮಿತಿಗೆ ಒಬ್ಬರು ರಾಜ್ಯದಿಂದ ಮತ್ತು ಇಬ್ಬರು ಕೇಂದ್ರ ವ್ಯಾಪ್ತಿಯ ಸದಸ್ಯರನ್ನು ಕೇಂದ್ರ ಸರ್ಕಾರವೇ ನೇಮಿಸುತ್ತದೆ. ಬೆಂಗಳೂರು ಮೆಟ್ರೋ ದರ ಏರಿಕೆಯನ್ನು ಇವರೇ ತೀರ್ಮಾನಿಸಿದ್ದಾರೆ. ಕೇಂದ್ರದ ನಗರಾಭಿವೃದ್ಧಿ ಇಲಾಖೆಯವರೇ ಅಂತಿಮ ನಿರ್ಧಾರ ಕೈಗೊಂಡಿರುತ್ತಾರೆ ಎಂದು ತಿಳಿಸಿದರು.
ದರ ಏರಿಕೆ ಸಮಿತಿ ಸದಸ್ಯರು ಹೆಸರು
ಬಿಎಂಆರ್ಸಿಎಲ್ ಮೆಟ್ರೋ ದರ ನಿಗದಿಗಾಗಿ ರಚಿಸಲಾಗಿದ್ದ ತ್ರಿಸದಸ್ಯ ಸಮಿತಿಯ ಸದಸ್ಯರಾಗಿ ಮದ್ರಾಸ್ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳು ನ್ಯಾಯಮೂರ್ತಿ ಆರ್. ಥಾರಣಿ ಅವರು ದರ ಏರಿಕೆ ಈ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗಳು ಸತೀಂದರ್ ಪಾಲ್ ಸಿಂಗ್ ಹಾಗೂ ಕರ್ನಾಟಕ ಸರ್ಕಾರದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಡಾ. ಇ.ವಿ. ರಮಣರೆಡ್ಡಿ (Retired IAS officer) ಅವರು ಸಮೀತಿಯಲ್ಲಿದ್ದಾರೆ. ಅವರು ನಿರ್ಧಾರ ಮಾಡಿದ ಬಳಿಕ ದರ ಏರಿಕೆ ಆಗುತ್ತದೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರ ಇಲ್ಲ. ಸುಖಾಸುಮ್ಮನೆ ನಮ್ಮ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.
ವಾರ್ಷಿಕ ಶೇ.5ರಷ್ಟು ದರ ಏರಿಕೆ ಮಾಡಬೇಕೆಂಬ ಸಮಿತಿ ನಿರ್ಧಾರದಂತೆ ಇದೇ ಫೆ.09ರಿಂದ ಬಿಎಂಆರ್ಸಿಎಲ್ ಟಿಕೆಟ್ ಬೆಲೆ ಹೆಚ್ಚಳ ಜಾರಿಗೆ ಮುಂದಾಗಿತ್ತು. ತೀವ್ರ ಆಕ್ಷೇಪಣೆ, ವಿರೋಧ ಕೇಳಿ ಬಂದ ಬಳಿಕ ತಾತ್ಕಾಲಿಕವಾಗಿ ನಿರ್ಧಾರದಿಂದ ಹಿಂದೆ ಸರಿದಿದೆ. ಬಿಜೆಪಿ ನಾಯಕರು ಶಾಶ್ವತವಾಗಿ ಈ ನಿರ್ಧಾರ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.
-
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ











Click it and Unblock the Notifications